ನವದೆಹಲಿ : ಇಂದು ಸಹ ದೆಹಲಿ ಹಿಂಸಾಚಾರ ರಾಜ್ಯಸಭೆಯ ಕಲಾಪವನ್ನು ನುಂಗಿ ಹಾಕಿದೆ. ಇಂದು ಕಲಾಪ ಆರಂಭವಾಗುತ್ತಿದ್ದಂಯೆ ವಿಪಕ್ಷಗಳು ದೆಹಲಿ ಹಿಂಸಾಚಾರ ಪ್ರಕರಣವನ್ನು ಪ್ರಸ್ತಾಪಿಸಲು ಮುಂದಾದರು. ಇದರಿಂದ ಗದ್ದಲ, ಕೋಲಾಹಲ ಉಂಟಾಗಿದ್ದರಿಂದ ಕಲಾಪವನ್ನು ನಾಳೆಗೆ ಮುಂದೂಡಿಕೆ ಮಾಡಲಾಗಿದೆ. ರಾಜ್ಯಸಭೆಯ ಕಲಾಪ ಇಂದು ಬೆಳಿಗ್ಗೆ 11ಕ್ಕೆ ಆರಂಭವಾಗುತ್ತಿದ್ದಂತೆ, ವಿರೋಧ ಪಕ್ಷಗಳು ದೆಹಲಿ ಹಿಂಸಾಚಾರ ಪ್ರಕರಣ ಕುರಿತಂತೆ ಚರ್ಚೆ ನಡೆಸಲು ಅವಕಾಶ ನೀಡುವಂತೆ ಬಿಗಿ ಪಟ್ಟು ಹಿಡಿದವು. ಆದ್ರೆ ರಾಜ್ಯ ಸಭೆ ಸ್ಪೀಕರ್ ವೆಂಕಯ್ಯನಾಯ್ಡು, ಶೂನ್ಯ ವೇಳೆಯಲ್ಲಿ ಇದಕ್ಕೆ ಅವಕಾಶ ಮಾಡಿಕೊಡುವುದಾಗಿ ಭರವಸೆ ನೀಡಿದ್ರು.
ಸ್ಪೀಕರ್ ಭರವಸೆಗೆ ಒಪ್ಪದ ವಿಪಕ್ಷಗಳ ನಾಯಕರು, ಸದಸ್ಯರು ರಾಜ್ಯಸಭೆಯಲ್ಲಿ ಗದ್ದಲವನ್ನು ಆರಂಭಿಸಿದವು. ಅಲ್ಲದೇ ಕೇಂದ್ರ ಸರ್ಕಾರ, ಅಮಿತ್ ಶಾ ವಿರುದ್ಧ ಘೋಷಣೆ ಕೂಗಿದ್ರು.. ಹೀಗಾಗಿ ಅನಿವಾರ್ಯವಾಗಿ ರಾಜ್ಯಸಭೆಯ ಕಲಾಪವನ್ನು ಸ್ಪೀಕರ್ ನಾಳೆಗೆ ಮುಂದೂಡಿದ್ರು.
ಅಮಿತ್ ಶಾ ಗೂಂಡಾ, ರೌಡಿ; ಯತೀಂದ್ರ ಸಿದ್ದರಾಮಯ್ಯ
ಚಾಮರಾಜನಗರ: ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಸಚಿವ ಅಮಿತ್ ಶಾ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹನೂರು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು,...