ಬೆಂಗಳೂರು: ಪೊಲೀಸರು ಅಪಹರಣಕ್ಕೆ ಒಳಗಾಗಿದ್ದ ವ್ಯಕ್ತಿಯನ್ನು ರಕ್ಷಿಸಿ, ಕಾರಣರಾದವರನ್ನು ಬಂಧಿಸಿದ್ದಾರೆ.
ಹಣಕಾಸಿನ ವಿಚಾರದಲ್ಲಿ ವ್ಯಕ್ತಿಯನ್ನು ಅಪಹರಿಸಲಾಗಿತ್ತು ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ರಾಮನಗರ ಪೊಲೀಸರು, ನಾಲ್ವರನ್ನು ಬಂಧಿಸಿದ್ದಾರೆ. ಉದ್ಯಮಿ ಅಭಿಲಾಷ್ ಅಪಹರನಕ್ಕೆ ಒಳಗಾದ ವ್ಯಕ್ತಿ ಎನ್ನಲಾಗಿದೆ. ಇವರನ್ನು ಬೆಂಗಳೂರಿನಿಂದ ಅಪಹರಣಕ್ಕೆ ಒಳಗಾಗಿದ್ದರು. ನಂತರ ಆ ಉದ್ಯಮಿಯನ್ನು ಕರೆತಂದು ರಾಮನಗರದ ಗೋಡೌನ್ ನಲ್ಲಿ ಇರಿಸಿದ್ದರು ಎನ್ನಲಾಗಿದೆ.
ಒಂದೂವರೆ ಕೋಟಿ ಹಣದ ವಿಚಾರವಾಗಿ 10 ಜನರ ಗುಂಪು ಅಪಹರಿಸಿ ಹಲ್ಲೆ ನಡೆಸಿತ್ತು ಎನ್ನಲಾಗಿದೆ. ಅಭಿಲಾಷ್ ಕುತ್ತಿಗೆಗೆ ಚಾಕು ಇಟ್ಟು 50 ಲಕ್ಷ ರೂ. ಹಣ ನೀಡುವಂತೆ ಧಮ್ಕಿ ಹಾಕಿದ್ದರು ಎನ್ನಲಾಗಿದೆ. ಅಭಿಲಾಷ್ ತಲೆಗೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ್ದು, ಪತ್ನಿ, ತಂದೆಗೆ ಕರೆ ಮಾಡಿ 50 ಲಕ್ಷ ರೂ.ಗೆ ಒತ್ತಾಯ ಮಾಡಿದ್ದರು ಎನ್ನಲಾಗಿದೆ.
ಅಪಹರಣಕಾರರು ಊಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಅಭಿಷೇಕ್, ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಮೊಬೈಲ್ ನಂಬರ್ ಟ್ರ್ಯಾಕ್ ಮಾಡಿ ಅಭಿಷೇಕ್ನನ್ನು ರಕ್ಷಿಸಿ, ನಾಲ್ವರನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ.