ಬೆಂಗಳೂರು: ಪಾದರಾಯನಪುರ ಗಲಾಟೆಯಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರೋ ಅವರು, ” ಪಾದರಾಯನಪುರದಲ್ಲಿ ನಡೆದಿರುವ ಗಲಭೆ ಅತ್ಯಂತ ದುರದೃಷ್ಟಕರ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ತಡೆಯಬೇಕಾದರೆ ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಸಿಎಂ ಯಡಿಯೂರಪ್ಪ ಅವರನ್ನು ಒತ್ತಾಯಿಸುತ್ತೇನೆ”.
” ಕೊರೊನಾ ಸೋಂಕಿನಿಂದ ನಮ್ಮನ್ನು ರಕ್ಷಿಸಲು ವೈದ್ಯಕೀಯ ಮತ್ತು ಪೊಲೀಸ್ ಸಿಬ್ಬಂದಿ ಆರೋಗ್ಯವನ್ನು ಪಣಕ್ಕಿಟ್ಟು ಶ್ರಮಿಸುತ್ತಿದ್ದಾರೆ. ಅವರಿಗೆ ಸಹಕರಿಸುವುದು ನಮ್ಮ ಕರ್ತವ್ಯ. ಗಾಳಿ ಸುದ್ದಿಯಿಂದ ಪ್ರಚೋದನೆಗೊಳಗಾಗದೆ ಜನ ಸಂಯಮದಿಂದ ವರ್ತಿಸಬೇಕೆಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇನೆ”ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿರುವ ನೈಸ್ ರಸ್ತೆಯಲ್ಲಿ (BMICP) ಯಾವುದೇ ನಿಯಮಾವಳಿಗಳಿಲ್ಲದೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್ ವಸೂಲಿಯನ್ನು ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಬೇಕು ಎಂದು ಕೇಂದ್ರ ಸಚಿವ...








