ADVERTISEMENT
Tuesday, January 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರಿಕೆಟ್

ಆಯ್ಕೆ ಸಮಿತಿಗೆ ನಾಚಿಕೆಯಾಗಬೇಕು ಮೊಹಮ್ಮದ್ ಶಮಿಗೆ ಅನ್ಯಾಯವಾಗುತ್ತಿದೆ ಎಂದು ಗುಡುಗಿದ ಹೆಡ್‌ ಕೋಚ್

The selection committee should be ashamed of themselves, the head coach said, saying that injustice is being done to Mohammed Shami.

Shwetha by Shwetha
January 5, 2026
in ಕ್ರಿಕೆಟ್, National, Newsbeat, Sports, ಕ್ರೀಡೆ, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಮುಂಬೈ: ಟೀಂ ಇಂಡಿಯಾದ ಹಿರಿಯ ವೇಗಿ, ಸ್ವಿಂಗ್ ಮಾಂತ್ರಿಕ ಮೊಹಮ್ಮದ್ ಶಮಿ ಅವರನ್ನು ಮತ್ತೊಮ್ಮೆ ರಾಷ್ಟ್ರೀಯ ತಂಡದಿಂದ ಕಡೆಗಣಿಸಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಪ್ರಕಟಿಸಲಾದ ಭಾರತ ತಂಡದಲ್ಲಿ ಶಮಿ ಹೆಸರು ಇಲ್ಲದಿರುವುದು ಕ್ರಿಕೆಟ್ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಸ್ವತಃ ಬಂಗಾಳ ತಂಡದ ಮುಖ್ಯ ಕೋಚ್ ಹಾಗೂ ಮಾಜಿ ಕ್ರಿಕೆಟಿಗ ಲಕ್ಷ್ಮಿ ರತನ್ ಶುಕ್ಲಾ ಬಿಸಿಸಿಐ ಆಯ್ಕೆ ಸಮಿತಿಯ ವಿರುದ್ಧ ಬೆಂಕಿ ಉಗುಳಿದ್ದಾರೆ.

ನ್ಯೂಜಿಲೆಂಡ್ ಸರಣಿಗೆ ತಂಡ ಪ್ರಕಟ: ಶಮಿಗೆ ಮತ್ತೆ ನಿರಾಸೆ

Related posts

‘ನಂ.1 ನಾಯಕ ಸಿದ್ದರಾಮಯ್ಯ…’ ಎಂದು ಹೊಗಳಿದ ಸಚಿವ ಕೃಷ್ಣ ಬೈರೇಗೌಡ

‘ನಂ.1 ನಾಯಕ ಸಿದ್ದರಾಮಯ್ಯ…’ ಎಂದು ಹೊಗಳಿದ ಸಚಿವ ಕೃಷ್ಣ ಬೈರೇಗೌಡ

January 6, 2026
ಬಳ್ಳಾರಿ ಗಲಭೆ ಬಗ್ಗೆ ಹೊಸ ಬಾಂಬ್ ಸಿಡಿಸಿದ ಎಚ್‌ಡಿ ಕುಮಾರಸ್ವಾಮಿ

ಬಳ್ಳಾರಿ ಗಲಭೆ ಬಗ್ಗೆ ಹೊಸ ಬಾಂಬ್ ಸಿಡಿಸಿದ ಎಚ್‌ಡಿ ಕುಮಾರಸ್ವಾಮಿ

January 6, 2026

ಜನವರಿ 11ರಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಪ್ರತಿಷ್ಠಿತ ಮೂರು ಪಂದ್ಯಗಳ ಏಕದಿನ ಸರಣಿಗೆ ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು ಜನವರಿ 03ರಂದು ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡಿರುವ ನಾಯಕ ಶುಭ್‌ಮನ್ ಗಿಲ್ ಹಾಗೂ ಉಪನಾಯಕ ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಿದ್ದಾರೆ. ಆದರೆ, ಸಂಪೂರ್ಣ ಫಿಟ್ನೆಸ್ ಸಾಧಿಸಿ ದೇಶೀಯ ಕ್ರಿಕೆಟ್‌ನಲ್ಲಿ ಅಬ್ಬರಿಸುತ್ತಿದ್ದರೂ ಮೊಹಮ್ಮದ್ ಶಮಿ ಅವರನ್ನು ಆಯ್ಕೆದಾರರು ಪರಿಗಣಿಸಿಲ್ಲ. ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಶಮಿ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ ಎಂಬ ಅಭಿಮಾನಿಗಳ ನಿರೀಕ್ಷೆ ಹುಸಿಯಾಗಿದೆ.

ಆಯ್ಕೆ ಸಮಿತಿ ವಿರುದ್ಧ ಲಕ್ಷ್ಮಿ ರತನ್ ಶುಕ್ಲಾ ಕಿಡಿ

ಶಮಿ ಅವರನ್ನು ಕಡೆಗಣಿಸಿದ ಬೆನ್ನಲ್ಲೇ, ಬಂಗಾಳ ರಣಜಿ ತಂಡದ ಮುಖ್ಯ ಕೋಚ್ ಲಕ್ಷ್ಮಿ ರತನ್ ಶುಕ್ಲಾ ಆಯ್ಕೆ ಸಮಿತಿಯ ತೀರ್ಮಾನದ ವಿರುದ್ಧ ಹರಿಹಾಯ್ದಿದ್ದಾರೆ. ಶಮಿ ಫಿಟ್ನೆಸ್ ಸಾಬೀತುಪಡಿಸಲು ಸಾಕಷ್ಟು ದೇಶೀಯ ಪಂದ್ಯಗಳನ್ನು ಆಡಿದ್ದಾರೆ. ಆದರೂ ಅವರನ್ನು ಆಯ್ಕೆ ಮಾಡದಿರುವುದು ಯಾವ ನ್ಯಾಯ ಎಂದು ಅವರು ಪ್ರಶ್ನಿಸಿದ್ದಾರೆ.

ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಶುಕ್ಲಾ, ಆಯ್ಕೆ ಸಮಿತಿಯು ಶಮಿಗೆ ಅನ್ಯಾಯ ಮಾಡುತ್ತಿದೆ. ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡ ಬಳಿಕ ಯಾವೊಬ್ಬ ಅಂತಾರಾಷ್ಟ್ರೀಯ ಕ್ರಿಕೆಟಿಗನೂ ಇಷ್ಟೊಂದು ಪ್ರಮಾಣದ ದೇಶಿ ಕ್ರಿಕೆಟ್ ಪಂದ್ಯಗಳನ್ನು ಆಡಿರಲಿಲ್ಲ. ಶಮಿ ತಮ್ಮ ಬದ್ಧತೆಯನ್ನು ತೋರಿಸಿದ್ದಾರೆ. ಇಷ್ಟೆಲ್ಲಾ ಪಂದ್ಯಗಳನ್ನಾಡಿ ಫಿಟ್ನೆಸ್ ಮತ್ತು ಫಾರ್ಮ್ ಸಾಬೀತುಪಡಿಸಿದ ಬಳಿಕವೂ ಅವರನ್ನು ಕಡೆಗಣಿಸಿರುವುದಕ್ಕೆ ಆಯ್ಕೆ ಸಮಿತಿಗೆ ನಾಚಿಕೆಯಾಗಬೇಕು ಎಂದು ಕಟುವಾದ ಶಬ್ದಗಳಲ್ಲಿ ಟೀಕಿಸಿದ್ದಾರೆ.

ದೇಶೀಯ ಅಖಾಡದಲ್ಲಿ ಶಮಿ ದರ್ಬಾರ್

ಗಾಯದಿಂದ ಚೇತರಿಸಿಕೊಂಡ ನಂತರ ಶಮಿ ದೇಶೀಯ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಇತ್ತೀಚೆಗೆ ನಡೆದ ವಿಜಯ್ ಹಜಾರೆ ಟ್ರೋಫಿ ಏಕದಿನ ಟೂರ್ನಿಯಲ್ಲಿ 5 ಪಂದ್ಯಗಳನ್ನಾಡಿರುವ ಶಮಿ ಬರೋಬ್ಬರಿ 11 ವಿಕೆಟ್ ಕಬಳಿಸಿ ಮಿಂಚಿದ್ದರು. ಅದಕ್ಕೂ ಮುನ್ನ ನಡೆದ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿಯೂ ತಮ್ಮ ವೇಗದ ಖದರ್ ತೋರಿಸಿದ್ದ ಅವರು, ಆಡಿದ 5 ಪಂದ್ಯಗಳಲ್ಲಿ 13 ವಿಕೆಟ್ ಉರುಳಿಸಿದ್ದರು. ಈ ಅಂಕಿಅಂಶಗಳು ಶಮಿ ಎಷ್ಟರಮಟ್ಟಿಗೆ ಲಯದಲ್ಲಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ.

2025ರ ಚಾಂಪಿಯನ್ಸ್ ಟ್ರೋಫಿ ಬಳಿಕ ಅವಕಾಶವಿಲ್ಲ

2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಶಮಿ ಕೊನೆಯದಾಗಿ ಟೀಂ ಇಂಡಿಯಾ ಜೆರ್ಸಿ ಧರಿಸಿದ್ದರು. ಆ ಟೂರ್ನಿಯಲ್ಲಿ 9 ವಿಕೆಟ್ ಪಡೆಯುವ ಮೂಲಕ ಭಾರತದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ಆದರೆ ತದನಂತರ ಆಸ್ಟ್ರೇಲಿಯಾ ವಿರುದ್ಧದ ಸರಣಿ ಮತ್ತು ದಕ್ಷಿಣ ಆಫ್ರಿಕಾ ಪ್ರವಾಸದಿಂದಲೂ ಅವರನ್ನು ಕೈಬಿಡಲಾಗಿತ್ತು. ಇದೀಗ ಕಿವೀಸ್ ಸರಣಿಗೂ ಆಯ್ಕೆಯಾಗದಿರುವುದು ಅಭಿಮಾನಿಗಳಲ್ಲೂ ಬೇಸರ ಮೂಡಿಸಿದೆ.

ದೇಶೀಯ ಕ್ರಿಕೆಟ್‌ನಲ್ಲಿ ಬೆವರಿಳಿಸಿ, ವಿಕೆಟ್ ಬೇಟೆಯಾಡಿ ಫಿಟ್ನೆಸ್ ಸಾಬೀತುಪಡಿಸಿದರೂ ಟೀಂ ಇಂಡಿಯಾ ಬಾಗಿಲು ಶಮಿಗೆ ತೆರೆಯದಿರುವುದು ಆಯ್ಕೆ ಪ್ರಕ್ರಿಯೆಯ ಬಗ್ಗೆ ಅನುಮಾನ ಮೂಡುವಂತೆ ಮಾಡಿದೆ.

ShareTweetSendShare
Join us on:

Related Posts

‘ನಂ.1 ನಾಯಕ ಸಿದ್ದರಾಮಯ್ಯ…’ ಎಂದು ಹೊಗಳಿದ ಸಚಿವ ಕೃಷ್ಣ ಬೈರೇಗೌಡ

‘ನಂ.1 ನಾಯಕ ಸಿದ್ದರಾಮಯ್ಯ…’ ಎಂದು ಹೊಗಳಿದ ಸಚಿವ ಕೃಷ್ಣ ಬೈರೇಗೌಡ

by Shwetha
January 6, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವಕ್ಕೆ ಸಚಿವ ಕೃಷ್ಣ ಬೈರೇಗೌಡ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೇ ಜನವರಿ 6ರಂದು ಸಿದ್ದರಾಮಯ್ಯ ಅವರು ಕರ್ನಾಟಕದ ಇತಿಹಾಸದಲ್ಲೇ ಸುದೀರ್ಘ ಅವಧಿ ಸೇವೆ...

ಬಳ್ಳಾರಿ ಗಲಭೆ ಬಗ್ಗೆ ಹೊಸ ಬಾಂಬ್ ಸಿಡಿಸಿದ ಎಚ್‌ಡಿ ಕುಮಾರಸ್ವಾಮಿ

ಬಳ್ಳಾರಿ ಗಲಭೆ ಬಗ್ಗೆ ಹೊಸ ಬಾಂಬ್ ಸಿಡಿಸಿದ ಎಚ್‌ಡಿ ಕುಮಾರಸ್ವಾಮಿ

by Shwetha
January 6, 2026
0

ಬಳ್ಳಾರಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣದ ತನಿಖೆಯಲ್ಲಿ ಹಲವು ಅನುಮಾನಗಳು ಮತ್ತು...

ಕರೆಂಟ್ ಬಿಲ್ ಹೊರೆ ಇಳಿಸಲು ಕೇಂದ್ರದ ಮಾಸ್ಟರ್ ಪ್ಲಾನ್ ಟಿವಿ ಫ್ರಿಡ್ಜ್ ಮೇಲೆ ಸ್ಟಾರ್ ಲೇಬಲ್ ಕಡ್ಡಾಯ

ಕರೆಂಟ್ ಬಿಲ್ ಹೊರೆ ಇಳಿಸಲು ಕೇಂದ್ರದ ಮಾಸ್ಟರ್ ಪ್ಲಾನ್ ಟಿವಿ ಫ್ರಿಡ್ಜ್ ಮೇಲೆ ಸ್ಟಾರ್ ಲೇಬಲ್ ಕಡ್ಡಾಯ

by Shwetha
January 6, 2026
0

ನವದೆಹಲಿ: ಎಲೆಕ್ಟ್ರಾನಿಕ್ ಮತ್ತು ಗೃಹಬಳಕೆಯ ವಸ್ತುಗಳನ್ನು ಖರೀದಿಸಲು ಯೋಚಿಸುತ್ತಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಇಂಧನ ಉಳಿತಾಯ ಮತ್ತು ಗ್ರಾಹಕರ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ...

ರಾಜ್ಯ ರಾಜಕಾರಣಕ್ಕೆ ರಣಕಹಳೆ ಊದಿದ ಪ್ರತಾಪ್ ಸಿಂಹ ಮೈಸೂರಿನ ಚಾಮರಾಜ ಕ್ಷೇತ್ರವೇ ಮುಂದಿನ ಟಾರ್ಗೆಟ್

ರಾಜ್ಯ ರಾಜಕಾರಣಕ್ಕೆ ರಣಕಹಳೆ ಊದಿದ ಪ್ರತಾಪ್ ಸಿಂಹ ಮೈಸೂರಿನ ಚಾಮರಾಜ ಕ್ಷೇತ್ರವೇ ಮುಂದಿನ ಟಾರ್ಗೆಟ್

by Shwetha
January 6, 2026
0

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಹಾಗೂ ಬಿಜೆಪಿಯ ಫೈರ್ ಬ್ರ್ಯಾಂಡ್ ನಾಯಕ ಪ್ರತಾಪ್ ಸಿಂಹ ಅವರು ದೆಹಲಿ ಮಟ್ಟದ ರಾಜಕಾರಣದಿಂದ ಇದೀಗ ರಾಜ್ಯ ರಾಜಕಾರಣದ...

ಚಿಕನ್ ಪ್ರಿಯರಿಗೆ ಬಿಗ್ ಶಾಕ್: ಕೋಳಿ ಮಾಂಸ–ಮೊಟ್ಟೆ ಬೆಲೆ ಗಗನಕ್ಕೇರಿಕೆ

ಚಿಕನ್ ಪ್ರಿಯರಿಗೆ ಬಿಗ್ ಶಾಕ್: ಕೋಳಿ ಮಾಂಸ–ಮೊಟ್ಟೆ ಬೆಲೆ ಗಗನಕ್ಕೇರಿಕೆ

by Shwetha
January 6, 2026
0

ದೇಶದ ಹಲವು ರಾಜ್ಯಗಳಲ್ಲಿ ಕೋಳಿ ಮಾಂಸ ಹಾಗೂ ಮೊಟ್ಟೆಗಳ ಬೆಲೆ ಏಕಾಏಕಿ ಹೆಚ್ಚಳವಾಗಿರುವುದು ಗ್ರಾಹಕರಿಗೆ ಭಾರೀ ಶಾಕ್ ನೀಡಿದೆ. ವಿಶೇಷವಾಗಿ ಹಬ್ಬಗಳ ಸರಣಿ ಆರಂಭವಾಗಿರುವುದೇ ಈ ಬೆಲೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram