ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Ibrahim Sutra Bio: ಭಾವೈಕ್ಯತೆಯ ಕೊಂಡಿ ಇಬ್ರಾಹಿಂ ಸುತಾರ್

Vivek Biradar by Vivek Biradar
February 5, 2022
in Newsbeat, Saaksha Special, ಎಸ್ ಸ್ಪೆಷಲ್
Ibrahim Sutar Saaksha Tv
Share on FacebookShare on TwitterShare on WhatsappShare on Telegram

Related posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

February 4, 2026
ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

February 4, 2026

ಭಾವೈಕ್ಯತೆಯ ಕೊಂಡಿ ಇಬ್ರಾಹಿಂ ಸುತಾರ್

ಭಾರತ ವಿವಿಧತೆಯಲ್ಲಿ ಏಕತೆಯನ್ನು ಸಾರಿದ ದೇಶ. ಈ ದೇಶದಲ್ಲಿ ಹಿಂದು, ಮುಸ್ಲಿಂ, ಕ್ರಿಶ್ಚಿಯನ್, ಬೌಧ, ಜೈನ, ಪಾರ್ಸಿ ಇನ್ನೂ ಅನೇಕ ಧರ್ಮಗಳು ನೆಲೆಸಿವೆ. ಇಂತಹ ದೇಶದಲ್ಲಿ ಭಾವೈಕ್ಯತೆಯ ಸಾರವನ್ನು ಸರಾಲು ಸಂತ ಕಬೀರರು, ಶಿಶುನಾಳ ಶರೀಪರು ಹೀಗೆ ಹಲವಾರು ಪುಣ್ಯ ಜೀವಿಗಳು ಆಗಿ ಹೋಗಿದ್ದಾರೆ. ಇಂತವರ ಸಾಲಿಗೆ ಕನ್ನಡದ ಕಬೀರ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಅವರು ಕೂಡ ಸೇರುತ್ತಾರೆ. ಇಬ್ರಾಹಿಂ ಸುತಾರ ಅವರು ತಮ್ಮ ಭಾವೈಕ್ಯತೆಯ ತತ್ವಪದ, ಭಜನೆ, ಪ್ರವಚನ ಮತ್ತು ಸಮಾಜ ಸೇವೆ ಮುಖಾಂತರ ಮನೆ ಮಾತಾದವರು.

ಇಬ್ರಾಹಿಂ ಎನ್​. ಸುತಾರ್​ ಅವರು ಮೇ 10, 1940 ರಲ್ಲಿ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರದಲ್ಲಿ ಮುಸ್ಲಿಂ ಧರ್ಮದ ಬಡತನ ಮನೆಯಲ್ಲಿ ಜನಿಸಿದರು. ಇವರ ತಂದೆ ಮಹಾಲಿಂಗಪುರದ ನಬಿಸಾಹೇಬ್​, ತಾಯಿ ಅಮೀನಾಬಿ. ಇವರ ಮನೆ ಆರ್ಥಿಕವಾಗಿ ಸದೃಢರಾಗಿಲ್ಲದಿದ್ದರಿಂದ ಇವರು ಮೂರನೇ ತರಗತಿವರೆಗೆ ಮಾತ್ರ ಶಿಕ್ಷಣ ಪಡೆದರು.

ಇವರು ಮುಂದೆ ನೇಕಾರ ವೃತ್ತಿ ಮೈಗೂಡಿಸಿಕೊಂಡು ತಮ್ಮ ಧರ್ಮದ ಪದ್ಧತಿಗಳನ್ನು ಮತ್ತು ಆಚರಣೆಗಳನ್ನು ಪಾಲಿಸುತ್ತಾ ನಡೆದರು. ದಿನಕ್ಕೆ 5 ಬಾರಿ ಮಸೀದಿಯಲ್ಲಿ ನಮಾಜು, ಕುರಾನ್​ ಅಧ್ಯಯನ ಮಾಡಿದರು. ಹೀಗೆ ತಮ್ಮ ಧರ್ಮದ ಆಚಾರ-ವಿಚಾರಗಳನ್ನು ಅನುಸರಿಸುತ್ತಾ ಸಾಗುವಾಗ ಹಿಂದು ಧರ್ಮದ ಆಚಾರ-ವಿಚಾರ, ಪದ್ಧತಿಗಳ ಕಡೆಗೆ ಒಲವು ಹೆಚ್ಚಾಯಿತು.

ನಂತರ ದಿನಗಳಲ್ಲಿ ಇವರು ಮಹಾಲಿಂಗಪುರದ ಭಜನಾ ಮಂಡಳಿಗೆ ಸೇರಿಕೊಂಡರು, ಅಲ್ಲಿ ಇವರು ತತ್ವ ಪದಗಳು (ತತ್ವಶಾಸ್ತ್ರದ ಕವನಗಳು), ವಚನಗಳು ಮತ್ತು ಮಹಾನ್ ಸಂತರ ಪುಸ್ತಕಗಳನ್ನು ಓದಿಕೊಂಡರು. ಮುಂದೆ ಇವರು ಹಿಂದೂ ಮತ್ತು ಮುಸ್ಲಿಂರನ್ನು ಒಳಗೊಂಡ ಏಳು ಜನ ಸ್ನೇಹಿತರ ತಂಡವೊಂದನ್ನು ಕಟ್ಟಿಕೊಂಡರು. ಈ ತಂಡಕ್ಕೆ ‘ಭಾವೈಕ್ಯ ಜಾನಪದ ಸಂಗೀತ ಮೇಳ’ (ಸಾಮರಸ್ಯಕ್ಕಾಗಿ ಜಾನಪದ ಸಂಗೀತ ಬ್ಯಾಂಡ್) ಅಂತ ಹೆಸರಿಟ್ಟರು. ಈ ತಂಡದ ಮೂಲಕ ಇವರು ಬಾಗಲಕೋಟೆ ಜಿಲ್ಲೆಯಾದ್ಯಂತ ತತ್ವಪದ ಸಾರುತ್ತಾ ನಡೆದರು.

ಇವರ ತತ್ವಪದಗಳನ್ನು ಕೇಳಲು ಅನೇಕ ಜನರು ಸೇರುತ್ತಿದ್ದರು. ಇವರ ತತ್ವ  ಪದಗಳು ನಾಡಿನಾದ್ಯಂತ ಪ್ರಸಿದ್ಧಿ ಪಡೆದವು. ಮುಂದೆ ಇವರಿಗೆ ಕರ್ನಾಟಕದ ವಿವಿಧ ಭಾಗಗಳಿಂದ ಆಹ್ವಾನಗಳು ಬಂದವು ಅಲ್ಲಿ ತಮ್ಮ ತತ್ವಪದಗಳ ಮುಖಾಂತರ ಜನರಿಗೆ ಭಾವೈಕ್ಯತೆಯ ಸಂದೇಶ ಸಾರಿದರು. ಇವರು ಭಗವದ್ಗೀತೆ, ಬೈಬಲ್, ಅಧ್ಯಯನ ಮಾಡಿದರು. ಹಾಗೇ ನಿಜಗುಣ ಶಿವಯೋಗಿಗಳು ಬರೆದಂತಹ ಅನುಭವಸಾರ, ಜ್ಞಾನ ಪ್ರತಿಪಾಧನ ಸ್ಥಳ ಮಾತ್ರ, ಪರಮಾನುಬೋದೆ, ಪರಾಮರ್ಥಗೀತೆಗಳನ್ನು ಅಧ್ಯಯನ ಮಾಡಿ ನಿಜಗುಣರ ಶಾಸ್ತ್ರವನ್ನು ಜೊತೆಗೆ ಶರಣರ ವಚನಗಳನ್ನು ತಿಳಿದುಕೊಂಡು ನಾಡಿನ ಮುಮುಕ್ಷುಗಳಿಗೆ ಉಣಬಡಿಸಿದರು.

1970 ರಲ್ಲಿ ಅವರು ಸಾಮರಸ್ಯ ಜಾನಪದ ಸಂಗೀತ ಮೇಳವನ್ನು (ಕಲಾವಿದರ ತಂಡ) ಕಟ್ಟಿಕೊಂಡು ಕರ್ನಾಟಕ,  ಆಂಧ್ರ ಪ್ರದೇಶ, ಮಹಾರಾಷ್ಟ್ರ, ದೆಹಲಿ, ಗೋವಾ, ಒಡಿಶಾ ಮತ್ತು ರಾಜಸ್ಥಾನದಲ್ಲಿ ಭಕ್ತಿ ಗೀತೆಗಳನ್ನು, ತತ್ವ ಪದಗಳನ್ನು ಇಬ್ರಾಹಿಂ ಸುತಾರ್ ಮತ್ತು ಅವರ ತಂಡದ ಸದಸ್ಯರು ಹಾಡುವ ಮುಖಾಂತರ ಜನರಿಗೆ ಭಾವೈಕ್ಯದ ಸಾರವನ್ನು ಸಾರಲು ಪ್ರಾರಂಭಿಸಿದರು. ಅಲ್ಲದೇ ಅವರು ನೂರಾರು ಕವನಗಳನ್ನು ಬರೆದಿದ್ದಾರೆ ಮತ್ತು ಧ್ವನಿ ಸಂಕಲನಗಳನ್ನು ಬಿಡುಗಡೆ ಮಾಡಿದ್ದಾರೆ.

ಇವರು ಪ್ರತಿ ವರ್ಷ ಮಳೆಗಾಲದಲ್ಲಿ, ಅಂದರೆ ಶ್ರಾವಣ ಮಾಸದಲ್ಲಿ ‘ಶ್ರಾವಣಕೊಂದು ಸಮಾಜ ಸೇವೆ’ (ಪ್ರತಿ ಶ್ರಾವಣ ಮಾಸಕ್ಕೆ ಸಾಮಾಜಿಕ ಕಾರ್ಯ) ಎಂಬ ತಿಂಗಳ ಅವಧಿಯ ಪ್ರವಚನ ಕಾರ್ಯಕ್ರಮವನ್ನು ಪ್ರಾರಂಭಿಸುತ್ತಾರೆ.

ಭಾವೈಕ್ಯತೆಯ ಸಾರವನ್ನು ಸಾರುವ ಜೊತೆಗೆ ಸಮಾಜ ಸೇವಾ ಕಾರ್ಯದಲ್ಲಿ ಕೂಡ ತೊಡಗಿಸಿಕೊಂಡಿದ್ದರು. ಇವರು ತಮ್ಮ ಪ್ರದರ್ಶನಗಳಲ್ಲಿ ಸಂಗ್ರಹಿಸಿದ ಹಣವನ್ನು ಬಳಸಿ ಯೋಗ ಸೆಷನ್‌ಗಳು, ಸಮಾಜ ಕಲ್ಯಾಣ ಕಾರ್ಯಕ್ರಮಗಳನ್ನು ಆಯೋಜಿಸಿದರು, ಹಳ್ಳಿಗಳಲ್ಲಿ ನೀರಿನ ಟ್ಯಾಂಕ್‌ಗಳನ್ನು ಸ್ಥಾಪಿಸಿದರು ಮತ್ತು ಸರ್ಕಾರಿ ಶಾಲೆಗಳಿಗೆ ತರಗತಿ ಕೊಠಡಿಗಳನ್ನು ನಿರ್ಮಿಸಿಕೊಟ್ಟರು.

1988ರಲ್ಲಿ ಅಥಣಿ ತಾಲೂಕಿನ ಶೇಗುಣಶಿ ಗ್ರಾಮಸ್ಥರ ಸಹಕಾರದಿಂದ 9 ಕಿ.ಮೀ ರಸ್ತೆಯನ್ನು ಒಂದು ವಾರದ ಅವಧಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಅಲ್ಲದೇ ಬಡವರಿಗೆ ಶಾಲೆಗಳು ಮತ್ತು ಮದುವೆ ಮಂಟಪಗಳನ್ನು ಮತ್ತು ಭಕ್ತರಿಗೆ ವಸತಿಗೃಹಗಳನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. 1992 ರಿಂದ, ಅವರು ‘ದೇವದಾಸಿ’ ಪದ್ಧತಿಯಂತಹ ಸಾಮಾಜಿಕ ಅನಿಷ್ಟಗಳ ವಿರುದ್ಧ ಹೋರಾಡಲು ಮತ್ತು ಡಿ-ಅಡಿಕ್ಷನ್ ಡ್ರೈವ್‌ಗಳನ್ನು ಮುನ್ನಡೆಸುವಲ್ಲಿ ತೊಡಗಿಸಿಕೊಂಡರು.

ಸುತಾರ್ ಅವರ ಜನರಲ್ಲಿ ಭಾವೈಕ್ಯತೆ ಮೂಡಿಸುವ ಕಾರ್ಯಕ್ಕೆ ಮತ್ತು ಸಮಾಮುಕಿ ಕಾರ್ಯಕ್ಕೆ ರಾಜ್ಯ ಸರಕಾರವು 1995ರಲ್ಲಿ ಕರ್ನಾಟಕ ಸರ್ಕಾರ ರಾಜೋತ್ಸವ ಪ್ರಶಸ್ತಿ ನೀಡಿದೆ. ಅಲ್ಲದೇ 2018ರಲ್ಲಿ ಭಾರತ ಸರಕಾರವು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.

ಗುರುವಿನ ಸೇವಾ ಸದಾ ಮಾಡುವವರಿಗೆ, ಅರಿವಿನ ಮಾತುಗಳಾಡುವವರಿಗೆ, ಅರಿಗಳನ್ನಾರನ್ನು ದೂಡುವವರಿಗೆ ಶರಣರ ಸಂಗದೊಳಗೆ ಕೂಡುವವರಿಗೆ, ಮನೆಯೊಳಗಿದ್ದರು ಮುಕುತಿ ||

ಪೂಜ್ಯ ಶ್ರೀ ಇಬ್ರಾಹಿಂ ಸುತಾರ್ ಅವರು ಇಂದು ನಮ್ಮನ್ನು ದೈಹಿಕವಾಗಿ ಅಗಲಿರಬಹುದು, ಆದರೆ ಅವರ ವಾಣಿ, ಅವರ ಚಿಂತನೆ ನಾಡಿನ ಮುಮುಕ್ಷಗಳ ಎದೆಯಲ್ಲಿ ಸದಾ ನಂದಾ ದೀಪದಂತೆ ಬೆಳಗುತ್ತಿರುತ್ತದೆ.

Tags: #Saaksha TVIbrahim SutarSpecial
ShareTweetSendShare
Join us on:

Related Posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

by Shwetha
February 4, 2026
0

ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದ ಗುತ್ತಿಗೆದಾರರ ಸಂಘವೇ ಈಗ ಭಾರೀ ವಿವಾದದ ಕೇಂದ್ರಬಿಂದುವಾಗಿದೆ. ಸಂಘದೊಳಗೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದ...

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

by Shwetha
February 4, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಪಾವತಿಸದ ಮಾಲೀಕರ ವಿರುದ್ಧ ಕಠಿಣ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. GBA ಅಧೀನದಲ್ಲಿರುವ 5 ನಗರ ಪಾಲಿಕೆ...

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

by Shwetha
February 4, 2026
0

ಬೆಂಗಳೂರು: ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಕೋಟ್ಯಂತರ ಗ್ರಾಹಕರಿಗೆ ತುರ್ತು ಎಚ್ಚರಿಕೆಯೊಂದನ್ನು ರವಾನಿಸಿದೆ. ಡಿಜಿಟಲ್ ಯುಗದಲ್ಲಿ ಬ್ಯಾಂಕಿಂಗ್ ವ್ಯವಹಾರಗಳು...

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

by Shwetha
February 4, 2026
0

ಬೆಂಗಳೂರು: ಕರ್ನಾಟಕದಲ್ಲಿ ಪಡಿತರ ಚೀಟಿಗಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್...

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

by Shwetha
February 4, 2026
0

ಬೆಂಗಳೂರು: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಉರ್ದು ಶಾಲೆಗಳ ಕಾರ್ಯನಿರ್ವಹಣಾ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಇದೀಗ ರಾಜಕೀಯ ವಲಯದಲ್ಲಿ ಭಾರೀ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram