ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಡಿಕೆಶಿ ಸರ್ಕಾರಕ್ಕೆ ಸ್ವಪಕ್ಷವೇ ಬದ್ಧ ವೈರಿ, ಟ್ರಬಲ್ ಶೂಟರ್ ಗೆ ಕೈ ಪಾಳೆಯದಲ್ಲೇ ಟ್ರಬಲ್ : ಇದು ಶಾಶ್ವತ ಮುಖ್ಯಮಂತ್ರಿಯ ಪ್ರಭಾವಳಿ ಎಫೆಕ್ಟ್..!?

Shwetha by Shwetha
June 6, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಸಂಚಲನ ಸೃಷ್ಟಿಯಾಗಿದೆ. ಡಿ.ಕೆ. ಶಿವಕುಮಾರ್ ಸಾರಥ್ಯದ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಈಗ ಬಹಿರಂಗವಾಗುತ್ತಿದೆ. ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರು ನಡೆಸುತ್ತಿರುವ ಹಠ, ರಾಜೀನಾಮೆ ಬೆದರಿಕೆ ಮತ್ತು ಹೈಕಮಾಂಡ್ ನಡೆಸುತ್ತಿರುವ ಮನವೊಲಿಕೆಯ ಪ್ರಹಸನಗಳು ಸದ್ಯದ ರಾಜಕೀಯ ಹೈಲೈಟ್ಸ್ ಆಗಿವೆ.

ಹಿರಿಯರಿಗೆ ಸಚಿವ ಸ್ಥಾನದ ದಾಹ ತೀರಲ್ವಾ?

Related posts

rishab-shetty-joins-spider-man-brand-new-day-sony-pictures-promos

Film – ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಪ್ರಚಾರದಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ: ಹಾಲಿವುಡ್‌ನಲ್ಲಿ ಮಿಂಚಿದ ಕನ್ನಡಿಗ

July 27, 2026
ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

Bengaluru – ಬರ ಪರಿಹಾರ ನೀಡಲು ಯಾವುದೇ ಕ್ರಮ ಕೈಗೊಳ್ಳದ ಕಾಂಗ್ರೆಸ್‌ ಸರ್ಕಾರ

July 27, 2026

ರಾಜ್ಯ ಕಾಂಗ್ರೆಸ್ ನಲ್ಲಿ ಈಗ ಕೇಳಿ ಬರುತ್ತಿರುವ ಅತಿದೊಡ್ಡ ಪ್ರಶ್ನೆ ಎಂದರೆ ಈ ಹಿರಿಯ ಶಾಸಕರಿಗೆ ಎಷ್ಟೇ ಬಾರಿ ಮಂತ್ರಿಯಾದರೂ ತೃಪ್ತಿ ಇಲ್ವಾ ಎಂಬುದು. ಅನೇಕ ಬಾರಿ ಅಧಿಕಾರ ಅನುಭವಿಸಿದರೂ ಮತ್ತೆ ಸಚಿವ ಸ್ಥಾನ ಬೇಕೆಂದು ಹಠ ಹಿಡಿಯುತ್ತಿರುವುದು ಪಕ್ಷದ ಶಿಸ್ತಿಗೆ ಧಕ್ಕೆ ತರುತ್ತಿದೆ. ಒಂದು ವೇಳೆ ಇವರಿಗೆ ಸಚಿವ ಸ್ಥಾನ ಬೇಡ ಎಂದಾದಲ್ಲಿ, ಆ ಸ್ಥಾನಗಳನ್ನು ಹೊಸಬರಿಗೆ ಅಥವಾ ಯುವ ಶಾಸಕರಿಗೆ ಬಿಟ್ಟುಕೊಟ್ಟು ಮಾರ್ಗದರ್ಶಕರಾಗಿ ಇರಬಾರದೇ ಎಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಅಸಮಾಧಾನ ಹೊಂದಿರುವವರು ಶಾಸಕರಾಗಿಯೇ ಮುಂದುವರಿಯಲಿ, ಅದನ್ನು ಬಿಟ್ಟು ಅಧಿಕಾರಕ್ಕಾಗಿ ಸರ್ಕಾರಕ್ಕೆ ಮುಜುಗರ ತರುವುದು ಸರಿಯಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.

ಪಕ್ಷ ಬಿಡುವ ಧೈರ್ಯ ಯಾರಿಗೂ ಇಲ್ಲ

ಈಗ ನಡೆಯುತ್ತಿರುವ ರಾಜೀನಾಮೆ ಬೆದರಿಕೆ ಕೇವಲ ಒಂದು ನಾಟಕ ಎನ್ನಲಾಗುತ್ತಿದೆ. ಏಕೆಂದರೆ, ಈಗಿನ ಪರಿಸ್ಥಿತಿಯಲ್ಲಿ ಯಾರೂ ಕೂಡ ಪಕ್ಷ ಬಿಡುವ ಸಾಹಸ ಮಾಡುವುದಿಲ್ಲ. ಪಕ್ಷ ಬಿಟ್ಟರೆ ಮುಂದಿನ ದಿನಗಳಲ್ಲಿ ಅಧಿಕಾರವೂ ಸಿಗಲ್ಲ ಮತ್ತು ಮತ್ತೆ ಶಾಸಕರಾಗಿ ಆಯ್ಕೆಯಾಗುವುದು ಎಷ್ಟು ಕಷ್ಟ ಎಂಬ ಅರಿವು ಎಲ್ಲರಿಗೂ ಇದೆ. ಹೀಗಾಗಿಯೇ ಈ ಹಿರಿಯ ಶಾಸಕರು ಕೇವಲ ಬೆದರಿಕೆ ತಂತ್ರ ಬಳಸಿ ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ. ಈ ರೀತಿಯ ನಾಟಕೀಯ ಪ್ರಹಸನಗಳನ್ನು ಬಿಟ್ಟು ಉತ್ತಮ ಆಡಳಿತ ನೀಡುವತ್ತ ಗಮನ ಹರಿಸುವುದು ಉತ್ತಮ.

ಜನ ಸಾಮಾನ್ಯರ ಸಮಸ್ಯೆ ಮುಖ್ಯವಾಗಲಿ

ಸೀನಿಯರ್ ಮತ್ತು ಜೂನಿಯರ್ ಎಂಬ ಅಹಂಕಾರವನ್ನು ಬದಿಗಿಟ್ಟು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಜವಾಬ್ದಾರಿ ಆಡಳಿತ ಪಕ್ಷದ ಮೇಲಿದೆ. ಹಾಲಿ ಮುಖ್ಯಮಂತ್ರಿಗಳು ಹಿಂದಿನವರಂತಲ್ಲ, ಅವರ ಕಾರ್ಯವೈಖರಿ ಭಿನ್ನವಾಗಿದೆ. ಆದರೆ ಇಲ್ಲಿ ಗಮನಿಸಬೇಕಾದ ಅಂಶವೆಂದರೆ, ಈ ಸಂಪುಟದಲ್ಲಿ ಬಹುತೇಕ ಸಚಿವರು ಸಿದ್ದರಾಮಯ್ಯನವರ ಬೆಂಬಲಿಗರಾಗಿದ್ದಾರೆ. ಅಂದ ಮೇಲೆ ಡಿ.ಕೆ. ಶಿವಕುಮಾರ್ ಅವರಿಗೆ ಆಡಳಿತ ನಡೆಸುವುದು ಅಂದುಕೊಂಡಷ್ಟು ಸುಲಭವಿಲ್ಲ. ಸಿದ್ದರಾಮಯ್ಯನವರ ಪ್ರಭಾವಳಿ ಮತ್ತು ಅವರ ಬೆಂಬಲಿಗರ ಹಿಡಿತವು ಟ್ರಬಲ್ ಶೂಟರ್ ಎಂದೇ ಹೆಸರಾದ ಡಿ.ಕೆ. ಶಿವಕುಮಾರ್ ಅವರಿಗೆ ಹೊಸ ತಲೆನೋವಾಗಿ ಪರಿಣಮಿಸಿದೆ.

ವಿರೋಧ ಪಕ್ಷಕ್ಕಿಂತ ಸ್ವಪಕ್ಷೀಯರೇ ಸವಾಲು

ರಾಜ್ಯದಲ್ಲಿ ಬಿಜೆಪಿ ಅಥವಾ ಜೆಡಿಎಸ್ ಪಕ್ಷಗಳು ಡಿ.ಕೆ. ಶಿವಕುಮಾರ್ ಅವರಿಗೆ ಅಷ್ಟಾಗಿ ತೊಂದರೆ ಕೊಡುತ್ತಿಲ್ಲ. ಬದಲಾಗಿ ಅವರದೇ ಪಕ್ಷದ ಶಾಸಕರು ಮತ್ತು ಸಚಿವರು ವಿರೋಧ ಪಕ್ಷದಂತೆ ವರ್ತಿಸುತ್ತಿರುವುದು ವಿಪರ್ಯಾಸ. ಶಾಶ್ವತ ಮುಖ್ಯಮಂತ್ರಿ ಎಂಬ ವರ್ಚಸ್ಸು ಹೊಂದಿರುವವರ ಪ್ರಭಾವದಿಂದ ಹೊರಬಂದು, ಸ್ವಪಕ್ಷದ ಶಾಸಕರನ್ನು ನಿಭಾಯಿಸುವುದು ಡಿ.ಕೆ. ಶಿವಕುಮಾರ್ ಅವರಿಗೆ ಈಗ ಬೆಟ್ಟದಂತಹ ಸವಾಲಾಗಿದೆ.

ಒಟ್ಟಿನಲ್ಲಿ ಕರ್ನಾಟಕ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಈ ಒಳಜಗಳಗಳು ಸರ್ಕಾರದ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿಯಾಗಬಾರದು ಎಂಬುದೇ ಜನರ ಆಶಯ

ಸನತ್ ರೈ

ShareTweetSendShare
Join us on:

Related Posts

rishab-shetty-joins-spider-man-brand-new-day-sony-pictures-promos

Film – ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಪ್ರಚಾರದಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ: ಹಾಲಿವುಡ್‌ನಲ್ಲಿ ಮಿಂಚಿದ ಕನ್ನಡಿಗ

by admin
July 27, 2026
0

ಮಂಗಳೂರಿನ ಕೆರಾಡಿಯಿಂದ ಬಂದ ‘ಕಾಂತಾರ’ ಖ್ಯಾತಿಯ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇದೀಗ ಜಾಗತಿಕ ಮಟ್ಟದ ಅತಿದೊಡ್ಡ ಸೂಪರ್ ಹೀರೋ ಫ್ರಾಂಚೈಸಿ ‘ಸ್ಪೈಡರ್ ಮ್ಯಾನ್’ ಪ್ರಪಂಚಕ್ಕೆ ಕಾಲಿಡುವ...

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

Bengaluru – ಬರ ಪರಿಹಾರ ನೀಡಲು ಯಾವುದೇ ಕ್ರಮ ಕೈಗೊಳ್ಳದ ಕಾಂಗ್ರೆಸ್‌ ಸರ್ಕಾರ

by admin
July 27, 2026
0

ಬೆಂಗಳೂರು, : ಮೈಸೂರು, ಮಂಡ್ಯ ಜಿಲ್ಲೆಗಳಿಗೆ ಭೇಟಿ ನೀಡಿ ಬರ ವೀಕ್ಷಣೆ ಮಾಡಿದ್ದು, ಮುಂದೆ ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಆದರೆ ಈವರೆಗೆ ಬರ...

ಇದು 60 ಪರ್ಸೆಂಟ್ ಕಮಿಷನ್ ಸರ್ಕಾರ – ಸಿದ್ದು ಡಿಕೆಶಿ ಕುರ್ಚಿ ಕಾಳಗದ ನಡುವೆ ಶಾಸಕರಿಗೆ ಬಂಪರ್ ಆಫರ್ 100 ಕೋಟಿ ಡೀಲ್ ಬಗ್ಗೆ ಅಶೋಕ್ ಸ್ಫೋಟಕ ಹೇಳಿಕೆ

Bengaluru – ಪಶು ವೈದ್ಯಾಧಿಕಾರಿಗಳ ನೇಮಕ ಹಗರಣ –  ಸಿಬಿಐ ತನಿಖೆಗೆ ವಹಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

by admin
July 27, 2026
0

ಬೆಂಗಳೂರು : ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ 80 ಲಕ್ಷ ರೂ. ಲಂಚದ ಆರೋಪ ಕೇಳಿಬಂದಿರುವುದರಿಂದ ಕೆಪಿಎಸ್‌ಸಿಯ ಆಂತರಿಕ ತನಿಖೆ ರದ್ದುಗೊಳಿಸಿ, ಸಿಬಿಐ ಅಥವಾ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಯವರ...

aditya-patnaik-wins-gold-vios-championship-at-sepang-circuit

ರಾಷ್ಟ್ರೀಯ ಚಾಂಪಿಯನ್‌ ಆದಿತ್ಯನಿಗೆ ಅಂ.ರಾ. ರೇಸಿಂಗ್‌ನಲ್ಲಿ ಮೊದಲ ಜಯ!

by admin
July 27, 2026
0

- ಮಲೇಷ್ಯಾದ ಸೆಪಾಂಗ್‌ ಸರ್ಕ್ಯೂಟ್‌ನಲ್ಲಿ ನಡೆದ ರೇಸ್‌ ಗೆದ್ದ ಭಾರತದ ಯುವ ರೇಸರ್‌ ಆದಿತ್ಯ ಪಟ್ನಾಯಕ್‌ - ಗೋಲ್ಡ್ ವಿಯೊಸ್ ಚಾಂಪಿಯನ್‌ಶಿಪ್‌ನ 3ನೇ ಸುತ್ತಿನಲ್ಲಿ ಮುಂಬೈ ಯುವ...

param-vihar-cultural-series-jayanagar-bangalore-14th-edition

Bengaluru- ಸಂಗೀತ, ನೃತ್ಯ ಸಿರಿಯ ವೈಭವ: ಕಣ್ಮನ ಸೆಳೆದ ‘ಪರಮ್ ವಿಹಾರ’ ಆವೃತ್ತಿ-14

by admin
July 27, 2026
0

• ಜಯನಗರದ ಸನಾತನ ಕಲಾಕ್ಷೇತ್ರದಲ್ಲಿ ಯಶಸ್ವಿ ಕಾರ್ಯಕ್ರಮ • ಉದಯೋನ್ಮುಖ ಕಲಾವಿದರ ವೈವಿಧ್ಯಮಯ ಕಲಾ ಸಂಗಮ • ಸಂಜೆ ರಂಜಿಸಿದ ವಾಯೊಲಿನ್ ಸಾಂಸ್ಕೃತಿಕ ನಾದಲಹರಿ • ಭಾವ-ರಸ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram