ಅಂತರಗಂಗೆ ಬೆಟ್ಟಕ್ಕೆ ಬೆಂಕಿ ಇಟ್ಟ ಕಿಡಿಗೇಡಿಗಳು Saaksha Tv
ಕೋಲಾರ: ಚಿನ್ನದ ನಗರದಲ್ಲಿ ಕಿಡಿಗೇಡಿಗಳು ಅಂತರಗಂಗೆ ಬೆಟ್ಟಕ್ಕೆ ಬೆಂಕಿ ಇಟ್ಟಿದ್ದಾರೆ. ಇದರಿಂದ ಅಪಾರವಾದ ಅಮೂಲ್ಯವಾದ ವನಸಂಪತ್ತು ನಾಶವಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ನಗರದ ಹೊರವಲಯದಲ್ಲಿರುವ ಅಂತರಗಂಗೆ ಬೆಟ್ಟಕ್ಕೆ ಕಿಡಿಗೇಡಿಗಳು ನಿನ್ನೆ ಸಂಜೆ ಮೋಜಿ ಮಸ್ತಿ ಮಾಡಲು ಹೋಗಿದ್ದಾರೆ. ಹಾಗೇ ಕುರಿ ಮೇಹಿಸಲು ಕರಿಗಾಹಿಗಳು ಹೋಗಿದ್ದು, ಇವರು ಬೆಂಕಿ ಹಾಕಿರಬಹುದು ಎಂದು ಶಂಕಿಸಲಾಗಿದೆ. ಕೂಡಲೆ ಅರಣ್ಯ ಇಲಾಖೆ ಅಧಿಕಾರಿಗಳು ಅಗ್ನಿಶಾಮಕ ದಳಕ್ಕೆ ತಿಳಿಸಿದ್ದಾರೆ. ಆದರೆ ಅಗ್ನಿಶಾಮಕ ದಳ ಸಿಬ್ಬಂದಿ ತೆರಳಲು ಸಾಧ್ಯವಾಗದ ಬೆಟ್ಟದ ತುದಿಯಲ್ಲಿ ಬೆಂಕಿ ಉರಿಯುತ್ತಿರುವುದರಿಂದೆ ಬೆಂಕಿ ನಂದಿಸಲು ಸಾಧ್ಯವಾಗಿಲ್ಲ.
ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡದೆ ವಿಷಯ ಗೊತ್ತಿಲ್ಲದ ರೀತಿ ವರ್ತಿಸುತ್ತಿದ್ದಾರೆ. ಬೆಂಕಿಯಿಂದಾಗಿ ಅಪಾರ ಪ್ರಮಾಣದ ಹಸಿರು ನಾಶವಾಗುತ್ತಿದೆ. ಸಂಜೆ ಯಿಂದ ಬೆಂಕಿ ಹತ್ತಿ ಉರಿಯುತ್ತಿದೆ. ಪ್ರತಿವರ್ಷ ಬೇಸಿಗೆ ಸಮಯದಲ್ಲಿ ಬೆಂಕಿ ಬೀಳುವುದು ಸಾಮಾನ್ಯವಾಗಿದೆ. ಮೋಜುಮಸ್ತಿಗಾಗಿ ಹೋಗುವವರ ಮೇಲೆ ನಿಗಾ ವಹಿಸಿದ್ದರೆ ಈ ರೀತಿ ಆಗುತ್ತಿರಲ್ಲಿ ಎಂದು ಸ್ಥಳಿಯರು ಆರೋಪಿಸಿದ್ದಾರೆ.