ಸೈಕೋ ಮಗನೊಬ್ಬ ಕುಡಿದ ಅಮಲಿನಲ್ಲಿ ತಂದೆ ಹಾಗೂ ತಾಯಿಯನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.
ಮಂಗಳೂರು ಮೂಲದ ದಂಪತಿಯೇ ಮಗನಿಂದ ಬರ್ಬರವಾಗಿ ಹತ್ಯೆಯಾಗಿರುವ ದುರ್ದೈವ ತಂದೆ-ತಾಯಿಗಳು. ಕುಡಿದ ಮತ್ತಿನಲ್ಲಿ ಮನೆಗೆ ಬಂದಿದ್ದ ಪಾಪಿ ಮಗ ಹೆತ್ತ ತಂದೆ-ತಾಯಿಯನ್ನೇ ಕೊಲೆ ಮಾಡಿದ್ದಾನೆ. ಭಾಸ್ಕರ್, ಶಾಂತಾ ಕೊಲೆಯಾದ ದಂಪತಿ.
ಶರತ್ ಕೊಲೆ ಮಾಡಿರುವ ಪಾಪಿ. 20 ವರ್ಷಗಳಿಂದ ಭಾಸ್ಕರ್, ಶಾಂತಾ ದಂಪತಿ ಬೆಂಗಳೂರಿನಲ್ಲಿ ನೆಲೆಸಿದ್ದರು. ಶಾಂತಾ ಅವರು ಕೇಂದ್ರದ ನೌಕರಿಯಿಂದ ನಿವೃತ್ತಿ ಹೊಂದಿದ್ದರು. ಭಾಸ್ಕರ್ ಖಾಸಗಿ ಕ್ಯಾಂಟೀನ್ ವೊಂದರಲ್ಲಿ ಕ್ಯಾಶಿಯರ್ ಆಗಿದ್ದರು. ಮಗ ಶರತ್ ಮನೆಯಲ್ಲಿ ಆಗಾಗ ಸೈಕೋನಂತೆ ವರ್ತಿಸುತ್ತಿದ್ದ. ಕುಡಿದು ಬಂದು ತಂದೆ-ತಾಯಿ ಜೊತೆ ಗಲಾಟೆ ಮಾಡಿದ್ದ. ಈ ಸಂದರ್ಭದಲ್ಲಿಯೇ ರಾಡ್ ನಿಂದ ಹೊಡೆದು ಕೊಲೆ ಮಾಡಿದ್ದಾನೆ. ಆನಂತರ ಸ್ಥಳದಿಂದ ಪರಾರಿಯಾಗಿದ್ದಾನೆ. ಹಿರಿಯ ಮಗ ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.