ನೆರೆ ಸಂತ್ರಸ್ಥರ ಸಹಾಯಕ್ಕೆ ಧಾವಿಸಿದ ರಾಜ್ಯ ಸರ್ಕಾರ 418 ಕೋಟಿ ಬಿಡುಗಡೆ
ರಾಜ್ಯದಲ್ಲಿ ನೆರೆ, ಪ್ರವಾಹದಿಂದ ಸಂತ್ರಸ್ತರಾಗಿವವರಿಗೆ ಕೂಡಲೇ ತುರ್ತು ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರ ಸೂಚಿಸಿದೆ. ಇದಕ್ಕಾಗಿ 418.72 ಕೋಟಿ ರೂ ಹಣ ಬಿಡುಗಡೆ ಮಾಡಿ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದು, ಮನೆ ಹಾನಿ ಪರಿಹಾರ ನೀಡುವಂತೆ ಎಸ್ ಡಿ ಆರ್ ಎಫ್ ಹಾಗು ಎಸ್ ಡಿ ಆರ್ ಎಫ್ ನಿಧಿಯಿಂದ ಹಣ ಬಿಡುಗಡೆ ಮಾಡಿ ಆದೇಶಿಸಿದೆ.
ಬೆಂಗಳೂರಿನ ಯಲಹಂಕ ಪ್ರದೇಶದಲ್ಲಿ ನೀರು ನುಗ್ಗಿರುವ ಪ್ರದೇಶಗಳಿಗೆ ಬೇಟಿ ಮಾಡಿ ಪರಿಶೀಲಿಸಿದ ಮುಖ್ಯಮಂತ್ರಿಗಳು, ಹಾನಿಯಾಗಿರುವ ಮನೆಗಳಿಗೆ 10 ಸಾವಿರ ರೂ.ಗಳು, ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿರುವ ಮನೆಗಳಿಗೆ 1 ಲಕ್ಷ ರೂ. ಮತ್ತು ಸಂಪೂರ್ಣ ಹಾನಿಯಾಗಿರುವ ಮನೆಗಳಿಗೆ 5 ಲಕ್ಷ ರೂ.ಗಳು ಹಾಗೂ ತುತು ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದರು.
ನಾಳೆ ಸಂಜೆ 4 ಗಂಟೆಗೆ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು ಅಕಾಲಿಕ ಮಳೆಯಿಂದ ಉಂಟಾದ ಹಾನಿಯ ಬಗ್ಗೆ ಚರ್ಚೆ ನಡೆಸಲಿದ್ದಾರೆ.