ರಾಜ್ಯ ಸರ್ಕಾರದಿಂದ ವಸತಿ ರಹಿತರಿಗೆ ಸಿಹಿ ಸುದ್ದಿ
ಕರ್ನಾಟಕ ರಾಜ್ಯ ಸರ್ಕಾರ ಮನೆ ಇಲ್ಲದ ಬಡವರಿಗೆ ಸಿಹಿ ಸುದ್ದಿಯನ್ನ ನೀಡಿದೆ. ವಸತಿ ರಹಿತರಿಗೆ ಮನೆ ನಿರ್ಮಿಸಿಕೊಡಲು ಸರ್ಕಾರ ಮುಂದಾಗಿದೆ ಎನ್ನುವ ಸುದ್ದಿಯನ್ನ ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದರು.
ರಾಜ್ಯ ಸರ್ಕಾರವು ಶೀಘ್ರವೇ ರಾಜ್ಯದ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ 5 ಲಕ್ಷ ಮನೆಗಳನ್ನು ನಿರ್ಮಿಸಿಕೊಡುವ ಘೋಷಣೆ ಹೊರಡಿಸಲಿದೆ ಎಂದು, ಜನ ಸ್ವರಾಜ್ ಸಮಾವೇಶದಲ್ಲಿ ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಹಲವು ವರ್ಷಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳ ಮಂಜೂರಾತಿ ಕುಂಠಿತಗೊಂಡಿದೆ. 5 ಲಕ್ಷ ಮನೆಗಳನ್ನು ನಿರ್ಮಿಸಿಕೊಡುವ ಚಿಂತನೆ ನಡೆದಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಶೀಘ್ರವೇ ಘೋಷಣೆ ಹೊರಡಿಸಲಿದೆ ಎಂದು ತಿಳಿಸಿದ್ದಾರೆ.
ಮದುವೆ ನಿರಾಕರಿಸಿದ ಯುವಕನಿಗೆ ಆಸಿಡ್ ಎರಚಿದ ಮಹಿಳೆ
ಜನಸ್ವರಾಜ್ ಯಾತ್ರ ಅಲ್ಲ, ಇದು ಜನಬರ್ಬಾದ್ ಯಾತ್ರೆ : ಸಿದ್ದರಾಮಯ್ಯ
ಬೊಮ್ಮಾಯಿ ಅವರೇ ಸಚಿವರ ಯಾತ್ರೆ ನಿಲ್ಲಿಸಿ.. ಮಳೆಪೀಡಿತ ಜಿಲ್ಲೆಗಳಿಗೆ ಓಡಿಸಿ