ಬೆಂಗಳೂರು: ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಬಿಸಿಲು ಹೆಚ್ಚಾಗುತ್ತಿದ್ದು, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ ಹೆಚ್ಚಾಗಲಿದೆ. ಅಲ್ಲದೇ, 2 ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ತಾಪಮಾನ ಏರಿಕೆಯಾಗಲಿದೆ. ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ನಷ್ಟು ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಾಮರಾಜನಗರದಲ್ಲಿ 13.2 ರಷ್ಟು ಡಿಗ್ರಿ ಸೆಲ್ಸಿಯಸ್ ಇದ್ದು, ಅತ್ಯಂತ ಕನಿಷ್ಠ ಉಷ್ಣಾಂಶ ಇರುವ ನಗರವಾಗಲಿದೆ. ಕಾರವಾರದಲ್ಲಿ ಗರಿಷ್ಠ 37 ಡಿಗ್ರಿ ಹಾಗೂ ಕನಿಷ್ಠ 21 ಡಿಗ್ರಿ ಕನಿಷ್ಠ ಉಷ್ಣಾಂಶ ಇರಲಿದ್ದು ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಅತೀ ಹೆಚ್ಚು ಉಷ್ಣಾಂಶ ಇರಲಿದೆ. ರಾಯಚೂರು, ಶಿವಮೊಗ್ಗದಲ್ಲಿ 35 ಗರಿಷ್ಠ ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರು: 33-17, ಮಂಗಳೂರು: 33-23, ಬೆಳಗಾವಿ: 33-21, ಬೀದರ್: 34-20, ವಿಜಯಪುರ: 35-18
ಬಾಗಲಕೋಟೆ: 35-19, ಹೊನ್ನಾವರ: 33-19, ಕಾರವಾರ: 37-21, ಧಾರವಾಡ: 35-18,
ಹಾವೇರಿ: 34-17, ರಾಯಚೂರು: 36-20, ಚಿಕ್ಕಮಗಳೂರು: 30-13, ಚಿತ್ರದುರ್ಗದಲ್ಲಿ: 35-18,
ದಾವಣಗೆರೆ: 35-15, ಚಿಂತಾಮಣಿ: 34-13, ಮೈಸೂರು: 33. ಶಿವಮೊಗ್ಗ: 36-16 ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.