ಅಮರಾವತಿ: ಕೋಲಿನಿಂದ ಹೊಡಿದಾಡಿಕೊಳ್ಳುವ ಸಂಪ್ರದಾಯದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ನೂರಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ಆಂಧ್ರದ ಕರ್ನೂಲು ಜಿಲ್ಲೆಯ ಹೊಳಗುಂದ ಮಂಡಲದ ದೇವರಗುಡ್ಡದಲ್ಲಿ ನಡೆದಿದೆ. ಕೋಲುಗಳನ್ನು ಹಿಡಿದು ಬಡಿದಾಡಿಕೊಳ್ಳುವ (Stick Fight) ಸಂಪ್ರದಾಯದಲ್ಲಿ ಮೂವರ ಸ್ಥಿತಿ ತೀರಾ ಗಂಭೀರವಾಗಿದೆ.
ಅಮರಾವತಿ: ಆಂಧ್ರದ ಕರ್ನೂಲು ಜಿಲ್ಲೆಯ ಹೊಳಗುಂದ ಮಂಡಲದ ದೇವರಗುಡ್ಡ ಎಂಬಲ್ಲಿ ಈ ಬಾರಿಯೂ ಮತ್ತೊಮ್ಮೆ ರಕ್ತ ಸುರಿದಿದೆ. ಕೋಲುಗಳನ್ನು ಹಿಡಿದು ಬಡಿದಾಡಿಕೊಳ್ಳುವ (Stick Fight) ಸಂಪ್ರದಾಯದಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.
ದೇವರ ಗುಡ್ಡದಲ್ಲಿ ವಿಜಯದಶಮಿಯ ರಾತ್ರಿ ವಿಶಿಷ್ಠ ಆಚರಣೆಯೊಂದು ನಡೆಯುತ್ತದೆ. ನೆರಣಕಿ ಗ್ರಾಮಕ್ಕೆ ಸೇರಿದ ಮೀಸಲು ಅರಣ್ಯಪ್ರದೇಶದ ಗುಡ್ಡದ ಮೇಲಿರೋ ಮಾಳ ಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಜಯದಶಮಿ ದಿನರಾತ್ರಿ ಇಲ್ಲಿನ ಮಾಳಮ್ಮ ಮತ್ತು ಮಲ್ಲೇಶ್ವರ ಸ್ವಾಮಿಗೆ ಕಲ್ಯಾಣೋತ್ಸವ ನಡೆಯುತ್ತದೆ.