ಹಣದ ವಿಚಾರಕ್ಕೆ ತಂದೆಯನ್ನೇ ಮಕ್ಕಳು ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಲಕ್ಕುಂಡಿ ಗ್ರಾಮದ ವಿವೇಕಾನಂದ ಕರಿಯಲ್ಲಪ್ಪನವರ್(52) ಸಾವನ್ನಪ್ಪಿದ ದುರ್ದೈವಿ. ಮೊದಲ ಪತ್ನಿ ಕಸ್ತೂರಮ್ಮ ಪುತ್ರರಾದ ಪ್ರಕಾಶ್, ಮಲ್ಲೇಶ್ ಎಂಬುವವರು ಬೆಳಗ್ಗೆ ಮನೆಯಲ್ಲಿ ತಂದೆಯನ್ನ ಕೂಡಿ ಹಾಕಿ ರಾಡ್ ನಿಂದ ಹಲ್ಲೆ ಮಾಡಿದ್ದಾರೆ. ಹೀಗಾಗಿ ಆತನನ್ನು ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ.
ಕರಿಯಲ್ಲಪ್ಪನವರ್ ತಮ್ಮ 6 ಎಕರೆ ಜಮೀನಿನಲ್ಲಿ ಮೂರು ಎಕರೆ ಮಾರಾಟ ಮಾಡಿದ್ದರು. ಮಾರಾಟ ಮಾಡಿ ಬಂದಿದ್ದ 1.30 ಲಕ್ಷ ರೂಪಾಯಿ ಹಂಚಿಕೆ ವಿಚಾರಕ್ಕೆ ಗಲಾಟೆ ನಡೆದಿದೆ. ಎರಡನೇ ಪತ್ನಿ ರೇಖಾ ಎಂಬುವವರು ಜಮೀನಿಗೆ ತೆರಳಿದ್ದಾಗ, ಮೊದಲ ಪತ್ನಿ ಕಸ್ತೂರಮ್ಮ ಪುತ್ರರು ಮನೆಗೆ ಬಂದು ತಂದೆ ಕೂಡಿ ಹಾಕಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಸದ್ಯ ಈ ಕುರಿತು ಗದಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.