ಬಾಗಲಕೋಟೆ: ಬ್ರಿಟಿಷರಿಗೆ ವೀರ ಸಾವರ್ಕರ್ ಕ್ಷಮಾಪಣಾ ಪತ್ರ ಬರೆದುಕೊಟ್ಟದ್ದು ಬಿಟ್ಟರೆ ಈ ದರಿದ್ರ ಆರ್ಎಸ್ಎಸ್, ಸಂಘಪರಿವಾರದವರಿಗೆ ಸ್ವಾತಂತ್ರ್ಯ ಹೋರಾಟದ ಯಾವ ಹಿನ್ನೆಲೆಯೂ ಇಲ್ಲ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್ ಹಿರೇಮಠ ಅವರು ಹೇಳಿಕೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಶಾಸಕ ಯತ್ನಾಳ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಸನಗೌಡ ಯತ್ನಾಳ ಅಂತಹವರ ಉದ್ಧಟತನದ ಹೇಳಿಕೆ ಒಬ್ಬ ಜನಪ್ರತಿನಿಧಿಗೆ ಶೋಭೆ ತರುವುದಿಲ್ಲ. ಯತ್ನಾಳ ಅಷ್ಟೇ ಅಲ್ಲ ಇಂತಹ ನಾಲಿಗೆ ಹರಿಯಬಿಡುವವರು ತಕ್ಷಣ ತಮ್ಮ ಬಾಯಿ ಬಂದ್ ಮಾಡಬೇಕು ಎಂದು ಆಗ್ರಹಿಸಿದರು. ಅಲ್ಲದೆ ಬಸನಗೌಡ ಪಾಟೀಲ ಯತ್ನಾಳ ಅಂತಹವರು ಬಹುಬೇಗ ಜನರ ವಿಶ್ವಾಸ ಕಳೆದುಕೊಳ್ಳಲಿದ್ದಾರೆ ಎಂದು ಭವಿಷ್ಯ ನುಡಿದರು.
ಇನ್ನು ಈ ದರಿದ್ರ ಆರ್ ಎಸ್ ಎಸ್, ಸಂಘಪರಿವಾರದಲ್ಲಿ ಯಾರೂ ಸ್ವಾತಂತ್ರ್ಯ ಹೋರಾಟಗಾರರೇ ಇಲ್ಲ. ಹೀಗಿದ್ದ ಮೇಲೆ ದೊರೆಸ್ವಾಮಿ ಅವರನ್ನು ಕೇಳಲು ಇರ್ಯಾರು ಎಂದು ಹಿರೇಮಠ ಅವರು ಪ್ರಶ್ನಿಸಿದರು.
ಈ ಒಂದು ಕೆಲಸ ಮಾಡಿ ನೋಡಿ ನಿಮ್ಮ ಮನೆಯಲ್ಲಿ ಅದೃಷ್ಟದ ಲಕ್ಷ್ಮಿ ನಿಮ್ಮ ಮನೆ ಬಾಗಿಲನ್ನ ತಟ್ಟುತ್ತಾಳೆ …
ಕೆಲವೊಬ್ಬರ ಮನೆಯಲ್ಲಿ ಚೆನ್ನಾಗಿ ನಡೆಯುತ್ತಿದ್ದ ಕೆಲಸ ಕಾರ್ಯಗಳು ಆಕಸ್ಮಿಕವಾಗಿ ಎಲ್ಲವೂ ಉಲ್ಟಾಪಲ್ಟಾ ಆಗಿಹೋಗುತ್ತದೆ. ಇಷ್ಟೇ ಅಲ್ಲದೆ ಕೆಲವೊಂದು ಬಾರಿ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗಿ ತಮ್ಮದೇ ಮನೆಯಲ್ಲಿ...








