ಕುಡಿದು ಕಾರು ಚಲಾಯಿಸುತ್ತಿದ್ದವರನ್ನು ತಪಾಸಣೆಗೆ ಒಳಪಡಿಸಲು ಬಂದ ಪೊಲೀಸರನ್ನೇ ಯುವಕರು ತಳ್ಳಿ ಪರಾರಿಯಾಗಿದ್ದರು. ಆದರೆ, ಪೊಲೀಸರು ಸಿನಿಮೀಯ ರೀತಿಯಲ್ಲಿ ಯುವಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಲ್ಲೇಶ್ವರಂ ಸಂಚಾರ ಪೊಲೀಸರನ್ನು ತಳ್ಳಿ ಯುವಕರು ಪರಾರಿಯಾಗಿದ್ದರು. ಪೊಲೀಸರು, ಶ್ರೀರಾಮಪುರ ಮೆಟ್ರೋ ನಿಲ್ದಾಣದ ಬಳಿ ತಡರಾತ್ರಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಪೊಲೀಸರು ಕುಡಿದು ಕಾರು ಚಲಾಯಿಸುತ್ತಿದ್ದ ಯುವಕರನ್ನು ತಡೆದಿದ್ದಾರೆ.
ಈ ವೇಳೆ ಕಾರಿನಲ್ಲಿ ಮದ್ಯದ ಬಾಟಲಿ ಪತ್ತೆಯಾಗಿವೆ. ಇದನ್ನು ಪ್ರಶ್ನಿಸುತ್ತಿದ್ದಂತೆ, ಯುವಕರು ಮದ್ಯದ ಬಾಟಲಿಗಳನ್ನು ಕಾರಿನಿಂದ ಹೊರಗೆ ಎಸೆದು ಗಲಾಟೆ ಮಾಡಿದ್ದಾರೆ. ಆಗ ಪೊಲೀಸರನ್ನೇ ತಳ್ಳಿ ಕಾರು ಸಮೇತ ಪರಾರಿಯಾಗಲು ಮುಂದಾಗಿದ್ದಾರೆ. ಆಗ ಪೊಲೀಸರು ಚೇಸ್ ಮಾಡಿ ಯುವಕರನ್ನು ವಶಕ್ಕೆ ಪಡೆದಿದ್ದಾರೆ.