ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಬಗೀನಗೆರೆ ಗ್ರಾಮದಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿದ್ದ 4 ಹಸುಗಳನ್ನು ಕದ್ದ ಖದೀಮರು, ಗ್ರಾಮದ ಹೊರವಲಯದಲ್ಲಿ ಹತ್ಯೆ ಮಾಡಿ ಮಾಂಸ ಹೊತ್ತೊಯ್ದಿದ್ದಾರೆ.
ಗ್ರಾಮದ ರೈತ ರಾಮಯ್ಯ ಎಂಬುವವರಿಗೆ ಸೇರಿದ್ದ ಹಸುಗಳನ್ನೇ ಖದೀಮರು ಕದ್ದಿದ್ದಾರೆ. ತೋಟದ ಮನೆಯ ಕೊಟ್ಟಿಗೆಯಲ್ಲಿದ್ದ ಹಸುಗಳ ರಾತ್ರೋರಾತ್ರಿ ಕಳ್ಳತನ ಮಾಡಿರುವ ಖದೀಮರು, ಹಸುಗಳನ್ನು ಗ್ರಾಮದ ಹೊರವಲಯದಲ್ಲಿ ಕೊಂದು ಮಾಂಸ ಹಾಗೂ ಚರ್ಮವನ್ನು ಬೇರ್ಪಡಿಸಿ ಉಳಿದ ಶರೀರದ ಭಾಗಗಳನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.
ಈ ಕುರಿತು ರೈತ ರಾಮಯ್ಯ ಕುದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸುಮಾರು 2ಲಕ್ಷ ಬೆಲೆಬಾಳುವ ಹಸುಗಳನ್ನು ಕಳೆದುಕೊಂಡು ರಾಮಯ್ಯ ಕಂಗಾಲಾಗಿದ್ದು ಕೂಡಲೇ ಆರೋಪಿಗಳನ್ನು ಬಂಧಿಸಿ, ಸೂಕ್ತ ಪರಿಹಾರ ನೀಡುವಂತೆ ಪೊಲೀಸರಲ್ಲಿ ಮನವಿ ಮಾಡಿದ್ದಾರೆ.