ಬೆಂಗಳೂರು : ರಾಜ್ಯದಲ್ಲಿ ಒಂದೆಡೆ ಕೊರೊನಾ ಸೋಂಕು ಹೆಚ್ಚಾಗುತ್ತಿವೆ. ಮತ್ತೊದೆಡೆ ಭೂ ಸುಧಾರಣೆ ಕಾಯ್ದೆ ವಿರೋಧಿಯ ಹೋರಾಟದ ಕೂಗು ಹೆಚ್ಚು ಕೇಳಿ ಬರುತ್ತಿದೆ. ಭೂ ಸುಧಾರಣೆ ಕಾಯ್ದೆ ತಿದ್ದು ಪಡಿಯನ್ನು ವಿರೋಧಿಸಿ ರೈತ ಸಂಘಟನೆಗಳನ್ನು ಪ್ರತಿಭಟನೆ ನಡೆಸುತ್ತಿವೆ.
ಆದರೆ ಭೂ ಸುಧಾರಣೆ ಕಾಯ್ದೆಯಲ್ಲಿ ಯಾವ ರೀತಿ ತಿದ್ದುಪಡಿ ಸರ್ಕಾರ ಮಾಡುತ್ತದೆ ಎಂಬ ವಿಚಾರ ಸಾಕಷ್ಟು ಚರ್ಚೆ ಕಾರಣವಾಗಿ. ಈ ಹಿನ್ನೆಲೆಯಲ್ಲಿ ಯಾವ ಸೆಕ್ಷನ್ ತಿದ್ದುಪಡಿ ಮಾಡುತ್ತದೆ ಎಂಬುದು ಯಕ್ಷ ಪ್ರಶ್ನೆಯಾಗಿತ್ತು. ಇತ್ತಿಚ್ಚಿಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರವು ಕರ್ನಾಟಕ ಭೂ ಸುಧಾರಣೆ ಕಾಯ್ದೆ 1961ರ ಸೆಕ್ಷನ್ 79 ಎ, ಬಿ, ಸಿ ಮತ್ತು 80 ನ್ನು ಪೂರ್ವಾನ್ವಯವಾಗುವಂತೆ ರದ್ದುಪಡಿಸಲು ಚರ್ಚೆ ನಡೆಸಿದೆ.
ಅಲ್ಲದೆ ಪ್ರಸ್ತುತ ಬಾಕಿ ಉಳಿದಿರುವ 79ಎ ಮತ್ತು 79ಬಿ ಪ್ರಕರಣಗಳನ್ನು ವಜಾ ಮಾಡುವುದು. ಸೆಕ್ಷನ್ 63 ರಡಿ ವ್ಯಕ್ತಿಗೆ ಅಥವಾ ಒಂದು ಕುಟುಂಬ ಕೃಷಿ ಭೂಮಿ ಹೊಂದಬಹುದಾದ ಪ್ರಮಾಣವನ್ನು 10 ಯುನಿಟ್ನಿಂದ 20 ಯುನಿಟ್ಗೆ, ಗರಿಷ್ಠ 40 ಯುನಿಟ್ಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಸರ್ಕಾರದ ಈ ನಡೆ ವಿರೋಧ ಪಕ್ಷಗಳ ಮತ್ತು ರೈತರ ಆಕ್ರೋಶಕ್ಕೆ ಕಾರಣವಾಗಿದೆ.