ADVERTISEMENT
Wednesday, May 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯ ಬಿಜೆಪಿಗೆ ಮತ್ತೆ ಆವರಿಸಿಕೊಂಡ ಬಂಡಾಯದ ಸೋಂಕು..! ಸಿಎಂ ಬಿಎಸ್ ವೈಗೆ ಇದು ಕೋವಿಡ್‍ಗಿಂತಲೂ ಮಾರಕ…!

admin by admin
May 26, 2021
in Newsbeat, Politics, ರಾಜಕೀಯ
cm bsy saakshatv karnataka
Share on FacebookShare on TwitterShare on WhatsappShare on Telegram

ರಾಜ್ಯ ಬಿಜೆಪಿಗೆ ಮತ್ತೆ ಆವರಿಸಿಕೊಂಡ ಬಂಡಾಯದ ಸೋಂಕು..! ಸಿಎಂ ಬಿಎಸ್ ವೈಗೆ ಇದು ಕೋವಿಡ್‍ಗಿಂತಲೂ ಮಾರಕ…!

amith sha bsy saakshatvಮಹಾಮಾರಿ ಕೋವಿಡ್ ಸೋಂಕಿಗಿಂತಲೂ ಕರ್ನಾಟಕ ಬಿಜೆಪಿಗೆ ಅಧಿಕಾರದ ಆಮಲು ಆವರಿಸಿಕೊಂಡಂತಿದೆ. ಯಾಕಂದ್ರೆ ಸಿಎಂ ಬಿ.ಎಸ್. ಯಡಿಯೂರಪ್ಪ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆ ನಡೆಯುತ್ತಿದೆ.
ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ಜನರು ಒದ್ದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಬಿಸಿ ಬಿಸಿ ಚರ್ಚೆಗಳು ನಡೆಯುತ್ತಿವೆ.
ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣವನ್ನು ತಗ್ಗಿಸಲು ರಾಜ್ಯದಲ್ಲಿ ಲಾಕ್ ಡೌನ್ ಮಾಡಲಾಗಿದೆ. ಸೋಂಕಿನ ಪ್ರಮಾಣವನ್ನು ಕಮ್ಮಿ ಮಾಡಲು ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಅಧಿಕಾರಿಗಳು, ವೈದ್ಯಕೀಯ ಸಿಬ್ಬಂದಿಗಳು, ಸೇವಾಕಾರ್ಯಕರ್ತರು ಹಾಗೂ ಕೆಲವು ಜನಪ್ರತಿನಿಧಿಗಳು ಜೀವದ ಹಂಗನ್ನು ತೊರೆದು ಕೆಲಸ ಮಾಡುತ್ತಿದ್ದಾರೆ.
ಆದ್ರೆ ಇನ್ನು ಕೆಲವು ಜನ ಪ್ರತಿನಿಧಿಗಳಿಗೆ ಜನರ ಹಿತಕ್ಕಿಂತ ಅಧಿಕಾರವೇ ಮುಖ್ಯವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಸಿಎಂ ಬದಲಾವಣೆಯ ಅಗತ್ಯವಾದ್ರೂ ಏನಿದೆ ಎಂಬ ಪ್ರಶ್ನೆಗೆ ಉತ್ತರಗಳು ಹಲವಾರು.

Related posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

May 5, 2026
ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

May 5, 2026

ಹಾಗೇ ನೋಡಿದ್ರೆ ಕೋವಿಡ್ ವಿಚಾರದಲ್ಲಿ ಸಿಎಂ ಬಿಎಸ್ ವೈ ಕೆಲವೊಂದು ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಆದ್ರೆ ಬಿಜೆಪಿಯ ಸಚಿವರು, ಶಾಸಕರು, ಹಾಗೂ ವಿರೋಧ ಪಕ್ಷಗಳ ಜನನಾಯಕರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿಲ್ಲ ಎಂಬುದು ಕೂಡ ಗೊತ್ತಿಲ್ಲದ ವಿಚಾರವೇನೂ ಅಲ್ಲ.
ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು ಟೀಕಿಸುವುದರಲ್ಲೇ ತಲ್ಲೀಣವಾಗಿದೆ. ಇನ್ನೊಂದೆಡೆ ಆಡಳಿತ ಪಕ್ಷ ಬಿಜೆಪಿಯಲ್ಲೂ ವಿರೋಧಿ ಬಣ ಹೆಚ್ಚಾಗಿದೆ. ಹೀಗಾಗಿ ಬಿಎಸ್ ವೈ ಗೆ ಅಧಿಕಾರ ನಡೆಸಲು ವಿರೋಧ ಪಕ್ಷಗಳಿಗಿಂತಲೂ ಸ್ವಪಕ್ಷದ ಶಾಸಕರ ವಿರೋಧವೇ ಹೆಚ್ಚಾಗುತ್ತಿದೆ.
ಪದೇ ಪದೇ ಸಿಎಂ ಬಿಎಸ್ ವೈ ಅವರನ್ನು ನಿದ್ದೆಗೆಡಿಸುತ್ತಿರುವ ಸ್ವಪಕ್ಷದ ಶಾಸಕರು ಮುಳ್ಳಾಗಿ ಚುಚ್ಚುತ್ತಿದ್ದಾರೆ. ಹೀಗಾಗಿ ಬಿಎಸ್ ವೈ ಅಧಿಕಾರ ನಡೆಸಲು ಒದ್ದಾಟ ನಡೆಸುತ್ತಿದ್ದಾರೆ.
ಇನ್ನು ಬಿಎಸ್ ವೈ, ಪುತ್ರ ವಿಜಯೇಂದ್ರ ಅವರ ಮೇಲಿನ ವ್ಯಾಮೋಹದಿಂದಾಗಿ ಪಕ್ಷದದಲ್ಲಿ ಹಿಡಿತವನ್ನು ಕಳೆದುಕೊಳ್ಳುತ್ತಿದ್ದಾರೆ. ವಿಜಯೇಂದ್ರ ಅವರು ಆಡಳಿತದಲ್ಲಿ ಮೂಗು ತೂರಿಸುತ್ತಿರುವುದರಿಂದ ಬಿಎಸ್ ವೈ ಗೆ ವಿರೋಧಿಗಳು ಹೆಚ್ಚಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

bjp karnataka saakshatvಇನ್ನು ಉತ್ತರ ಕರ್ನಾಟಕದ ಶಾಸಕರು ಪ್ರತ್ಯೇಕ ಬಣ ರಚಿಸಿಕೊಂಡಿದ್ದಾರೆ. ಇವರಿಗೆ ಕೆಲವೊಂದು ಮಠಾಧೀಶರ ಬೆಂಬಲವೂ ಇದೆ. ಅದೇ ರೀತಿ ಉತ್ತರ ಕರ್ನಾಟಕದ ಶಾಸಕರು ಮತ್ತು ಸಂಸದರಿಗೆ ಬಿಜೆಪಿ ಹೈಕಮಾಂಡ್ ಮತ್ತು ಆರ್ ಎಸ್ ಎಸ್ ನ ಬೆಂಬಲವೂ ಇದೆ.
ಇನ್ನೊಂದೆಡೆ ಬಿಎಸ್ ವೈ ಗೆ ವಯಸ್ಸು ಕೂಡ ಅಡ್ಡಿಯಾಗುತ್ತಿದೆ. ಹೀಗಾಗಿ ಬಿಎಸ್ ವೈ ಸಿಎಂ ಸ್ಥಾನದಿಂದ ಕೆಳಗಿಳಿಯುವುದು ಅನಿವಾರ್ಯವಾಗಿದೆ. ಆದ್ರೆ ಬಿಎಸ್ ವೈ ಅಷ್ಟೊಂದು ಸುಲಭವಾಗಿ ಅಧಿಕಾರದಿಂದ ಕೆಳಗಿಳಿಯುವ ಸಾಧ್ಯತೆಗಳಿಲ್ಲ.
ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ಬಲಪಡಿಸಲು ಮತ್ತು ಅಧಿಕಾರ ಚುಕ್ಕಾಣಿ ಹಿಡಿಯಲು ಪ್ರಮುಖ ಕಾರಣ ಬಿಎಸ್ ವೈ ನಾಯಕತ್ವ. ಹೀಗಾಗಿ ಬಿಜೆಪಿ ಹೈಕಮಾಂಡ್ ಬಹಳಷ್ಟು ಯೋಚನೆ ಮಾಡಿ ನಿರ್ಧಾರ ತೆಗೆದುಕೊಳ್ಳಬೇಕಿದೆ. ಯಾಕಂದ್ರೆ ಬಿಎಸ್ ವೈ ಅವರನ್ನು ಕೆಳಗಿಳಿಸಿದ್ರೆ ಅದರಿಂದ ಆಗುವಂತಹ ಹಿನ್ನಡೆಯ ಬಗ್ಗೆ ಯೋಚನೆ ಮಾಡಬೇಕಿದೆ.

ಈ ನಡುವೆ, ಬಿಜೆಪಿ ಹೈಕಮಾಂಡ್ ನ ಸೂಚನೆಯಂತೆ ಜೂನ್ 7ರಂದು ಶಾಸಕಾಂಗ ಸಭೆಯನ್ನು ಕರೆದಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪೂರಕವಾಗಿ ಸಂಸದ ಪ್ರಹ್ಲಾದ್ ಜೋಶಿಯವರ ನೇತೃತ್ವದಲ್ಲಿ ಕೆಲವೊಂದು ಶಾಸಕರ ಜೊತೆ ಸಭೆ ಕೂಡ ನಡೆದಿದೆ.
ಒಟ್ಡಿನಲ್ಲಿ ರಾಜ್ಯದಲ್ಲಿ ಈಗ ಕೋವಿಡ್ ಗಿಂತಲೂ ರಾಜಕೀಯ ಬೆಳವಣಿಗೆಯ ಹೆಚ್ಚು ಮಹತ್ವ ಪಡೆದುಕೊಂಡಿದೆ, ಈಗಾಗಲೇ ಬಿಎಸ್ ವೈ ಉತ್ತರಾಧಿಕಾರಿಯಾಗಲು ಆರೇಳು ಮಂದಿ ರೇಸ್ ನಲ್ಲಿದ್ದಾರೆ. ಒಟ್ಟಾರೆ, ಸಿಎಂ ಬಿಎಸ್ ವೈ ಸಿಎಂ ಸ್ಥಾನದಿಂದ ಕೆಳಗಿಳಿಯುವುದು ಪಕ್ಕಾ ಅಂತನೇ ಹೇಳಲಾಗುತ್ತಿದೆ. ಆದ್ರೂ ಬಿಎಸ್ ವೈ ಅಧಿಕಾರ ಬಿಟ್ಟುಕೊಡುವುದು ಅಂದುಕೊಂಡಷ್ಟು ಸುಲಭವಿಲ್ಲ.

Tags: #saakshatvbengalurucm bsycovid karntaka\Covid19karnatakakarntakabjpstate BJP
ShareTweetSendShare
Join us on:

Related Posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

by Shwetha
May 5, 2026
0

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ-ರಾಜಕಾರಣಿ ವಿಜಯ್ ಭಾರೀ ಸಂಚಲನ ಸೃಷ್ಟಿಸಿದ್ದಾರೆ. ಅವರು ಸ್ಪರ್ಧಿಸಿದ ಎರಡು ಕ್ಷೇತ್ರಗಳಾದ ಪೆರಂಬೂರು ಮತ್ತು ತಿರುಚಿ ಈಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪೆರಂಬೂರಿನಲ್ಲಿ...

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

by Shwetha
May 5, 2026
0

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಗೆಲುವಿನ ಹಿನ್ನೆಲೆ ಭಾರತೀಯ ಜನತಾ ಪಾರ್ಟಿ (BJP) ಪ್ರತಿಕ್ರಿಯೆ ನೀಡಿದೆ. ತೆಲಂಗಾಣ ಬಿಜೆಪಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ, ನರೇಂದ್ರ...

ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯ ಹಾಡುತ್ತಾ ಹೈಕಮಾಂಡ್?

ಸಂಪುಟ ಸರ್ಕಸ್ : ಹಳಬರಿಗೆ ಕೊಕ್ ಹೊಸಬರಿಗೆ ಚಾನ್ಸ್ ಕಾಂಗ್ರೆಸ್ ನಾಯಕರ ಎದೆಯಲ್ಲಿ ಢವಢವ ಶುರು ಯಾರು IN ಯಾರು OUT !?

by Shwetha
May 5, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಈಗ ಭಾರಿ ಸಂಚಲನ ಸೃಷ್ಟಿಯಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ತುಂಬುತ್ತಿರುವ ಬೆನ್ನಲ್ಲೇ ಅಧಿಕಾರ ಹಂಚಿಕೆಯ ಸೂತ್ರ ಮತ್ತೆ ಮುನ್ನೆಲೆಗೆ...

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

by Shwetha
May 5, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ದಶಕಗಳ ಕಾಲ ತನ್ನದೇ ಆದ ಭದ್ರಕೋಟೆ ಹೊಂದಿದ್ದ ತೃಣಮೂಲ ಕಾಂಗ್ರೆಸ್‌ಗೆ ಬಿಜೆಪಿ ಪ್ರಬಲ ಪೆಟ್ಟು ನೀಡಿದ್ದು,...

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

by Shwetha
May 5, 2026
0

ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ (PK) ನೀಡಿದ್ದ ಭವಿಷ್ಯವಾಣಿ ಇದೀಗ ನಿಜವಾಗಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ವಿಜಯ್ ನೇತೃತ್ವದ ಟಿವಿಕೆ (TVK) ಭರ್ಜರಿ ಗೆಲುವು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram