ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯ ಬಿಜೆಪಿಗೆ ಮತ್ತೆ ಆವರಿಸಿಕೊಂಡ ಬಂಡಾಯದ ಸೋಂಕು..! ಸಿಎಂ ಬಿಎಸ್ ವೈಗೆ ಇದು ಕೋವಿಡ್‍ಗಿಂತಲೂ ಮಾರಕ…!

admin by admin
May 26, 2021
in Newsbeat, Politics, ರಾಜಕೀಯ
cm bsy saakshatv karnataka
Share on FacebookShare on TwitterShare on WhatsappShare on Telegram

ರಾಜ್ಯ ಬಿಜೆಪಿಗೆ ಮತ್ತೆ ಆವರಿಸಿಕೊಂಡ ಬಂಡಾಯದ ಸೋಂಕು..! ಸಿಎಂ ಬಿಎಸ್ ವೈಗೆ ಇದು ಕೋವಿಡ್‍ಗಿಂತಲೂ ಮಾರಕ…!

amith sha bsy saakshatvಮಹಾಮಾರಿ ಕೋವಿಡ್ ಸೋಂಕಿಗಿಂತಲೂ ಕರ್ನಾಟಕ ಬಿಜೆಪಿಗೆ ಅಧಿಕಾರದ ಆಮಲು ಆವರಿಸಿಕೊಂಡಂತಿದೆ. ಯಾಕಂದ್ರೆ ಸಿಎಂ ಬಿ.ಎಸ್. ಯಡಿಯೂರಪ್ಪ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆ ನಡೆಯುತ್ತಿದೆ.
ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ಜನರು ಒದ್ದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಬಿಸಿ ಬಿಸಿ ಚರ್ಚೆಗಳು ನಡೆಯುತ್ತಿವೆ.
ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣವನ್ನು ತಗ್ಗಿಸಲು ರಾಜ್ಯದಲ್ಲಿ ಲಾಕ್ ಡೌನ್ ಮಾಡಲಾಗಿದೆ. ಸೋಂಕಿನ ಪ್ರಮಾಣವನ್ನು ಕಮ್ಮಿ ಮಾಡಲು ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಅಧಿಕಾರಿಗಳು, ವೈದ್ಯಕೀಯ ಸಿಬ್ಬಂದಿಗಳು, ಸೇವಾಕಾರ್ಯಕರ್ತರು ಹಾಗೂ ಕೆಲವು ಜನಪ್ರತಿನಿಧಿಗಳು ಜೀವದ ಹಂಗನ್ನು ತೊರೆದು ಕೆಲಸ ಮಾಡುತ್ತಿದ್ದಾರೆ.
ಆದ್ರೆ ಇನ್ನು ಕೆಲವು ಜನ ಪ್ರತಿನಿಧಿಗಳಿಗೆ ಜನರ ಹಿತಕ್ಕಿಂತ ಅಧಿಕಾರವೇ ಮುಖ್ಯವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಸಿಎಂ ಬದಲಾವಣೆಯ ಅಗತ್ಯವಾದ್ರೂ ಏನಿದೆ ಎಂಬ ಪ್ರಶ್ನೆಗೆ ಉತ್ತರಗಳು ಹಲವಾರು.

Related posts

subramanya-swamy-vratam-pooja-vidhi-benefits-kuja-dosha-remedy

Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!

August 12, 2026
ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

August 12, 2026

ಹಾಗೇ ನೋಡಿದ್ರೆ ಕೋವಿಡ್ ವಿಚಾರದಲ್ಲಿ ಸಿಎಂ ಬಿಎಸ್ ವೈ ಕೆಲವೊಂದು ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಆದ್ರೆ ಬಿಜೆಪಿಯ ಸಚಿವರು, ಶಾಸಕರು, ಹಾಗೂ ವಿರೋಧ ಪಕ್ಷಗಳ ಜನನಾಯಕರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿಲ್ಲ ಎಂಬುದು ಕೂಡ ಗೊತ್ತಿಲ್ಲದ ವಿಚಾರವೇನೂ ಅಲ್ಲ.
ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು ಟೀಕಿಸುವುದರಲ್ಲೇ ತಲ್ಲೀಣವಾಗಿದೆ. ಇನ್ನೊಂದೆಡೆ ಆಡಳಿತ ಪಕ್ಷ ಬಿಜೆಪಿಯಲ್ಲೂ ವಿರೋಧಿ ಬಣ ಹೆಚ್ಚಾಗಿದೆ. ಹೀಗಾಗಿ ಬಿಎಸ್ ವೈ ಗೆ ಅಧಿಕಾರ ನಡೆಸಲು ವಿರೋಧ ಪಕ್ಷಗಳಿಗಿಂತಲೂ ಸ್ವಪಕ್ಷದ ಶಾಸಕರ ವಿರೋಧವೇ ಹೆಚ್ಚಾಗುತ್ತಿದೆ.
ಪದೇ ಪದೇ ಸಿಎಂ ಬಿಎಸ್ ವೈ ಅವರನ್ನು ನಿದ್ದೆಗೆಡಿಸುತ್ತಿರುವ ಸ್ವಪಕ್ಷದ ಶಾಸಕರು ಮುಳ್ಳಾಗಿ ಚುಚ್ಚುತ್ತಿದ್ದಾರೆ. ಹೀಗಾಗಿ ಬಿಎಸ್ ವೈ ಅಧಿಕಾರ ನಡೆಸಲು ಒದ್ದಾಟ ನಡೆಸುತ್ತಿದ್ದಾರೆ.
ಇನ್ನು ಬಿಎಸ್ ವೈ, ಪುತ್ರ ವಿಜಯೇಂದ್ರ ಅವರ ಮೇಲಿನ ವ್ಯಾಮೋಹದಿಂದಾಗಿ ಪಕ್ಷದದಲ್ಲಿ ಹಿಡಿತವನ್ನು ಕಳೆದುಕೊಳ್ಳುತ್ತಿದ್ದಾರೆ. ವಿಜಯೇಂದ್ರ ಅವರು ಆಡಳಿತದಲ್ಲಿ ಮೂಗು ತೂರಿಸುತ್ತಿರುವುದರಿಂದ ಬಿಎಸ್ ವೈ ಗೆ ವಿರೋಧಿಗಳು ಹೆಚ್ಚಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

bjp karnataka saakshatvಇನ್ನು ಉತ್ತರ ಕರ್ನಾಟಕದ ಶಾಸಕರು ಪ್ರತ್ಯೇಕ ಬಣ ರಚಿಸಿಕೊಂಡಿದ್ದಾರೆ. ಇವರಿಗೆ ಕೆಲವೊಂದು ಮಠಾಧೀಶರ ಬೆಂಬಲವೂ ಇದೆ. ಅದೇ ರೀತಿ ಉತ್ತರ ಕರ್ನಾಟಕದ ಶಾಸಕರು ಮತ್ತು ಸಂಸದರಿಗೆ ಬಿಜೆಪಿ ಹೈಕಮಾಂಡ್ ಮತ್ತು ಆರ್ ಎಸ್ ಎಸ್ ನ ಬೆಂಬಲವೂ ಇದೆ.
ಇನ್ನೊಂದೆಡೆ ಬಿಎಸ್ ವೈ ಗೆ ವಯಸ್ಸು ಕೂಡ ಅಡ್ಡಿಯಾಗುತ್ತಿದೆ. ಹೀಗಾಗಿ ಬಿಎಸ್ ವೈ ಸಿಎಂ ಸ್ಥಾನದಿಂದ ಕೆಳಗಿಳಿಯುವುದು ಅನಿವಾರ್ಯವಾಗಿದೆ. ಆದ್ರೆ ಬಿಎಸ್ ವೈ ಅಷ್ಟೊಂದು ಸುಲಭವಾಗಿ ಅಧಿಕಾರದಿಂದ ಕೆಳಗಿಳಿಯುವ ಸಾಧ್ಯತೆಗಳಿಲ್ಲ.
ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ಬಲಪಡಿಸಲು ಮತ್ತು ಅಧಿಕಾರ ಚುಕ್ಕಾಣಿ ಹಿಡಿಯಲು ಪ್ರಮುಖ ಕಾರಣ ಬಿಎಸ್ ವೈ ನಾಯಕತ್ವ. ಹೀಗಾಗಿ ಬಿಜೆಪಿ ಹೈಕಮಾಂಡ್ ಬಹಳಷ್ಟು ಯೋಚನೆ ಮಾಡಿ ನಿರ್ಧಾರ ತೆಗೆದುಕೊಳ್ಳಬೇಕಿದೆ. ಯಾಕಂದ್ರೆ ಬಿಎಸ್ ವೈ ಅವರನ್ನು ಕೆಳಗಿಳಿಸಿದ್ರೆ ಅದರಿಂದ ಆಗುವಂತಹ ಹಿನ್ನಡೆಯ ಬಗ್ಗೆ ಯೋಚನೆ ಮಾಡಬೇಕಿದೆ.

ಈ ನಡುವೆ, ಬಿಜೆಪಿ ಹೈಕಮಾಂಡ್ ನ ಸೂಚನೆಯಂತೆ ಜೂನ್ 7ರಂದು ಶಾಸಕಾಂಗ ಸಭೆಯನ್ನು ಕರೆದಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪೂರಕವಾಗಿ ಸಂಸದ ಪ್ರಹ್ಲಾದ್ ಜೋಶಿಯವರ ನೇತೃತ್ವದಲ್ಲಿ ಕೆಲವೊಂದು ಶಾಸಕರ ಜೊತೆ ಸಭೆ ಕೂಡ ನಡೆದಿದೆ.
ಒಟ್ಡಿನಲ್ಲಿ ರಾಜ್ಯದಲ್ಲಿ ಈಗ ಕೋವಿಡ್ ಗಿಂತಲೂ ರಾಜಕೀಯ ಬೆಳವಣಿಗೆಯ ಹೆಚ್ಚು ಮಹತ್ವ ಪಡೆದುಕೊಂಡಿದೆ, ಈಗಾಗಲೇ ಬಿಎಸ್ ವೈ ಉತ್ತರಾಧಿಕಾರಿಯಾಗಲು ಆರೇಳು ಮಂದಿ ರೇಸ್ ನಲ್ಲಿದ್ದಾರೆ. ಒಟ್ಟಾರೆ, ಸಿಎಂ ಬಿಎಸ್ ವೈ ಸಿಎಂ ಸ್ಥಾನದಿಂದ ಕೆಳಗಿಳಿಯುವುದು ಪಕ್ಕಾ ಅಂತನೇ ಹೇಳಲಾಗುತ್ತಿದೆ. ಆದ್ರೂ ಬಿಎಸ್ ವೈ ಅಧಿಕಾರ ಬಿಟ್ಟುಕೊಡುವುದು ಅಂದುಕೊಂಡಷ್ಟು ಸುಲಭವಿಲ್ಲ.

Tags: #saakshatvbengalurucm bsycovid karntaka\Covid19karnatakakarntakabjpstate BJP
ShareTweetSendShare
Join us on:

Related Posts

subramanya-swamy-vratam-pooja-vidhi-benefits-kuja-dosha-remedy

Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!

by admin
August 12, 2026
0

ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ವ್ರತವು ಅತ್ಯಂತ ವೈಭವದಿಂದ ತುಂಬಿರುವ ಮತ್ತು ಭಕ್ತರ ಆಸೆಗಳನ್ನು ಪೂರೈಸುವ ದೈವಿಕ ಸೃಷ್ಟಿ. ಈ ಉಪವಾಸವು ಪರಮಶಿವುನಿಯ ಪುತ್ರ, ಜ್ಞಾನದಾತ ಸುಬ್ರಹ್ಮಣ್ಯ ಸ್ವಾಮಿಯ...

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

by Shwetha
August 12, 2026
0

ವಿಧಾನ ಪರಿಷತ್ ಸಭಾಪತಿ ಹುದ್ದೆಯ ಗೌರವಕ್ಕೆ ಧಕ್ಕೆ ತಂದ ಸರ್ಕಾರದ ನಡೆಗೆ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ. 1956ರ ನಂತರ ರಾಜ್ಯದ ಇತಿಹಾಸದಲ್ಲೇ ಇಂತಹ...

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

by Shwetha
August 12, 2026
0

ಸಂಸತ್ತಿನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆ ಹಾಗೂ ಪೊಲೀಸ್ ಕ್ರಮದ ಕುರಿತ ಚರ್ಚೆಯ ನಡುವೆ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಕಾಂಗ್ರೆಸ್ ನಾಯಕ ರಾಹುಲ್...

2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಸಚಿವ ರಾಮಲಿಂಗಾರೆಡ್ಡಿ

2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಸಚಿವ ರಾಮಲಿಂಗಾರೆಡ್ಡಿ

by Shwetha
August 12, 2026
0

2027ರ ವೇಳೆಗೆ ಎತ್ತಿನಹೊಳೆ ಯೋಜನೆಯ ನೀರು ಕೋಲಾರ ಜಿಲ್ಲೆಗೆ ಹರಿಯಲಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ...

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

by Shwetha
August 12, 2026
0

ಹೊಸ ದೆಹಲಿ: ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಪ್ರತಿದಿನವೂ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ ಎಂದು ಬಾಲಿವುಡ್ ನಟಿ ಹಾಗೂ ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram