ನಮ್ಮ ಪಾರ್ಟಿಗೆ ಯಾವುದೇ ಜಾತಿ ಇಲ್ಲ : ಮಠಾಧೀಶರಿಗೆ ಸಿ.ಟಿ.ರವಿ ಟಾಂಗ್
ಬೆಂಗಳೂರು : ನಮ್ಮ ಪಾರ್ಟಿಗೆ ಯಾವುದೇ ಜಾತಿ ಇಲ್ಲ, ನಮ್ಮ ಪಾರ್ಟಿಗೆ ಇರುವುದು ಸಿದ್ಧಾಂತ ಮಾತ್ರ. ಆ ಸಿದ್ಧಾಂತದ ಆಧಾರದ ಮೇಲೆ ಪಾರ್ಟಿ ಬೆಳೆದಿದೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.
ಸಿಎಂ ಬದಲಾವಣೆ ವಿಚಾರದಲ್ಲಿ ಮಠಾಧೀಶರು ಬಿ.ಎಸ್.ಯಡಿಯೂರಪ್ಪನವರ ಪರ ನಿಂತಿರುವ ಬಗ್ಗೆ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದು, ನಮ್ಮ ಪಾರ್ಟಿಗೆ ಯಾವುದೇ ಜಾತಿ ಇಲ್ಲ, ನಮ್ಮ ಪಾರ್ಟಿಗೆ ಇರುವುದು ಸಿದ್ಧಾಂತ ಮಾತ್ರ.
ಆ ಸಿದ್ಧಾಂತದ ಆಧಾರದ ಮೇಲೆ ಪಾರ್ಟಿ ಬೆಳೆದಿದೆ. ನಮ್ಮ ಪಕ್ಷದ ಬೆಳವಣಿಗೆಗೆ ನೂರಾರು ಮಠಾಧಿಪತಿಗಳು ಬೆಂಬಲ ಆಶೀರ್ವಾದ ಮಾಡಿದ್ದಾರೆ.
ಅದಕ್ಕೆ ನಾವು ಚುನಾವಣೆಯಲ್ಲಿ 100 ಕ್ಕು ಹೆಚ್ಚು ಸ್ಥಾನ ಗೆದ್ದಿದ್ದು. ನಮ್ಮ ಪಕ್ಷಕ್ಕೆ ಜಾತಿ ಇಲ್ಲ. ಸಿದ್ದಾಂತದ ಪಕ್ಷ ನಮ್ಮದು ಎಂದು ಮಠಾಧೀಶರಿಗೆ ಸಿ.ಟಿ.ರವಿ ಟಾಂಗ್ ನೀಡಿದ್ದಾರೆ.
ಇನ್ನು ನಾವು ಬೀದಿಯಲ್ಲಿ ನಿಂತು ಹೋರಾಟ ಮಾಡುವಾಗ ಹೊಡೆತ ತಿಂದವರು. ನಮ್ಮ ಪಾರ್ಟಿಯಲ್ಲಿ ಎಂಎಲ್ ಎ ಇದ್ದದ್ದು ಯಡಿಯೂರಪ್ಪ ಒಬ್ಬರೆ.
ನಾನು ಬಾವುಟ ಕಟ್ಟುತ್ತಿದ್ದೆ. ಆಗ ದೇವೇಗೌಡರು ಪಕ್ಷ ಸೇರು ಅಂದಿದ್ದರು. ನಮ್ ಈ ಪಕ್ಷದ ಸಿದ್ದಾಂತ ದೇಶದ ಹಿತವಾಗಿತ್ತು. ಅದಕ್ಕೆ ನಾನು ಬಿಜೆಪಿಗೆ ಬಂದೆ. ನಮಗೆ ಅಧಿಕಾರ ಸಿಕ್ಕಾಗ ಜಾತಿ ಬರುತ್ತೆ.
ನಾವು ಜೈಲಿಗೆ ಹೋಗುವಾಗ ಯಾವ ಜಾತಿ ಬರಲಿಲ್ಲ. ಎಲ್ಲ ಜಾತಿಗಳ ಸಹಕಾರ ಇದ್ದರೆ ಮಾತ್ರ ಅಧಿಕಾರ ಇಲ್ಲವಾದರೆ ಅಧಿಕಾರಕ್ಕೆ ಬರುತ್ತಿರಲಿಲ್ಲ ಎಂದರು.
ಸಂಪುಟ ಪುನರ್ ರಚನೆ ವಿಚಾರವಾಗಿ ಮಾತನಾಡಿದ ಸಿ.ಟಿ.ರವಿ, ಅದು ಸಿಎಂಗೆ ಪರಮಾಧಿಕಾರ. ನಾವು ಪಕ್ಷದಲ್ಲಿ ಕೋರ್ ಕಮಿಟಿ ಸಭೆಯಲ್ಲಿ ಇದರ ಬಗ್ಗೆ ಚರ್ಚೆ ಮಾಡಬಹುದು ಎಂದರು.