ADVERTISEMENT
Wednesday, July 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹೈಕಮಾಂಡ್ – ‌ʻಕೈʼ ಗೂ ʻಕಮಲʼ ಕ್ಕೂ ವ್ಯತ್ಯಾಸ ಇಲ್ಲ..!

Shwetha by Shwetha
August 3, 2021
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಹೈಕಮಾಂಡ್ – ‌ʻಕೈʼ ಗೂ ʻಕಮಲʼ ಕ್ಕೂ ವ್ಯತ್ಯಾಸ ಇಲ್ಲ..!

ಹೈಕಮಾಂಡ್‌ ಮುಂದೆ ಕೈಕಟ್ಟಿ ನಿಲ್ಲೋ ಗುಲಾಮಗಿರಿ ಪದ್ದತಿಯಿಂದ ಅದ್ಯಾವಾಗ ಕರ್ನಾಟಕಕ್ಕೆ ಮುಕ್ತಿ ಸಿಗುತ್ತೋ..? ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಚುನಾವಣೆಗೆ ಟಿಕೆಟ್‌ ಪಡೆಯಲು, ಮುಖ್ಯಮಂತ್ರಿ ಆಯ್ಕೆ, ಕ್ಯಾಬಿನೆಟ್‌ ರಚನೆ ಹೀಗೆ ಏನೇ ಆಗಬೇಕಾದ್ರೂ ಎಲ್ಲವೂ ನಿರ್ಧಾರ ಆಗ್ತಾ ಇದ್ದದ್ದು ದೆಹಲಿಯಲ್ಲಿ. ಹೈಕಮಾಂಡ್‌ ನಾಯಕರ ಮನವೊಲಿಸಿಕೊಂಡ್ರೆ ಏನು ಬೇಕಾದ್ರೂ ಮಾಡಬಹುದು. ಎದುರುಹಾಕಿಕೊಂಡ್ರೆ ಪದಚ್ಯುತಿ ಗ್ಯಾರಂಟಿ ಅನ್ನೋ ಸ್ಥಿತಿ ಇತ್ತು.
There is no difference between bjp highcommand and congress highcommand
ಮತ್ತೊಂದು ರಾಷ್ಟ್ರೀಯ ಪಕ್ಷ ಭಾರತೀಯ ಜನತಾ ಪಕ್ಷ ಶಿಸ್ತಿಗೆ ಹೆಸರಾದದ್ದು. ಬಿಜೆಪಿ ಕಾಂಗ್ರೆಸ್‌ ಗಿಂತ ಭಿನ್ನವಾದ ಪಕ್ಷ ಎಂಬಂತೆ ಬಿಂಬಿಸಿಕೊಂಡಿತ್ತು. ಆದರೆ ಅಧಿಕಾರದ ವಿಚಾರ ಬಂದಾಗ ಬಿಜೆಪಿ ತಾನು ಕಾಂಗ್ರೆಸ್‌ ಗಿಂತ ಭಿನ್ನವಲ್ಲ ಅನ್ನೋದನ್ನು ಸಾಧಿಸಲು ಹೊರಟಿದೆ. ಕಳೆದ ಕೆಲ ದಿನಗಳಿಂದ ರಾಜ್ಯ ರಾಜಕಾರಣವನ್ನ ಗಮನಿಸಿದವರಿಗೆ ಇದು ಸ್ಪಷ್ಟವಾಗಿ ಗೋಚರಿಸಿರುತ್ತದೆ. 2008 ರಲ್ಲಿ ಅಧಿಕಾರಕ್ಕೆ ಬಂದಾಗ 5 ವರ್ಷದಲ್ಲಿ ಮೂವರು ಮುಖ್ಯಮಂತ್ರಿಗಳು ಬದಲಾದಾಗಲೇ ಬಿಜೆಪಿ ಕಾಂಗ್ರೆಸ್‌ಗಿಂತ ಭಿನ್ನವಲ್ಲ ಅಂತ ನಿರೂಪಿಸಿತ್ತು. 2 ವರ್ಷಗಳ ಹಿಂದೆ ರಾಜ್ಯದಲ್ಲಿ ಅಧಿಕಾರ ಹಿಡಿಯುವ ಅವಕಾಶ ಸಿಕ್ಕಾಗ ತನ್ನದೇ ನಿಯಮ(75 ವರ್ಷ ಮೀರಿದವರಿಗೆ ನಿವೃತ್ತಿ)ವನ್ನು ಮೀರಿ ಬಿ.ಎಸ್‌.ಯಡಿಯೂರಪ್ಪನವರಿಗೆ ಅವಕಾಶ ಕೊಟ್ಟು ಪೂರ್ಣಾವಧಿ ಮುಗಿಸುವ ಭರವಸೆ ನೀಡಿತ್ತು.
ಆದರೆ ಬಿಎಸ್‌ವೈ ಗೆ ವಯಸ್ಸಾಗಿದೆ ಅನ್ನೋ ಕಾರಣ ಕೊಟ್ಟು ಸಿಎಂ ಸ್ಥಾನದಿಂದ ಕೆಳಗಿಳಿಯುವಂತೆ ಮಾಡಿತು ಹೈಕಮಾಂಡ್‌. ಯಾವಾಗ ಸಿಎಂ ಬದಲಾವಣೆ ನಿರ್ಧಾರವಾಯ್ತೋ ಆಗಲೇ ಮುಂದಿನ ಸಿಎಂ ಯಾರಾಗಬೇಕು ಅನ್ನೋದು ಮುಂಚೆಯೇ ನಿರ್ಧಾರ ಮಾಡಿರಲಿಲ್ಲವೇ ಹೈಕಮಾಂಡ್‌. ಮುಖ್ಯಮಂತ್ರಿ ರಾಜೀನಾಮೆ ಕೊಟ್ಟ ಮೇಲೆ ಸಾಕಷ್ಟು ಹೈಡ್ರಾಮಾ ನಡೆಯಲು‌ ಹೈಕಮಾಂಡ್‌ ಅವಕಾಶ ಕೊಟ್ಟ ಪರಿಣಾಮ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಎಸ್‌ವೈ ಸ್ಥಳೀಯ ಹೈಕಮಾಂಡ್‌ ಆಗಿ ರೂಪಗೊಳ್ಳುವಂತೆ ಮಾಡಿತು.
ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸಿದ ಮೇಲೆ ಅವರಿಗಿರೋದು ಕೇವಲ ಒಂದೂವರೆ ವರ್ಷದ ಅವಧಿ. ಆದರೆ ಅವರು ಸಿಎಂ ಆದ ಒಂದು ವಾರದ ನಂತರವೂ ತಮ್ಮ ಸಂಪುಟ ರಚನೆ ಮಾಡಲು ಎರಡೆರಡು ಬಾರಿ ದೆಹಲಿಗೆ ತೆರಳಿ ಹೈಕಮಾಂಡ್‌ ನಾಯಕರ ಜೊತೆ ಮಾತನಾಡಲು ಗಂಟೆಗಟ್ಟಲೆ ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿದೆ. ತಮ್ಮದೇ ಪಕ್ಷದ ಸಿಎಂ ಕ್ಯಾಬಿನೆಟ್‌ ರಚಿಸಲು ದೆಹಲಿಯಲ್ಲಿ ಹೈಕಮಾಂಡ್‌ ಅಪ್ಪಣೆಗಾಗಿ ಕಾಯುವಂತಾಗಿದೆ. ಕ್ಯಾಬಿನೆಟ್‌ ರಚನೆ ಅಷ್ಟು ಸುಲಭವಲ್ಲ ನಿಜ. ಅದರಲ್ಲೂ ಈಗಿನ ಸರ್ಕಾರದಲ್ಲಿ ಮೂಲ ಶಾಸಕರು, ವಲಸಿಗ ಶಾಸಕರು, ಹಿರಿಯರು. ಕಿರಿಯರು, ಆರ್‌ಎಸ್‌ಎಸ್‌ ಕಡೆಯವರು, ಬಿಎಸ್‌ವೈ ಕಡೆಯವರು, ಪ್ರಾದೇಶಿಕ ಸಮಾನತೆ, ಸಾಮಾಜಿಕ ನ್ಯಾಯ ಹೀಗೆ ಹಲವಾರು ಚಾಲೆಂಜಸ್‌ ಇದೆ. ಇದರ ಜೊತೆಗೆ ಮುಂದಿನ ಚುನಾವಣೆಗೆ ತಯಾರಿ ಆಗಬೇಕಾಗುತ್ತೆ ಅದನ್ನೂ ಗಮನದಲ್ಲಿ ಇಟ್ಟುಕೊಳ್ಳಬೇಕಾಗುತ್ತೆ. ಎಲ್ಲರನ್ನೂ ಸಮಾಧಾನ ಪಡಿಸೋದು ಕಷ್ಟ. ಏನೇ ಸರ್ಕಸ್‌ ಮಾಡಿ ಲೆಕ್ಕಾಚಾರ ಹಾಕಿದ ಮೇಲೂ ಹಲವರಿಗೆ ಅಸಮಧಾನ ಆಗೋದು ನಿಶ್ಚಿತ.
There is no difference between bjp highcommand and congress highcommand
ಇಂದು ಕರ್ನಾಟಕದಲ್ಲಿ ಒಂದು ಕಡೆ ನೆರೆ, ಮತ್ತೊಂದು ಕಡೆ ಕೋವಿಡ್‌ ಹಾವಳಿ ಇಂತಹ ಸಂದರ್ಭದಲ್ಲಿ ಸಿಎಂ ಬದಲಾವಣೆ, ಕ್ಯಾಬಿನೆಟ್‌ ರಚನೆಗಾಗಿ ಹೊಸ ಸಿಎಂ ದೆಹಲಿಗೆ ಅಲೆಯಬೇಕಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಸರ್ಕಾರವೇ ಅಸ್ತಿತ್ವದಲ್ಲಿ ಇಲ್ಲದ ಸ್ಥಿತಿ ನಿರ್ಮಾಣಗೊಂಡಿದೆ. ಇಂತಹ ಸಂದರ್ಭದಲ್ಲಿ ಹೈಕಮಾಂಡ್‌ ನಾಯಕರಿಗೆ ಜನರ ಸಮಸ್ಯೆಗಳಿಗಿಂತ ತಮ್ಮ ಭವಿಷ್ಯದ ಲಾಭವೇ ಮುಖ್ಯವಾದಂತಿದೆ. ಇದೆಲ್ಲಾ ಗಮನಿಸಿದ್ರೆ ಕೈ ಹೈಕಮಾಂಡ್‌ ಹೇಗೆ ವರ್ತಿಸ್ತಾ ಇತ್ತೋ ಅದೇ ರೀತಿ ಬಿಜೆಪಿ ಹೈಕಮಾಂಡ್‌ ಸಹ ವರ್ತಿಸುತ್ತಿದೆ. ಹೀಗಾಗಿ ಕೈ ಕಮಾಂಡ್‌ಗೂ ಕಮಲ ಕಮಾಂಡ್‌ಗೂ ಯಾವುದೇ ವ್ಯತ್ಯಾಸವಿಲ್ಲದಂತಾಗಿದೆ. ಒಟ್ಟಿನಲ್ಲಿ ಯಾರೇ ಅಧಿಕಾರಕ್ಕೆ ಬಂದ್ರೂ ದೆಹಲಿಯಲ್ಲಿ ಕೈ ಕಟ್ಟಿ ನಿಲ್ಲೋದು ಮಾತ್ರ ತಪ್ಪಲಿಲ್ಲ ಎನ್ನುವಂತಾಗಿದೆ.

Related posts

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ: ಯದುವೀರ್ ಒಡೆಯರ್

July 7, 2026
ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

July 7, 2026

#bjp #highcommand #congress #highcommand

Tags: bjp highcommandcongress highcommand
ShareTweetSendShare
Join us on:

Related Posts

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ: ಯದುವೀರ್ ಒಡೆಯರ್

by Shwetha
July 7, 2026
0

ಯದುವೀರ್ ಒಡೆಯರ್ ಅವರು ವಿಶ್ವವಿಖ್ಯಾತ ಮೈಸೂರು ದಸರಾ ವೇಳೆ ಕಂಬಳ ಆಯೋಜಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು, ಕಂಬಳವು ಕರಾವಳಿ ಭಾಗದ ವಿಶಿಷ್ಟ ಸಂಸ್ಕೃತಿ,...

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

by Shwetha
July 7, 2026
0

ಪಾಕಿಸ್ತಾನದ ಅಧಿಕಾರಿಗಳೊಂದಿಗೆ ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಈಗ ಕಾನೂನು ಸಂಕಷ್ಟ ಎದುರಾಗಿದೆ. ಈ...

ರದ್ದಾದ BPL ಕಾರ್ಡ್‌ದಾರರಿಗೆ ಸರ್ಕಾರದ ರಿಲೀಫ್; ಅರ್ಹರಿಗೆ ಮರುಸ್ಥಾಪನೆ ಅವಕಾಶ

ರದ್ದಾದ BPL ಕಾರ್ಡ್‌ದಾರರಿಗೆ ಸರ್ಕಾರದ ರಿಲೀಫ್; ಅರ್ಹರಿಗೆ ಮರುಸ್ಥಾಪನೆ ಅವಕಾಶ

by Shwetha
July 7, 2026
0

ವಿವಿಧ ಕಾರಣಗಳಿಂದ BPL ಪಡಿತರ ಚೀಟಿ ಕಳೆದುಕೊಂಡಿದ್ದ 4 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ರಾಜ್ಯ ಆಹಾರ ಇಲಾಖೆ ಸಿಹಿ ಸುದ್ದಿ ನೀಡಿದೆ. ಅನರ್ಹರೆಂದು ಪರಿಗಣಿಸಿ APL ಕಾರ್ಡ್‌ಗಳಾಗಿ...

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

by Shwetha
July 7, 2026
0

ಮೈಸೂರಿನ ಮುಡಾ ನಿವೇಶನ ಹಂಚಿಕೆ ಹಗರಣದ ಕಿಚ್ಚು ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೂ ತಟ್ಟಿದೆ. ಮೈಸೂರು ನಗರಾಭಿವೃದ್ಧಿ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

ರಾಮಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ಆರೋಪ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
July 7, 2026
0

ಪ್ರಿಯಾಂಕ್ ಖರ್ಗೆ ಅವರು ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram