ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಮುನಿಸಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಇವೆಲ್ಲ ಪಕ್ಷದ ಹಂತದಲ್ಲಿ ಚರ್ಚೆ ಆಗಬೇಕೇ ವಿನಃ ನಮ್ಮ ನಮ್ಮಲ್ಲಿ ಅಲ್ಲ. ನಾನು ಯಾವುದೇ ಹುದ್ದೆಗೆ ಬೇಡಿಕೆ ಇಟ್ಟಿಲ್ಲ ಎಂದು ಹೇಳಿದ್ದಾರೆ.
ನಮ್ಮ ನಿವಾಸಕ್ಕೆ ಹಲವು ಬಾರಿ ಬಂದಿದ್ದಾರೆ. ಮೈಸೂರಿಗೆ ಹೋಗುವ ಉದ್ದೇಶ ಬೇರೆ, ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಉದ್ದೇಶವೇ ಬೇರೆ. ಅಡ್ಜಸ್ಟ್ ಮೆಂಟ್ ಪ್ರಶ್ನೆ ಇಲ್ಲ. ಲೋಕಸಭೆ ಚುನಾವಣೆಯಾದ ನಂತರ ಚರ್ಚೆಗೆ ಬರಬಹುದು. ಚುನಾವಣೆ ಬಳಿಕ ಯಾವ ಹೊಸ ವಿಚಾರ ಬರುತ್ತವೆಂದು ಕಾದು ನೋಡೋಣ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.