ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ: ಗೋವಿಂದ ಕಾರಜೋಳ Saaksha Tv
ಬೆಂಗಳೂರು: ಪ್ರತಿಷ್ಟಿತ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಮಹಿಳಾ ವಿಶ್ವವಿದ್ಯಾಲಯವನ್ನು ಮುಚ್ಚಲಾಗುವುದು ಎಂಬ ಸುಳ್ಳು ವದಂತಿಗಳನ್ನು ಯಾರು ಹರಡಬಾರದು. ಇಂಥ ವದಂತಿಗಳಿಗೆ ಕಿವಿಗೊಡಬಾರದು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು ಈ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಆ ಭಾಗದ ಪ್ರತಿನಿಧಿಯಾಗಿ ಕೊಡುಗೆ ನೀಡುವ ಸೌಭಾಗ್ಯ ನನ್ನದು. ಹಾಗೇ ಈ ವಿಶ್ವವಿದ್ಯಾಲಯ ಒಂದು ಜಿಲ್ಲೆಯಲ್ಲಿ, ಹದಿಮೂರು ಜಿಲ್ಲೆಗಳು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿವೆ ಎಂದು ತಿಳಸಿದ್ದಾರೆ.
ಉತ್ತರ ಕರ್ನಾಟಕದ ಅಭಿವೃದ್ದಿಗೆ ಪೂರಕವಾಗುವಂತೆ ಆ ಭಾಗದ ಹೆಣ್ಣು ಮಕ್ಕಳು ಹೆಚ್ಚು ಹೆಚ್ಚು ವಿದ್ಯಾವಂತರಾಗುವಂತೆ ಶೈಕ್ಷಣಿಕ ಉನ್ನತೀಕರಿಸಲು ಮತ್ತು ಆ ಮೂಲಕ ಸುಸಂಸ್ಕೃತ, ಸುಶಿಕ್ಷಿತ ಸಮಾಜವನ್ನು ನಿರ್ಮಿಸಿ ಸ್ವಾವಲಂಬಿ ಮಹಿಳೆಯರನ್ನು ಉತ್ತೇಜಿಸುವ ಉದ್ದೇಶದಿಂದ ಈ ವಿಶ್ವವಿದ್ಯಾಲಯವನ್ನು ಆರಂಭಿಸಲಾಗಿದೆ ಎಂದಿದ್ದಾರೆ.
ಜನಸಮುದಾಯದ ಆಶೋತ್ತರಗಳನ್ನು ಈಡೇರಿಸುವ ಕಾರ್ಯ ನನ್ನದಾಗಿದೆ. ಈ ಮಹಿಳಾ ವಿಶ್ವವಿದ್ಯಾಲಯವನ್ನು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಎಂದು ಮರು ನಾಮಕರಣ ಮಾಡಿ, ವಚನ ಸಾಹಿತ್ಯಕ್ಕೆ ಕೊಡುಗೆ ನೀಡಿದ್ದ ಅಕ್ಕಮಹಾದೇವಿಗೆ ಗೌರವ ಸಲ್ಲಿಸಿದ ಕೀರ್ತಿ ಬಿಜೆಪಿ ಸರಕಾರಕ್ಕೆ ಸಲ್ಲುತ್ತದೆ ಎಂದು ತಿಳಸಿದ್ದಾರೆ.