ಬೆಂಗಳೂರು: ರಾಜ್ಯದ(Karnataka) ಹಲವು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಇಂದಿನಿಂದ ಮೂರು ದಿನಗಳ ಕಾಲ ದಕ್ಷಿಣ ಒಳನಾಡು, ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ದಕ್ಷಿಣ ಒಳನಾಡಿನಲ್ಲಿ ಆರೆಂಜ್ ಅಲರ್ಟ್, ಕರಾವಳಿಯಲ್ಲಿ(Coastal Karnataka) ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಎರಡೂ ಪ್ರದೇಶಗಳಲ್ಲಿ ಗುಡುಗು ಹಾಗೂ ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನನಲ್ಲಿ ತಡ ರಾತ್ರಿ ಮಳೆ ಸುರಿದಿತ್ತು. ಇಂದು ಕೂಡ ಜೋರಾಗಿ ಮಳೆ ಸುರಿಯುವ ಸಾಧ್ಯತೆ ಇದೆ.