ಬೆಂಗಳೂರು 24- ಕರೋನಾ ಸೋಂಕು ಹರಡದಂತೆ ಕ್ರಮಕ್ಕೆ ಸಚಿವ ಡಾ. ನಾರಾಯಣಗೌಡ ಅವರಿಂದ ಸೂಚನೆ. ತೋಟಗಾರಿಕೆ, ಪೌರಾಡಳಿತ ಹಾಗೂ ರೇಷ್ಮೆ ಇಲಾಖೆ ವ್ಯಾಪ್ತಿಯ ನೌಕರರ ಸುರಕ್ಷತೆಗೆ ಕ್ರಮ ತೆಗೆದುಕೊಳ್ಳುವಂತೆ ಸಚಿವರು ಆದೇಶಿಸಿದ್ದಾರೆ. ಮೂರೂ ಇಲಾಖೆಯ ಕಾರ್ಯದರ್ಶಿಗಳಿಗೆ ಸಚಿವರು ಆದೇಶಿಸಿದ್ದಾರೆ. ಅದರಲ್ಲೂ ಪ್ರಮುಖವಾಗಿ ರೇಷ್ಮೆ ಬೆಳಗಾರರ ಸುರಕ್ಷತೆ ಬಗ್ಗೆ ಗಮನಹರಿಸಬೇಕು. ರೇಷ್ಮೆ ಗೂಡನ್ನ ಮಾರಾಟ ಮಾಡದೆ ಇಡಲು ಸಾಧ್ಯವಿಲ್ಲ. ರೈತರು ಮಾರುಕಟ್ಟೆಗೆ ಬಂದಾಗ ಜನಜಂಗುಳಿ ಆಗುತ್ತೆ. ಈ ಸಂದರ್ಭದಲ್ಲಿ ಕರೋನಾ ಸೋಂಕು ಹರಡುವ ಸಾಧ್ಯತೆ ಇರುತ್ತೆ. ಹೀಗಾಗಿ ರಾಜ್ಯದಲ್ಲಿರುವ ಎಲ್ಲ ರೇಷ್ಮೆ ಮಾರುಕಟ್ಟೆಯಲ್ಲಿ ಎಲ್ಲ ರೀತಿಯ ಸುರಕ್ಷತಾ ಕ್ರಮ ತೆಗೆದುಕೊಳ್ಳಬೇಕು. ರೈತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ತೋಟಗಾರಿಕೆ, ಪೌರಾಡಳಿತ ಹಾಗೂ ರೇಷ್ಮೆ ಸಚಿವ ಡಾ. ನಾರಾಯಣಗೌಡ ಸೂಚಿಸಿದ್ದಾರೆ.

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!
ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಂಜಿನಿಯರ್ ಹುದ್ದೆಗಳ...








