ಚಿಕ್ಕೋಡಿ: ಖದೀಮರು ಎಟಿಎಂ ಕೊರೆದು ಅಪಾರ ಹಣ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.
ಈ ಘಟನೆ ಅಂಬೇಡ್ಕರ್ ನಗರದ ಹತ್ತಿರ ನಡೆದಿದೆ. ಅಲ್ಲಿರುವ ಎಸ್ ಬಿಐ ಬ್ಯಾಂಕ್ನ (SBI Bank) ಎಟಿಎಂ (ATM) ಕೊರೆದು 20 ಲಕ್ಷ ರೂ.ಗೂ ಹೆಚ್ಚಿನ ಹಣ ದೋಚಿ ಪರಾರಿಯಾಗಿದ್ದಾರೆ. ಖದೀಮರು ಕಟರ್ನಿಂದ ಎಟಿಎಂ ಕಟ್ ಮಾಡಿ ಹಣ ದೋಚಿ ಪರಾರಿಯಾಗಿದ್ದಾರೆ. ಆ ನಂತರ ಖದೀಮರು, ಇಂಡಿಯನ್ ಓವರ್ಸಿಸ್ ಬ್ಯಾಂಕ್ನ ಎಟಿಎಂ ದೋಚಲು ಯತ್ನಿಸಿದ್ದಾರೆ. ಆದರೆ, ಅಲ್ಲಿ ಹಣ ತೆಗೆಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಪರಾರಿಯಾಗಿದ್ದಾರೆ.
ಪೊಲೀಸರು (Police) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿ ಬಂದಿದ್ದ ನಾಲ್ವರು ಖದೀಮರಿಂದ ಈ ಕಳ್ಳತನ ನಡೆದಿದೆ ಎಂದು ತಿಳಿದು ಬಂದಿದೆ. ಈ ಕುರಿತು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.