ತುಮಕೂರು: ಹುಲಿ ಉಗುರಿನ ಪೆಂಡೆಂಟ್ (Tiger Claw Pendent) ಪ್ರಕರಣ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲಿಯೇ ರಾಷ್ಟ್ರಪಕ್ಷಿ ನವಿಲು (Peacock) ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರನ್ನು ಬಂಧಿಸಲಾಗಿದೆ.
ಈ ಘಟನೆ ತುಮಕೂರಿನ (Tumakuru) ಮಾರನಾಯಕನಪಾಳ್ಯದಲ್ಲಿ (Maranayakanapalya) ನಡೆದಿದೆ. ಒಡಿಶಾ (Odisha) ಮೂಲದ ಬಿಟ್ಟಿಂಗ್ ನಾಯಕ್, ಬೈಷಾಕ್ ದಾವು, ದುಬಾ ಕಾಪತ್ ಬಂಧಿತರು ಎನ್ನಲಾಗಿದೆ. ಇವರೆಲ್ಲ ಮಾರನಾಯಕನಪಾಳ್ಯದ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರು ಹಲವಾರು ದಿನಗಳಿಂದಲೂ ನವಿಲು ಕೊಂದು ಭಕ್ಷಿಸುತ್ತಿದ್ದರು ಎನ್ನಲಾಗಿದೆ.
ಅರಣ್ಯ ಅಧಿಕಾರಿಗಳು 1.5 ಕೆ.ಜಿ ನವಿಲಿನ ಹಸಿ ಮಾಂಸ, ನವಿಲಿನ ಎರಡು ಕಾಲುಗಳು, ಬೇಯಿಸಿದ ಮಾಂಸ, ನವಿಲು ಹಿಡಿಯಲು ಬಳಸಿದ್ದ ಬಲೆಗಳು, ಉರುಳುಗಳು ಮತ್ತು ಮಾಂಸ ಬೇಯಿಸಿದ್ದ ಪಾತ್ರೆಗಳನ್ನು ವಶಕ್ಕೆ ಪಡೆದಿದ್ದಾರೆ.