ADVERTISEMENT
Wednesday, July 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Thugs of ramaghada : ಥಗ್ಸ್ ಆಫ್ ರಾಮಘಡ’  ಚಿತ್ರದ ಮೊದಲ ಹಾಡು ಬಿಡುಗಡೆ… 

ಫಸ್ಟ್ ಲುಕ್ ಮೂಲಕ ಗಮನ ಸೆಳೆಯುತ್ತಿರೋ ‘ಥಗ್ಸ್ ಆಫ್ ರಾಮಘಡ’ ಚಿತ್ರದ ಮೊದಲ ಸಾಂಗ್ ಬಿಡುಗಡೆಯಾಗಿದೆ. ‘ನಗು ನಗುತ ಆವರಿಸೋ ಈ ಹುಡುಗಿ' ಹಾಡನ್ನು ದಿಯಾ ಖ್ಯಾತಿಯ ನಾಯಕ ನಟ ಪೃಥ್ವಿ ಅಂಬರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ.

Naveen Kumar B C by Naveen Kumar B C
December 9, 2022
in Newsbeat, Cinema, ಮನರಂಜನೆ
Thugs of ramaghada
Share on FacebookShare on TwitterShare on WhatsappShare on Telegram

ಥಗ್ಸ್ ಆಫ್ ರಾಮಘಡ’  ಚಿತ್ರದ ಮೊದಲ ಹಾಡು ಬಿಡುಗಡೆ…

ಫಸ್ಟ್ ಲುಕ್ ಮೂಲಕ ಗಮನ ಸೆಳೆಯುತ್ತಿರೋ ‘ಥಗ್ಸ್ ಆಫ್ ರಾಮಘಡ’ ಚಿತ್ರದ ಮೊದಲ ಸಾಂಗ್ ಬಿಡುಗಡೆಯಾಗಿದೆ. ‘ನಗು ನಗುತ ಆವರಿಸೋ ಈ ಹುಡುಗಿ’ ಹಾಡನ್ನು ದಿಯಾ ಖ್ಯಾತಿಯ ನಾಯಕ ನಟ ಪೃಥ್ವಿ ಅಂಬರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ. ನಿರ್ದೇಶಕ ಕಾರ್ತಿಕ್ ನಿರ್ದೇಶಿಸಿರುವ ಮೊದಲ ಸಿನಿಮಾ ಇದಾಗಿದ್ದು, ಹಾಡು ಬಿಡುಗಡೆ ಮಾಡುವ ಮೂಲಕ ಸಿನಿಮಾ ಬಗ್ಗೆ ಚಿತ್ರತಂಡ ಒಂದಿಷ್ಟು ಇಂಟ್ರಸ್ಟಿಂಗ್ ವಿಚಾರಗಳನ್ನು ಹಂಚಿಕೊಂಡಿದೆ.

‘ನಗು ನಗುತ ಆವರಿಸೋ ಈ ಹುಡುಗಿ’ ಹಾಡಿಗೆ ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದು ಪ್ರೀತಿಯ ಹಾಡಿಗೆ ಹೆಸರಾಂತ ಗಾಯಕರಾದ ರಾಜೇಶ್ ಕೃಷ್ಣನ್, ಅನುರಾಧ ಭಟ್ ದನಿಯಾಗಿದ್ದಾರೆ. ವಿವೇಕ್ ಚಕ್ರವರ್ತಿ ಸಂಗೀತ ಸಂಯೋಜನೆ ಈ ಹಾಡಿಗಿದೆ. ಚಂದನ್ ರಾಜ್, ಅಶ್ವಿನ್ ಹಾಸನ್, ಮಹಾಲಕ್ಷ್ಮೀ ಚಿತ್ರದ ಮುಖ್ಯ ಭೂಮಿಕೆಯಲ್ಲಿದ್ದಾರೆ. ಮೂವರು ಕೂಡ ರಂಗಭೂಮಿ ಕಲಾವಿದರಾಗಿದ್ದು, ಈ ಚಿತ್ರದ ಮೂಲಕ ಸಿನಿಮಾ ಜರ್ನಿ ಆರಂಭಿಸಿದ್ದಾರೆ. ಸೂರ್ಯ ಕಿರಣ್, ಪ್ರಭು ಹೊಸದುರ್ಗ,ಅಶ್ವಿನ್ ಹಾಸನ್,ಚಂದನ್ ರಾಜ್, ಮಹಾಲಕ್ಷ್ಮಿ, ಟೈಗರ್ ಗಂಗ, ಜಗದೀಶ್,ಸೂರ್ಯಕಿರಣ್ , ರಾಘವೇಂದ್ರ, ವಿಶಾಲ್ ಪಾಟೀಲ್, ರವಿ ಸಾಲಿಯನ್, ಲೋಕೇಶ್ ಗೌಡ, ಭೀಷ್ಮ, ಸುಧೀನ್ ನಾಯರ್ ಸೇರಿದಂತೆ ಹಲವು ರಂಗಭೂಮಿ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ.

ಹಾಡು ಬಿಡುಗಡೆ ಮಾತನಾಡಿದ ನಟ ಪೃಥ್ವಿ ಅಂಬರ್ ‘ಥಗ್ಸ್ ಆಫ್ ರಾಮಘಡ’ ತುಂಬಾ ಕ್ರಿಯೇಟಿವ್ ತಂಡ ಅಂತ ಹೇಳಬಹುದು, ಪ್ರತಿ ಶಾಟ್, ಎಲಿಮೆಂಟ್ ನಲ್ಲೂ ಹೊಸತನವಿದೆ. ಹಾಡು ನೋಡಿ ತುಂಬಾ ಖುಷಿ ಆಯ್ತು. ನಿರ್ದೇಶಕರು ತುಂಬಾ ಎಫರ್ಟ್ ಹಾಕಿ, ತುಂಬಾ ಚೆನ್ನಾಗಿ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇಡೀ ಚಿತ್ರತಂಡ ತುಂಬಾ ಚೆನ್ನಾಗಿ ಅಭಿನಯ ಮಾಡಿದ್ದಾರೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದು ಸಿನಿಮಾ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ರು.

ಐಟಿ ಕ್ಷೇತ್ರ ಹಾಗೂ ಪ್ರಾಧ್ಯಾಪಕನಾಗಿ ಕೆಲಸ ಮಾಡಿದ ಅನುಭವವಿದೆ. ಸಿನಿಮಾ ಮೇಲಿನ ಅಪಾರ ಆಸಕ್ತಿಯಿಂದ ಚಿತ್ರರಂಗದ ಕಡೆ ಮುಖ ಮಾಡಿದೆ. ಇದು ನನ್ನ ನಿರ್ದೇಶನದ ಮೊದಲ ಸಿನಿಮಾ. ಮೂಲತಃ ನಾನು ಯಾದಗಿರಿಯವನು. ಈ ಚಿತ್ರದ ಕಥೆ ಉತ್ತರ ಕರ್ನಾಟಕ ಭಾಗದಲ್ಲಿ 1995ರಲ್ಲಿ ನಡೆದ ಸತ್ಯ ಘಟನೆ ಆಧರಿಸಿದ್ದು ಅದಕ್ಕೆ ಒಂದಿಷ್ಟು ಸಿನಿಮ್ಯಾಟಿಕ್ ಟಚ್ ಕೊಟ್ಟು ಕ್ರೈಂ ಕಲ್ಟ್ ಕಥಾಹಂದರದ  ಸಿನಿಮಾ ಮಾಡಿದ್ದೇವೆ. ಉತ್ತರ ಕರ್ನಾಟಕ ಭಾಗದ ಒಂದು ಚಿಕ್ಕ ಹಳ್ಳಿಯಲ್ಲಿ ನಡೆಯುವ ಕಥೆ ಇದು ಅದಕ್ಕೆಂದೇ ಪೂರ್ತಿ ಸಿನಿಮಾವನ್ನು ಉತ್ತರ ಕರ್ನಾಟಕ ಭಾಗದಲ್ಲೇ ಚಿತ್ರೀಕರಣ ನಡೆಸಲಾಗಿದೆ. ಆದಷ್ಟು ರಿಯಲಿಸ್ಟಿಕ್ ಆಗಿಯೇ ತೆರೆ ಮೇಲೆ ತರುವ ಪ್ರಯತ್ನ ಮಾಡಿದ್ದೇವೆ. ಮುಂದಿನ ವರ್ಷ ಸಿನಿಮಾ ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದೇವೆ ಎಂದು ನಿರ್ದೇಶಕ ಕಾರ್ತಿಕ್ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.

ನಾಯಕ ಚಂದನ್ ರಾಜ್ ಮಾತನಾಡಿ ನನಗೆ ಸಿನಿಮಾ ಬಿಟ್ಟು ಬೇರೇನೂ ಗೊತ್ತಿಲ್ಲ. ಸಿನಿಮಾದಲ್ಲೇ ಗೆಲ್ಲಬೇಕು ಅನ್ನೋದು ನನ್ನ ಕನಸು. ಈ ಚಿತ್ರದ ಸ್ಕ್ರೀಪ್ಟ್, ಸ್ಟೋರಿ ಲೈನ್ ಕೇಳಿದಾಗ ಏನೋ ವಿಶೇಷತೆ ಇದೆ ಅನ್ನೋದು ಗೊತ್ತಾಯ್ತು. ಒಂದು ಸಣ್ಣ ಪ್ರಯತ್ನ ಮಾಡಿದ್ದೇನೆ ಎಲ್ಲರೂ ನೋಡಿ ಪ್ರೋತ್ಸಾಹಿಸಿ. ಅಶ್ವಿನ್ ಹಾಸನ್ ಅವರಿಂದ ಈ ಪಾತ್ರ ನನಗೆ ಸಿಕ್ತು ಅವರಿಗೆ ತುಂಬಾ ಧನ್ಯವಾದ ತಿಳಿಸುತ್ತೇನೆ. ಸಿನಿಮಾ ಬಿಡುಗಡೆಯಾದ ಮೇಲೆ ಎಲ್ಲರೂ ನೋಡಿ ಪ್ರೋತ್ಸಾಹಿಸಿ ಎಂದು ಕೇಳಿಕೊಂಡ್ರು.

ನಾಯಕ ನಟಿ ಮಹಾಲಕ್ಷಿ ಮಾತನಾಡಿ ನನ್ನ ಜರ್ನಿ ಆರಂಭವಾಗಿದ್ದು ರಂಗಭೂಮಿಯಿಂದ. ನನ್ನ ಪಾತ್ರ ಉತ್ತರ ಕರ್ನಾಟಕದ ಒಂದು ಕುಗ್ರಾಮದಲ್ಲಿರುವ ಹುಡುಗಿಯ ಪಾತ್ರ. ಎಷ್ಟೇ ನೋವಿದ್ರು ನಗು ನಗುತಾ ಇರುವ ಪಾತ್ರ ನನ್ನದು. ಈ ಚಿತ್ರಕ್ಕಾಗಿ ಉತ್ತರ ಕರ್ನಾಟಕ ಭಾಷೆ ಕಲಿತು ಡಬ್ ಮಾಡಿದ್ದೇನೆ. ತುಂಬಾ ಚೆನ್ನಾಗಿ ಸಿನಿಮಾ ಮೂಡಿ ಬಂದಿದೆ ಎಲ್ಲರೂ ನೋಡಿ ಆಶೀರ್ವಾದ ಮಾಡಿ ಎಂದು ತಿಳಿಸಿದ್ರು.

ಅಶ್ವಿನ್ ಹಾಸನ್ ಮಾತನಾಡಿ ಲಾಕ್ ಡೌನ್ ನಲ್ಲಿ ಕೇಳಿದ ಕಥೆ ಇದು. ನೀವು ಸಿನಿಮಾದಲ್ಲಿ ಒಂದು ಲೀಡ್ ರೋಲ್ ನಲ್ಲಿ ಇರ್ತಿರಾ ಎಂದಾಗ ಶಾಕ್ ಆಯ್ತು. ನಿರ್ದೇಶಕರು ಏನು ಕಥೆ ಬರೆದಿದ್ದಾರೆ ಅದಕ್ಕೆ ನ್ಯಾಯ ಒದಗಿಸಬೇಕು ಅನ್ನೋದು ನನ್ನ ಪಾಲಿಸಿ. ಆ ಪ್ರಯತ್ನ ಮಾಡಿದ್ದೇನೆ. ಈ ತಂಡದಲ್ಲಿರುವ ಎಲ್ಲರಿಗೂ ಸಿನಿಮಾನೇ ಉಸಿರು. ಪ್ರತಿಯೊಬ್ಬರು ತುಂಬಾ ಡೆಡಿಕೇಶನ್ ನಿಂದ ಈ ಸಿನಿಮಾ ಮಾಡಿದ್ದಾರೆ. ಈ ಸಿನಿಮಾ ಗೆಲ್ಲುತ್ತೆ ಅನ್ನೋ ಭರವಸೆ ನಮಗಿದೆ, ಗೆಲ್ಲಲೇಬೇಕು ಎಂದು ಸಿನಿಮಾ ಮಾಡಿದ್ದೀವಿ ಎಂದು ಅನಿಸಿಕೆ ಹಂಚಿಕೊಂಡ್ರು.

ಭಾರತ್ ಟಾಕೀಸ್ ನಡಿ ಜೈ ಕುಮಾರ್, ಕೀರ್ತಿ ರಾಜ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ರಾಜೇಶ್ ಕೃಷ್ಣನ್, ಶಶಾಂಕ್ ಶೇಷಗಿರಿ, ಅನುರಾಧ ಭಟ್ ಚಿತ್ರದ ಹಾಡುಗಳಿಗೆ ದನಿಯಾಗಿದ್ದಾರೆ. ಮನು ದಾಸಪ್ಪ ಛಾಯಾಗ್ರಹಣ, ಶ್ರೀಧರ್ ಸಂಕಲನ, ವಿವೇಕ್ ಚಕ್ರವರ್ತಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

Thugs of Ramaghada: The first song of the movie Thugs of Ramaghada released…

Related posts

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ: ಯದುವೀರ್ ಒಡೆಯರ್

July 7, 2026
ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

July 7, 2026
Tags: Thugs of Ramaghada
ShareTweetSendShare
Join us on:

Related Posts

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ: ಯದುವೀರ್ ಒಡೆಯರ್

by Shwetha
July 7, 2026
0

ಯದುವೀರ್ ಒಡೆಯರ್ ಅವರು ವಿಶ್ವವಿಖ್ಯಾತ ಮೈಸೂರು ದಸರಾ ವೇಳೆ ಕಂಬಳ ಆಯೋಜಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು, ಕಂಬಳವು ಕರಾವಳಿ ಭಾಗದ ವಿಶಿಷ್ಟ ಸಂಸ್ಕೃತಿ,...

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

by Shwetha
July 7, 2026
0

ಪಾಕಿಸ್ತಾನದ ಅಧಿಕಾರಿಗಳೊಂದಿಗೆ ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಈಗ ಕಾನೂನು ಸಂಕಷ್ಟ ಎದುರಾಗಿದೆ. ಈ...

ರದ್ದಾದ BPL ಕಾರ್ಡ್‌ದಾರರಿಗೆ ಸರ್ಕಾರದ ರಿಲೀಫ್; ಅರ್ಹರಿಗೆ ಮರುಸ್ಥಾಪನೆ ಅವಕಾಶ

ರದ್ದಾದ BPL ಕಾರ್ಡ್‌ದಾರರಿಗೆ ಸರ್ಕಾರದ ರಿಲೀಫ್; ಅರ್ಹರಿಗೆ ಮರುಸ್ಥಾಪನೆ ಅವಕಾಶ

by Shwetha
July 7, 2026
0

ವಿವಿಧ ಕಾರಣಗಳಿಂದ BPL ಪಡಿತರ ಚೀಟಿ ಕಳೆದುಕೊಂಡಿದ್ದ 4 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ರಾಜ್ಯ ಆಹಾರ ಇಲಾಖೆ ಸಿಹಿ ಸುದ್ದಿ ನೀಡಿದೆ. ಅನರ್ಹರೆಂದು ಪರಿಗಣಿಸಿ APL ಕಾರ್ಡ್‌ಗಳಾಗಿ...

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

by Shwetha
July 7, 2026
0

ಮೈಸೂರಿನ ಮುಡಾ ನಿವೇಶನ ಹಂಚಿಕೆ ಹಗರಣದ ಕಿಚ್ಚು ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೂ ತಟ್ಟಿದೆ. ಮೈಸೂರು ನಗರಾಭಿವೃದ್ಧಿ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

ರಾಮಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ಆರೋಪ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
July 7, 2026
0

ಪ್ರಿಯಾಂಕ್ ಖರ್ಗೆ ಅವರು ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram