ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು ನಟ ದರ್ಶನ್ (Darshan) ಅವರಿಗೆ ನೀನ್ನೆಯಷ್ಟೇ ನೋಟಿಸ್ ನೀಡಿದ್ದರು. ಆದರೆ, ಅವರು ಗುಜರಾತ್ ಗೆ ಪ್ರಯಾಣ ಬೆಳೆಸಿದ್ದಾರೆ.
ಈ ಹಿಂದೆಯೇ ನಿಗದಿಯಾದಂತೆ ಕಾಟೇರ (Katera) ಸಿನಿಮಾದ ಶೂಟಿಂಗ್ ಗಾಗಿ ದರ್ಶನ್ ಗುಜರಾತ್ (Gujarat)ಗೆ ಪ್ರಯಾಣ ಬೆಳಸಲಿದ್ದಾರೆ. ಬೆಂಗಳೂರಿನಿಂದ ಮೈಸೂರಿಗೆ ಹೊರಟಿರುವ ದರ್ಶನ್, ಸಂಜೆ 4ಕ್ಕೆ ವಿಮಾನದ ಟಿಕೆಟ್ ಬುಕ್ ಆಗಿರುವುದರಿಂದ ಮತ್ತೆ ಬೆಂಗಳೂರಿಗೆ ಆಗಮಿಸಿ, ವಿಮಾನದಲ್ಲಿ ಹೊರಡಲಿದ್ದಾರೆ. ನಿನ್ನೆಯಷ್ಟೇ ನಟ ದರ್ಶನ್ ಅವರ ಮನೆಯಲ್ಲಿ ಅರಣ್ಯ ಅಧಿಕಾರಿಗಳು ಹುಲಿ ಉಗುರಿನ ಶೋಧ ಕಾರ್ಯ ನಡೆಸಿದ್ದರು. ಈ ಪ್ರಕರಣಕ್ಕೆ ದರ್ಶನ್ ಸಂಪೂರ್ಣ ಸಹಕಾರ ನೀಡಿರುವುದಾಗಿಯೂ ಅಧಿಕಾರಿಗಳು ಹೇಳಿದ್ದಾರೆ.