ಬೆಂಗಳೂರು:ಬಿಜೆಪಿ ಹೈಕಮಾಂಡ್ ನಿರ್ಧಾರದ ಕುರಿತು ಮಾಜಿ ಸಿಎಂ ಹಾಗೂ ಬಿಜೆಪಿಯ ಹಿರಿಯ ನಾಯಕ ಡಿ.ವಿ.ಸದಾನಂದಗೌಡ (D.V.Sadananda Gowda) ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ ಅವರು, ಹೈಕಮಾಂಡ್ ರಾಜ್ಯದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ವಿಧಾನಸಭಾ ಚುನಾವಣೆಯಲ್ಲಿ ನಾವು ಸೋತಿರಬಹುದು. ಆದರೆ, ಲೋಕಸಭೆಯಲ್ಲಿ ಗೆದ್ದು ಬೀಗುತ್ತೇವೆ. ಹೀಗಾಗಿ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಜ್ಯಕ್ಕೆ ಬರದೆ, ರಾಜ್ಯದ ವಿಪಕ್ಷ ನಾಯಕರ ಆಯ್ಕೆ ಮಾಡದಿರುವುದು ಸರಿಯಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.
ನಾನು ಹನುಮಂತ ರೀತಿ ಎದೆ ಬಗೆದು ತೋರಿಸಲಾಗಲ್ಲ. ಸತ್ಯವನ್ನೇ ಹೇಳಿದ್ದೇನೆ. ಕಠೋರವಾಗಿ ಹೇಳಿಲ್ಲ. ಯಾವುದೇ ಒತ್ತಡ ಇಲ್ಲ. ಯಾರ ಬಳಿಯೂ ಚರ್ಚೆ ಮಾಡಿಲ್ಲ. ನಾನು ನಿವೃತ್ತಿ ಆಗುತ್ತೇನೆ. ನಾನು ಇದನ್ನು 2019ರಲ್ಲಿಯೇ ಹೇಳಿದ್ದೆ. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಪಕ್ಷದ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ. ರಾಜಕಾರಣದಲ್ಲಿ ನಾನೇ ಇರಬೇಕು, ನನ್ನ ಮಕ್ಕಳಿರಬೇಕು ಎನ್ನುವ ಭಾವನೆ ನನಗಿಲ್ಲ. ಕುಟುಂಬದ ರಾಜಕಾರಣ ಸರಿಯಲ್ಲ. 32 ಲಕ್ಷ ಮತದಾರರಿರುವ ನನ್ನ ಕ್ಷೇತ್ರದ ಜನ ನಾನು ಬೆಂಗಳೂರು ಬಿಟ್ಟು ಹೋಗುತ್ತೇನೆ ಎಂದು ಹೇಳಿದರು.