ತಿರುಪತಿ ತಿಮ್ಮಪ್ಪನ ಸನ್ನಿಧಾನದಲ್ಲಿ ಉಚಿತ ಸರ್ವದರ್ಶನಕ್ಕೆ ಅನುಮತಿ..!
ತಿರುಮಲ ತಿರುಪತಿ ದೇವಸ್ಥಾನದಲ್ಲಿ ಸೆಪ್ಟೆಂಬರ್ 9 ರಿಂದ ಉಚಿತ ಸರ್ವದರ್ಶನ ಆರಂಭಿಸಲು ನಿರ್ಧರಿಸಲಾಗಿದೆ. ಹೌದು ಕೋವಿಡ್ ಹಾವಳಿ ಹೆಚ್ಚಾಗಿದ್ದ ಕಾರಣದಿಂದಾಗಿ ದೇವಾಲಯದ ಆಡಳಿತ ಮಂಡಳಿಯು ನಿಯಮಿತ ಅವಧಿ, ನಿಯಮಿತ ಸಂಖ್ಯೆಯ ಭಕ್ತಾಧಿಗಳಿಗೆ ಮಾತ್ರ ದರ್ಶನಕ್ಕೆ ಅನುವು ಮಾಡಿಕೊಡಲಾಗಿತ್ತು. ಅಷ್ಟೇ ಅಲ್ದೇ ಏಪ್ರಿಲ್ ನಲ್ಲಿ ಉಚಿತ ದರ್ಶನಕ್ಕೆ ನಿರ್ಬಂಧ ಹೇರಿತ್ತು. ಇದೀಗ ಕೋವಿಡ್ ಹಾವಳಿ ತಗ್ಗುತಯ್ತಿರುವ ಬೆನ್ನಲ್ಲೇ ಭಕ್ತಾಧಿಗಳಿಗೆ ಆಡಳಿತ ಮಂಡಳಿ ಖುಷಿ ಸುದ್ದಿ ನೀಡಿದೆ.
ಹೌದು ವೈ ವಿ ಸುಬ್ಬಾ ರೆಡ್ಡಿ ಅವರು ಸತತ 2ನೇ ಬಾರಿಗೆ ಟಿಟಿಡಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಉಚಿತ ದರ್ಶನವನ್ನ ಪುನರಾರಂಭಿಸಲಾಗುವುದು ಎಂದು ಹೇಳಿತ್ತು. ಅದದರಂತೆಯೇ ಇದೀಗ ಸೆಪ್ಟೆಂಬರ್ 9 ರಿಂದ ಉಚಿತ ಭಕ್ತಾಧಿಗಳಿಗೆ ಉಚಿತ ದರ್ಶನವಕ್ಕೆ ಅವಕಾಶ ನೀಡಿದೆ. ಆದ್ರೆ ಕೆಲ ಷರತ್ತುಗಳನ್ನೂ ಕೂಡ ಹೇರಲಾಗಿದೆ. ಆರಂಭದಲ್ಲಿ ಕೇವಲ 2000 ಭಕ್ತರಿಗಷ್ಟೇ ಉಚಿತ ದರ್ಶನಕ್ಕೆ ಅವಕಾಶ ನೀಡಲಾಗ್ತಿದೆ. ಬೆಳಗ್ಗೆ 6 ಗಂಟೆಯಿಂದಲೇ ಟೋಕನ್ ವಿತರಣೆ ನಡೆಯಲಿದೆ. ಮೊದಲಿಗೆ ಚಿತ್ತೂರು ಜಿಲ್ಲೆಯ ಭಕ್ತರಿಗೆ ಅವಕಾಶ ನೀಡಲಾಗಿದ್ದು ಪ್ರತಿದಿನ 2 ಸಾವಿರ ಟೋಕನ್ ವಿತರಿಸಲಾಗುತ್ತದೆ. ಶ್ರೀನಿವಾಸ ಕಾಂಪ್ಲೆಕ್ಸ್ ನ ಕೌಂಟರ್ ಗಳಲ್ಲಿ ಟೋಕನ್ ಸಿಗಲಿದೆ. ಅಂದ್ಹಾಗೆ ಈ ಮೊದಲು ಸರ್ವದರ್ಶನಕ್ಕೆ 8 ಸಾವಿರ ಟೋಕನ್ ವಿತರಿಸಲಾಗುತ್ತಿತ್ತು. ಇದೀಗ ಪ್ರತಿದಿನ 2 ಸಾವಿರ ಟೋಕನ್ ವಿತರಿಸಲಾಗುತ್ತದೆ.