ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾಸ್ಥಳ ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ಪ್ರತಿ ದಿನ ಲಕ್ಷಾಂತರ ಭಕ್ತರು ಬಂದು ಹೋಗುತ್ತಾರೆ. ಉತ್ತರ ಭಾರತದಲ್ಲೂ ಸಹಸ್ರ ಭಕ್ತ ಸಮೂಹವನ್ನು ಹೊಂದಿರೋ ತಿಮ್ಮಪ್ಪ, ಇನ್ಮೇಲೆ ಜಮ್ಮು-ಕಾಶ್ಮೀರದಲ್ಲಿ ದರ್ಶನ ಕೊಡಲಿದ್ದಾನೆ. ಹೌದು ಉತ್ತರ ಭಾರತದ ಜನತೆಗೆ ಅನುಕೂಲವಾಗಲು ಜಮ್ಮು ಕಾಶ್ಮೀರದಲ್ಲಿ ತಿಮ್ಮಪ್ಪನ ದೇವಸ್ಥಾನ ನಿರ್ಮಾಣಕ್ಕೆ ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿ (ಟಿಟಿಡಿ) ತಾತ್ವಿಕ ಒಪ್ಪಿಗೆ ನೀಡಿದೆ. ದೇಗುಲ ನಿರ್ಮಾಣಕ್ಕೆ ಕೇಂದ್ರ ಸರ್ಕಾರವೂ ಗ್ರೀನ್ ಸಿಗ್ನಲ್ ನೀಡಿದ್ದು, ಜಮ್ಮು- ಕುತ್ರಾ ರಾಷ್ಟ್ರೀಯ ಹೆದ್ದಾರಿ ಬಳಿ 100 ಎಕರೆ ಜಮೀನನ್ನೂ ಮಂಜೂರು ಮಾಡಿದೆ. ಈ ದೇಗುಲವನ್ನು ವೈಷ್ಣೋದೇವಿ ದೇಗುಲದ ಹತ್ತಿರದಲ್ಲೇ ನಿರ್ಮಾಣ ಮಾಡಲಿದ್ದು, ಇನ್ನೆರಡು ವರ್ಷಗಳಲ್ಲಿ ದೇಗುಲ ನಿರ್ಮಾಣ ಕಾರ್ಯ ಮುಗಿಯಲಿದೆ. ಇನ್ನು ದೇಗುಲದಲ್ಲಿ ವೇದಾಧ್ಯಯನ ಶಾಲೆಯನ್ನು ತೆರೆದು ವೇದಗಳ ಮಹತ್ವವನ್ನು ಮತ್ತಷ್ಟು ಪ್ರಚಾರ ಮಾಡಲು ಟಿಟಿಡಿ ನಿರ್ಧರಿಸಿದೆ.
ಫುಟ್ಬಾಲ್ ಸಾಮ್ರಾಜ್ಯದಲ್ಲಿ ಚೆಂಡು ಬ್ಯಾಟ್ನ ಸದ್ದು.. ಮೆಕ್ಸಿಕೊ ಜೈಲಿನ ಕೈದಿಗಳ ಮನಪರಿವರ್ತನೆಗೆ ಜಂಟಲ್ಮ್ಯಾನ್ ಆಟವೇ ಅಸ್ತ್ರ..!
ಭಾರತದಲ್ಲಿ ಕ್ರಿಕೆಟ್ ಹೇಗೆ ಧರ್ಮವಾಗಿದೆಯೋ ಹಾಗೇ ಆ ರಾಷ್ಟ್ರದಲ್ಲೂ ಫುಟ್ಬಾಲ್ ಆಟ ಧರ್ಮವಾಗಿದೆ. ಭಾರತದ ಗಲ್ಲಿ ಗಲ್ಲಿಗಳಲ್ಲಿ ಕ್ರಿಕೆಟ್ ಆಡುವ ರೀತಿಯಲ್ಲೇ ಆ ದೇಶದ ಗಲ್ಲಿ ಗಲ್ಲಿಗಳಲ್ಲೂ...








