ನಾವೆಲ್ಲರೂ ದೇವಸ್ಥಾನಕ್ಕೆ ಹೋಗುತ್ತೇವೆ. ಪ್ರದಕ್ಷಿಣೆ ಹಾಕುತ್ತೇವೆ, ಅಷ್ಟಕ್ಕೂ ಪ್ರದಕ್ಷಿಣೆ ಯಾಕೆ ಹಾಕುತ್ತೇವೆ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಪ್ರದಕ್ಷಿಣೆ ಹಾಕುವುದರ ಅರ್ಥ. ದೇವಸ್ಥಾನದಲ್ಲಿ ನಾವು ಇಂತಿಷ್ಟೇ ಪ್ರದಕ್ಷಿಣೆಗಳನ್ನು ಹಾಕಬೇಕು ಎಂಬ ನಿಯಮವಿದೆ. ಆ ನಿಯಮಕ್ಕನುಸಾರವಾಗಿ ಹಾಕುವ ಪ್ರದಕ್ಷಿಣೆಯಿಂದ ವಿಶೇಷ ಫಲಗಳು ಪ್ರಾಪ್ತಿಯಾಗುತ್ತವೆ ಅಂತಾ ಶಾಸ್ತ್ರಗಳು ಹೇಳುತ್ತವೆ. ಪ್ರದಕ್ಷಿಣೆಯಲ್ಲಿ ಹಲವಾರು ರೀತಿಯ ಪ್ರದಕ್ಷಿಣೆಗಳಿವೆ.
ಪ್ರದಕ್ಷಿಣೆಯ ವಿಧಗಳು
* ಆದಿ ಪ್ರದಕ್ಷಿಣೆ -ಅತೀ ಸಣ್ಣ ಹೆಜ್ಜೆಗಳನ್ನು ಇಟ್ಟುಕೊಂಡು ಪ್ರದಕ್ಷಿಣೆ ಬರುವುದು. ಈ ಸಂದರ್ಭದಲ್ಲಿ ಕಾಲಿನ ಮುಂಭಾಗವು ಮತ್ತೊಂದು ಕಾಲಿನ ಹಿಂಭಾಗಕ್ಕೆ ತಾಗುತ್ತಿರಬೇಕು.
* ಅಂಗ ಪ್ರದಕ್ಷಿಣೆ -ದೇವಸ್ಥಾನದ ಕೆರೆ ಅಥವಾ ಕೊಳದಲ್ಲಿ ಸ್ನಾನ ಮಾಡಿದ ಬಳಿಕ ಒದ್ದೆ ಬಟ್ಟೆಯಲ್ಲಿ ಮಂತ್ರ ಪಠಿಸುತ್ತಾ ದೇವರಿಗೆ ಪ್ರದಕ್ಷಿಣೆ ಹಾಕುವುದು.
* ಮೊಣಕಾಲಿನ ಪ್ರದಕ್ಷಿಣೆ -ಮೊಣಕಾಲಿನಲ್ಲಿ ದೇವರಿಗೆ ಪ್ರದಕ್ಷಿಣೆ ಹಾಕುವುದು. ಇದರ ಹೊರತಾಗಿ ಅಶ್ವತ್ಥ ಮರ ಮತ್ತು ತುಳಸಿ ಗಿಡಕ್ಕೆ ಪ್ರದಕ್ಷಿಣೆ ಹಾಕುವುದು ತುಂಬಾ ಪವಿತ್ರವೆಂದು ನಂಬಲಾಗಿದೆ.
ನಿಮಗೆ ಗೊತ್ತಾ? ದೇವಸ್ಥಾನಗಳಲ್ಲಿ ಪ್ರದಕ್ಷಿಣೆ ಹಾಕುವುದರಿಂದ ವರ್ತಮಾನದಲ್ಲಿ ಮಾಡಿರುವಂತಹ ಪಾಪಗಳು ಪರಿಹಾರ ಆಗುತ್ತವೆ ಎನ್ನಲಾಗುತ್ತೆ. ಹಾಗಾದ್ರೆ ದೇವಾಲಯಗಳಲ್ಲಿ ನಾವು ಯಾವ ಸಮಯದಲ್ಲಿ ಪ್ರದಕ್ಷಿಣೆ ಹಾಕಬೇಕು?ತಿಳಿಯೋಣ.
ಯಾವ ಸಮಯದಲ್ಲಿ ಪ್ರದಕ್ಷಿಣೆ ಹಾಕಿದರೆ ಏನು ಫಲ?
* ಮಧ್ಯಾಹ್ನ ಪ್ರದಕ್ಷಿಣೆ ಹಾಕಿದರೆ ಇಷ್ಟಾರ್ಥ ಸಿದ್ದಿಯಾಗುತ್ತೆ
* ಸಂಜೆ ಪ್ರದಕ್ಷಿಣೆ ಮಾಡುವುದರಿಂದ ಮಾಡಿದ ಪಾಪಗಳು ದೂರವಾಗುತ್ತೆ
* ರಾತ್ರಿ ಪ್ರದಕ್ಷಿಣೆ ಹಾಕಿದರೆ ಮೋಕ್ಷ ಪ್ರಾಪ್ತಿಯಾಗುತ್ತೆ
ಪ್ರದಕ್ಷಿಣೆಯ ವಿಧಗಳು, ಪ್ರದಕ್ಷಿಣೆಯ ಸಮಯದ ಬಗ್ಗೆ ತಿಳಿದುಕೊಂಡದ್ದಾಯ್ತು. ಇನ್ನು ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಹಾಕಿದ್ರೆ ಏನು ಫಲ ಅನ್ನೋದ್ರ ಬಗ್ಗೆಯೂ ಶಾಸ್ತ್ರಗಳಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ.
ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಹಾಕಬೇಕು?
ವಿಘ್ನ ನಿವಾರಕ ಗಣಪತಿಗೆ ಒಂದು ಪ್ರದಕ್ಷಿಣೆ
ಲಯಕಾರಕ ಶಿವನಿಗೆ ಎರಡು ಪ್ರದಕ್ಷಿಣೆ
ಸ್ಥಿತಿಕರ್ತ ಮಹಾವಿಷ್ಣುವಿಗೆ ಮೂರು ಪ್ರದಕ್ಷಿಣೆ
ಹರಿಹರಸುತ ಅಯ್ಯಪ್ಪನಿಗೆ ನಾಲ್ಕು ಪ್ರದಕ್ಷಿಣೆ
ಶಿವಸುತ ಸುಬ್ರಹ್ಮಣ್ಯನಿಗೆ ಐದು ಪ್ರದಕ್ಷಿಣೆ
ಶಕ್ತಿಮಾತೆ ದುರ್ಗೆಗೆ ಆರು ಪ್ರದಕ್ಷಿಣೆ
ಎಷ್ಟು ಪ್ರದಕ್ಷಿಣೆ ಹಾಕಿದ್ರೆ ಏನು ಫಲ ಸಿಗುತ್ತೆ ಅನ್ನೋದನ್ನೂ ಸಹ ಧರ್ಮಶಾಸ್ತ್ರದಲ್ಲಿ ತಿಳಿಸಲಾಗಿದೆ. ಆ ನಿಯಮದ ಪ್ರಕಾರ ಪ್ರದಕ್ಷಿಣೆ ಹಾಕಿದ್ರೆ ವಿಶೇಷ ಫಲಗಳನ್ನು ಪಡೆಯಬಹುದು ಎನ್ನಲಾಗುತ್ತೆ.
ಪ್ರದಕ್ಷಿಣೆಯ ಫಲಗಳು
5 ಬಾರಿ ಪ್ರದಕ್ಷಿಣೆ ಹಾಕಿದರೆ ಜಯ ಸಿಗುತ್ತೆ
7 ಬಾರಿ ಪ್ರದಕ್ಷಿಣೆ ಹಾಕಿದ್ರೆ ಶತ್ರುಗಳನ್ನು ಸೋಲಿಸಬಹುದು
9 ಬಾರಿ ಪ್ರದಕ್ಷಿಣೆ ಹಾಕಿದ್ರೆ ಸಂತಾನ ಪ್ರಾಪ್ತಿಯಾಗುತ್ತೆ
11 ಬಾರಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿದ್ರೆ ಆಯುಷ್ಯ ವೃದ್ಧಿ
13 ಬಾರಿ ಪ್ರದಕ್ಷಿಣೆ ಹಾಕಿದರೆ ನಮ್ಮ ಬೇಡಿಕೆ ಈಡೇರುತ್ತೆ
15 ಬಾರಿ ಪ್ರದಕ್ಷಿಣೆ ಹಾಕುವುದರಿಂದ ಧನ ಪ್ರಾಪ್ತಿಯಾಗುತ್ತೆ
17 ಬಾರಿ ಪ್ರದಕ್ಷಿಣೆ ಹಾಕಿದ್ರೆ ಧನ ವೃದ್ದಿಯಾಗುತ್ತೆ
19 ಬಾರಿ ಪ್ರದಕ್ಷಿಣೆ ಹಾಕಿದ್ರೆ ರೋಗ ನಿವಾರಣೆಯಾಗುತ್ತೆ
ಶ್ರೀ ಕಟೀಲು ದುರ್ಗಪರಮೇಶ್ವರೀ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನದಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ , ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ ಜ್ಞಾನೇಶ್ವರ್ ರಾವ್ 8548998564
ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ
8548998564.
ವ್ಯಕ್ತಿಯು ಭೂತ ಹಾಗೂ ವರ್ತಮಾನದಲ್ಲಿ ಮಾಡಿರುವಂತಹ ಪಾಪಗಳನ್ನು ಪ್ರದಕ್ಷಿಣೆಯು ತೊಡೆದುಹಾಕುತ್ತೆ ಎನ್ನುವ ನಂಬಿಕೆಯಿದೆ. ಹೀಗಾಗೇ ಪ್ರದಕ್ಷಿಣೆ ಹಾಕುವ ಆಚರಣೆಯನ್ನು ನಮ್ಮ ಹಿರಿಯರು ಅನಾದಿಕಾಲದಿಂದಲೂ ಆಚರಿಸಿಕೊಂಡು ಬಂದಿದ್ದಾರೆ.







