ಬೆಂಗಳೂರು: ಇಂದು ಮತ್ತು ನಾಳೆ ವೃತ್ತಿಪರ ಕೋರ್ಸ್ಗಳಿಗೆ ಸಿಇಟಿ(ಸಾಮಾನ್ಯ ಪ್ರವೇಶ) ಪರೀಕ್ಷೆ ನಡೆಯಲಿದೆ. ಒಟ್ಟು 1.94 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ
ಇಂದು ಬೆಳಿಗ್ಗೆ ಜೀವಶಾಸ್ತ್ರ ಹಾಗೂ ಮಧ್ಯಾಹ್ನ ಗಣಿತ ವಿಷಯದ ಪರೀಕ್ಷೆ ನಡೆಯಲಿದೆ. ನಾಳೆ ಭೌತಶಾಸ್ತ್ರ, ರಸಾಯನ ಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ. ಆಗಸ್ಟ್ 1ರಂದು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.
40 ಮಂದಿ ಕೊರೊನಾ ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಕೊರೊನಾ ಸೋಂಕಿತ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ಯಲು ಪ್ರತ್ಯೇಕ ವಾಹನದ ವ್ಯವಸ್ಥೆ ಮಾಡಲಾಗಿದೆ. ಜತೆಗೆ ಅವರಿಗೆ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಈ ಕೊಠಡಿಗಳ ಮೇಲ್ವಿಚಾರಣೆ ಮಾಡುವ ಸಿಬ್ಬಂದಿಗಳು ಪಿಪಿಇ ಕಿಟ್ ಧರಿಸಲು ಸೂಚನೆ ನೀಡಲಾಗಿದೆ.
ಕಂಟೈನ್ಮೆಂಟ್ ಪ್ರದೇಶದ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ತೆರಳಲು ಸರ್ಕಾರ ಬಸ್ ವ್ಯವಸ್ಥೆ ಮಾಡಿದೆ. ಒಬ್ಬ ಪೋಷಕರ ಜತೆ ವಿದ್ಯಾರ್ಥಿಗಳು ತೆರಳಬಹುದು. ಸಿಇಟಿ ಪರೀಕ್ಷೆಯ ಹಾಲ್ ಟಿಕೆಟ್ ತೋರಿಸಿದರೆ ಸಾಕು, ಪೊಲೀಸರು ಅವರನ್ನು ತಡೆಯುವುದಿಲ್ಲ.
ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸರ್ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ
Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||
ಶುಕ್ರವಾರ ಈ ರೀತಿ ದೀಪಾರಾಧನೆ ಮಾಡಿದರೆ ಲಕ್ಷ್ಮಿ ಕಟಾಕ್ಷ ದೊರೆಯು ತ್ತದೆ. ಪ್ರತಿಯೊಬ್ಬ ಮನುಷ್ಯನೂ ಮುಂದುವರಿಯಬೇಕು ಎಂದರೆ ಮಹಾಲಕ್ಷ್ಮಿಯ ಅನುಗ್ರಹ ಇದ್ದರೆ ಸಾಧ್ಯ. ಯಾವುದೇ ಕ್ಷೇತ್ರದಲ್ಲಿ ನೋಡಿದರೂ...








