ಕೊರೊನಾ ಸಂಕಷ್ಟ : ಫ್ಯಾನ್ ಕ್ಲಬ್ ಗಳಿಗೆ 12.5 ಲಕ್ಷ ರೂ. ಸಹಾಯ ಮಾಡಿದ ನಟ ಸೂರ್ಯ
ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಮತ್ತೊಂದೆಡೆ ಲಾಕ್ ಡೌನ್ ನಿಂದಾಗಿ ಬಡವರು , ಸಿನಿಮಾ ಕಾರ್ಮಿಕರ ಬದುಕು ಸಂಕಷ್ಟಕ್ಕೆ ಸಿಲುಕಿದೆ.. ಅನೇಕರು ಒಂದು ಹೊತ್ತಿನ ಊಟಕ್ಕೆ ಕಷ್ಟ ಪಡುವ ಪರಿಸ್ಥಿತಿ ಎದುರಾಗಿದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಉಪೇಂದ್ರ , ಪುನೀತ್ ರಾಜ್ ಕುಮಾರ್ , ಯಶ್, ದರ್ಶನ್, ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಇದೀಗ ನಟ ಸೂರ್ಯ ಸಂಕಷ್ಟದಲ್ಲಿರುವ ಅಭಿಮಾನಿಗಳ ಬೆನ್ನಿಗೆ ನಿಂತಿದ್ದಾರೆ. ತನ್ನ ಫ್ಯಾನ್ ಕ್ಲಬ್ ಗಳಿಗೆ ಸೂರ್ಯ ಹಣ ನೀಡುವ ಮೂಲಕ ಮತ್ತೊಮ್ಮೆ ಅಭಿಮಾನಿಗಳ ಹೃದಯ ಗೆದಿದ್ದಾರೆ. ತನ್ನನ್ನು ಬೆಂಬಲಿಸುವ, ಸಿನಿಮಾಗಳನ್ನು ಪ್ರಮೋಟ್ ಮಾಡಿ ಜನರಿಗೆ ತಲುಪಿಸುವ ಫ್ಯಾನ್ ಕ್ಲಬ್ ಗಳಿಗೆ ಸೂರ್ಯ 12.5 ಲಕ್ಷ ರೂ.ನೀಡಿದ್ದಾರೆ. ಸೂರ್ಯ ಅವರ ಈ ಕೆಲಸಕ್ಕೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸೂರ್ಯಗೆ ಧನ್ಯವಾದ ತಿಳಿಸಿ ಪೋಸ್ಟ್ ಗಳನ್ನು ಶೇರ್ ಮಾಡುತ್ತಿದ್ದಾರೆ.
ಫ್ಯಾನ್ ಕ್ಲಬ್ ಗಳಲ್ಲಿ ತೀರ ಸಂಕಷ್ಟದಲ್ಲಿರುವ 250 ಅಭಿಮಾನಿಗಳಿಗೆ ತಲ 5 ಸಾವಿರ ಹಣ ನೀಡಿದ್ದಾರೆ. ಅಭಿಮಾನಿಗಳ ಬ್ಯಾಂಕ ಖಾತೆಗೆ ನೇರವಾಗಿ ಹಣ ಹಾಕಿದ್ದಾರೆ. ಈಗಾಗಲೇ ಅಭಿಮಾನಿಗಳ ಖಾತೆಗೆ ಹಣ ವರ್ಗಾವಣೆ ಆಗಿದ್ದು, ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಸೂರ್ಯ ಜೊತೆಗೆ ಸಹೋದರ ಕಾರ್ತಿ ಕೂಡ ಅಭಿಮಾನಿಗಳ ಸಹಾಯಕ್ಕೆ ನಿಂತಿದ್ದಾರೆ.
ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ನಟ ಆರ್. ಮಾಧವನ್ ‘ಅದು ನನ್ನ ಸಹೋದರ’ ಎಂದು ಹೇಳಿದ್ದಾರೆ. ಜೊತೆಗೆ ಹಾರ್ಟ್ ಇಮೋಜಿ ಕಳುಹಿಸಿದ್ದಾರೆ. ಅಂದ್ಹಾಗೆ ಸೂರ್ಯ ಈ ಹಿಂದೆ ಈ ಮೊದಲು ತಮಿಳುನಾಡು ಸಿಎಂ ಸ್ಟಾಲಿನ್ ಭೇಟಿಯಾಗಿ 1 ಕೋಟಿ ರೂ. ಪರಿಹಾರ ನಿಧಿಗೆ ನೀಡಿದ್ದರು.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.