ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

TOP 10 National News – ಪ್ರಮುಖ ರಾಷ್ಟ್ರೀಯ ಸುದ್ದಿಗಳು…..

Namratha Rao by Namratha Rao
February 2, 2022
in National, Newsbeat, ದೇಶ - ವಿದೇಶ
shivamogga Siddaramaiah Basavaraja bommai film sports Saaksha Tv
Share on FacebookShare on TwitterShare on WhatsappShare on Telegram

TOP 10 News – ಪ್ರಮುಖ ರಾಷ್ಟ್ರೀಯ ಸುದ್ದಿಗಳು…..

ಯುಪಿಯಲ್ಲಿ ಅಖಿಲೇಶ್ ಗೆ ದೀದಿ ಸಾಥ್….!!!

Related posts

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

September 1, 2026
ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

September 1, 2026

ತೃಣಮೂಲ ಕಾಂಗ್ರೆಸ್ ಕೂಡ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ  ಧುಮುಕಲಿದೆ.  ಈ ಬಾರಿಯ ಚುನಾವಣೆಯಲ್ಲಿ ತಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಎಂದು ಪಕ್ಷದ ವರಿಷ್ಠೆ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಆದರೆ, ಅಖಿಲೇಶ್ ಯಾದವ್ ಅವರನ್ನು ಬೆಂಬಲಿಸುವುದಾಗಿ ಭರವಸೆ ನೀದ್ದಾರೆ.  2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ಖಚಿತ ಎಂದು ಮಮತಾ ಹೇಳಿದ್ದಾರೆ.

ಹೆಚ್ಚು ಮಾಹಿತಿ : UP Election –  ಅಖಿಲೇಶ್ ಯಾದವ್  ಬೆಂಬಲಿಸಲು ಯುಪಿಗೆ ತೆರಳಲಿದ್ದಾರೆ ಮಮತಾ

370 ವಿಧಿ ರದ್ದತಿ ನಂತರ 439 ಭಯೋತ್ಪಾದಕರ ಸಾವು – 109 ಸೈನಿಕರು ಹುತಾತ್ಮ…

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ 541 ಭಯೋತ್ಪಾದಕ ಘಟನೆಗಳಲ್ಲಿ 109 ಭದ್ರತಾ ಪಡೆ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಸರ್ಕಾರ ಈಗ ಸಂಸತ್ತಿನಲ್ಲಿ ತಿಳಿಸಿದೆ. ಆದರೆ, ಪ್ರತಿ ಯೋಧ ಹುತಾತ್ಮರಾದ ಮೇಲೆ ನಾಲ್ವರು ಭಯೋತ್ಪಾದಕರೂ ಹತರಾಗಿದ್ದಾರೆ. ಆಗಸ್ಟ್ 5, 2019 ರಿಂದ (ವಿಶೇಷ ಸ್ಥಾನಮಾನವನ್ನು ಕಿತ್ತುಕೊಂಡ ದಿನಾಂಕ) ಜಮ್ಮು ಮತ್ತು ಕಾಶ್ಮೀರದಲ್ಲಿ 439 ಭಯೋತ್ಪಾದಕರನ್ನು ಕೊಲ್ಲಲಾಗಿದೆ ಎಂದು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಆದರೆ, ಈ ನಡುವೆ ಭಯೋತ್ಪಾದಕರ ದಾಳಿಯಲ್ಲಿ 98 ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ. ಇದಲ್ಲದೇ ಸುಮಾರು 5.3 ಕೋಟಿ ಮೌಲ್ಯದ ಆಸ್ತಿ ಹಾನಿಯಾಗಿದೆ.

ಹೆಚ್ಚು ಮಾಹಿತಿ : 370 ವಿಧಿ ರದ್ದತಿ ನಂತರ 439 ಭಯೋತ್ಪಾದಕರ ಸಾವು – 109 ಸೈನಿಕರು ಹುತಾತ್ಮ…

ಸಂವಿಧಾನವನ್ನ ಪುನಃ ರಚಿಸುವ ಅವಶ್ಯಕತೆ ಇದೆ… ಕೆ ಸಿ ಆರ್

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಮಂಗಳವಾರ ಭಾರತದಲ್ಲಿ ಸಂವಿಧಾನವನ್ನು ಪುನಃ ಬರೆಯುವ ಅಭಿಯಾನವನ್ನು ಪ್ರಾರಂಭಿಸಲಿದ್ದಾರೆ ಮತ್ತು ಇದಕ್ಕಾಗಿ ದೇಶದ ಹಲವು ನಾಯಕರನ್ನು ಭೇಟಿ ಮಾಡಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದೇನೆ ಎಂದು ಹೇಳಿದ್ದಾರೆ. ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಮುಖ್ಯಸ್ಥರು ಇತರ ನಾಯಕರೊಂದಿಗೆ ಮಾತನಾಡಲು ಪ್ರಾರಂಭಿಸಿದ್ದಾರೆ ಮತ್ತು ಶೀಘ್ರದಲ್ಲೇ ದೇಶಕ್ಕಾಗಿ ಹೋರಾಡುವುದಾಗಿ ಘೋಷಿಸಲಿದ್ದಾರೆ ಎಂದು ಹೇಳಿದರು.

ಹೆಚ್ಚು ಮಾಹಿತಿ :  National – ಸಂವಿಧಾನವನ್ನ ಪುನಃ ರಚಿಸುವ ಅವಶ್ಯಕತೆ ಇದೆ… ಕೆ ಸಿ ಆರ್

ಏರ್ ಇಂಡಿಯಾದ ಪ್ರಯಾಣಿಕರನ್ನು ರತನ್ ಟಾಟಾ ಸ್ವಾಗತಿಸಿದ್ದು ಹೀಗೆ…

69 ವರ್ಷಗಳ ನಂತರ ಏರ್ ಇಂಡಿಯಾದ ಕಮಾಂಡ್ ಮತ್ತೆ ಟಾಟಾ ಕೈಗೆ ಬಂದಿದೆ. ಇದೇ ಖುಷಿಯಲ್ಲಿ ರತನ್ ಟಾಟಾ ಪ್ರಯಾಣಿಕರನ್ನು ವಿಶೇಷ ರೀತಿಯಲ್ಲಿ ಸ್ವಾಗತಿಸಿದ್ದಾರೆ. ಅವರ ಈ ಆಡಿಯೋ ಸಂದೇಶವನ್ನು ಏರ್ ಇಂಡಿಯಾ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಇದರಲ್ಲಿ ರತನ್ ಟಾಟಾ ಅವರು ಏರ್ ಇಂಡಿಯಾ ವಿಮಾನದಲ್ಲಿ ಹಾರುವ ಪ್ರಯಾಣಿಕರನ್ನು ಸ್ವಾಗತಿಸಿದ್ದಾರೆ.

ಹೆಚ್ಚು ಮಾಹಿತಿ :  National – ಏರ್ ಇಂಡಿಯಾದ ಪ್ರಯಾಣಿಕರನ್ನು ರತನ್ ಟಾಟಾ ಸ್ವಾಗತಿಸಿದ್ದು ಹೀಗೆ…

ವಿದ್ಯುತ್ ಶಾಕ್ ನೀಡಿ ಕಿರುಕುಳ ಕೊಟ್ಟರು – ಚೀನಾ ಸೈನಿಕರ ಕೃತ್ಯ ಬಿಚ್ಚಿಟ್ಟ ನಾಪತ್ತೆಯಾಗಿದ್ದ ಯುವಕ

ಭಾರತ ಮತ್ತು ಚೀನಾ ಗಡಿಯಲ್ಲಿ ಕಾಣೆಯಾಗಿದ್ದ ಅರುಣಾಚಲ ಪ್ರದೇಶದ 17 ವರ್ಷದ ಭಾರತೀಯ ಪ್ರಜೆ ಮಿರಾಮ್ ಟ್ಯಾರೋನ್  ಎಂಬ ಬಾಲಕನಿಗೆ  ನೆರೆಯ ದೇಶದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಯಿಂದ ವಿದ್ಯುತ್ ಶಾಕ್ ನೀಡಿ  ಕಿರುಕುಳ ಕೊಟ್ಟಿದೆ ಎಂದು ಈಶಾನ್ಯ ರಾಜ್ಯದ ಸಂಸದ ತಪಿರ್ ಗಾವೊ ಹೇಳಿದ್ದಾರೆ.

ಹೆಚ್ಚು ಮಾಹಿತಿ :  ವಿದ್ಯುತ್ ಶಾಕ್ ನೀಡಿ ಕಿರುಕುಳ ಕೊಟ್ಟರು – ಚೀನಾ ಸೈನಿಕರ ಕೃತ್ಯ ಬಿಚ್ಚಿಟ್ಟ ನಾಪತ್ತೆಯಾಗಿದ್ದ ಯುವಕ

ಟಿಎಂಸಿ ಅಧ್ಯಕ್ಷರಾಗಿ ಮಮತಾ ಬ್ಯಾನರ್ಜಿ ಅವಿರೋಧ ಆಯ್ಕೆ…

ಟಿಎಂಸಿ ಅಧ್ಯಕ್ಷರಾಗಿ ಮಮತಾ ಬ್ಯಾನರ್ಜಿ ಅವಿರೋಧ ಆಯ್ಕೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತೃಣಮೂಲ ಕಾಂಗ್ರೆಸ್ ಅಧ್ಯಕ್ಷರಾಗಿ ಮರು ಆಯ್ಕೆಯಾಗಿದ್ದಾರೆ. ಮಮತಾ ಬ್ಯಾನರ್ಜಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಪಾರ್ಥ ಚಟರ್ಜಿ ಬುಧವಾರ ತಿಳಿಸಿದ್ದಾರೆ.

ಹೆಚ್ಚು ಮಾಹಿತಿ :  West Bengal –  ಟಿಎಂಸಿ ಅಧ್ಯಕ್ಷರಾಗಿ ಮಮತಾ ಬ್ಯಾನರ್ಜಿ ಅವಿರೋಧ ಆಯ್ಕೆ…  

ಬ್ರಹ್ಮೋಸ್ ಮತ್ತು Anti ಟ್ಯಾಂಕ್  ಯುರಾನ್ ಕ್ಷಿಪಣಿ ಯಶಸ್ವಿ ಪರೀಕ್ಷೆ…

ಭಾರತೀಯ ನೌಕಾಪಡೆಯ ಅಂಡಮಾನ್ ಮತ್ತು ನಿಕೋಬಾರ್ ಕಮಾಂಡ್ ಬುಧವಾರ ಬ್ರಹ್ಮೋಸ್ ಮತ್ತು ಟ್ಯಾಂಕ್ ವಿರೋಧಿ ಯುರಾನ್ ಕ್ಷಿಪಣಿಗಳನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಎರಡೂ ಕ್ಷಿಪಣಿಗಳು ತಮ್ಮ ಗುರಿಯನ್ನು ತಲುಪುವಲ್ಲಿ ಯಶಸ್ವಿಯಾಗಿವೆ. ಬ್ರಹ್ಮೋಸ್ ಮತ್ತು ಯುರಾನ್ ಕ್ಷಿಪಣಿಗಳು ಈಗ ಸೇನೆಯ ಬಳಕೆಗೆ ಸಿದ್ಧವಾಗಿವೆ.

https://twitter.com/i/status/1488732887331766274

ಹೆಚ್ಚು ಮಾಹಿತಿ :  ಬ್ರಹ್ಮೋಸ್ ಮತ್ತು Anti ಟ್ಯಾಂಕ್  ಯುರಾನ್ ಕ್ಷಿಪಣಿ ಯಶಸ್ವಿ ಪರೀಕ್ಷೆ…

ದೇಶದಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಇಳಿಕೆ

ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,61,386 ಲಕ್ಷ ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಟ್ವೀಟ್ ಮಾಡಿದೆ.

ದೇಶದಲ್ಲಿ ಕರೊನಾ ಸಕ್ರೀಯ ಪ್ರಕರಣಗಳು 16,21,603 ಲಕ್ಷ. ಇದರ ಪ್ರತಿಶತವು ಶೇ 3.90 ರಷ್ಟಿದೆ. ದಿನದ ಏರಿಕೆಯು ಶೇ 9.26 ಪ್ರತಿಶತದಷ್ಟಿದ್ದು, ವಾರದ ಏರಿಕೆ ಪ್ರಮಾಣವು 14.15 ರಷ್ಟಿದೆ. ಕಳೆದ 24 ಗಂಟೆಯಲ್ಲಿ ಚೇತರಸಿಕೊಂಡವರು 2,81,109 ಲಕ್ಷ ಜನರು. ಇದರ ಪ್ರತಿಶತವು ಶೇ 94.91 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಹೆಚ್ಚು ಮಾಹಿತಿ : Covid: ದೇಶದಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಇಳಿಕೆ

ಎಎಸ್ ಐ ಮೇಲೆ ಗುಂಡಿನ ದಾಳಿ

ಜಮ್ಮು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅಮಿಶಿಜಿಪೋರಾ ಪ್ರದೇಶದಲ್ಲಿ ಭಯೋತ್ಪಾದಕರು ಪೊಲೀಸ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಎಎಸ್ಐ ಶಬೀರ್ ಅಹ್ಮದ್ ಅವರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆದಸಿದ್ದಾರೆ. ಈ ಗುಂಡಿನ ದಾಳಿಯಲ್ಲಿ ಎಎಸ್ ಐ ಶಬಿರ್ ಗಾಯಗೊಂಡಿದ್ದು, ಅವರನ್ನು ಶ್ರೀನಗರ ಆಸ್ಪತ್ರೆಗೆ ದಾಖಲಿಸಲಿಸಿದ್ದಾರೆ.  ಇವರು ಶೋಪಿಯಾನ್‌ನ ಅಮಿಶಿಜಿಪೋರಾ ಪ್ರದೇಶದಲ್ಲಿ ಪ್ರಾರ್ಥನೆ ಮುಗಿಸಿ ಮಸೀದಿಯಿಂದ ಹಿಂತಿರುಗುತ್ತಿದ್ದಾಗ ಭಯೋತ್ಪಾದಕರು ಗುಂಡಿನ ದಾಳಿ ಮಾಡಿದ್ದಾರೆ ಎಂದು ಪೊಲೀಸರು ತಿಳಸಿದ್ದಾರೆ.

 

 

Tags: Covid19daily updatesindianational newssakshatvtrend
ShareTweetSendShare
Join us on:

Related Posts

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

by Shwetha
September 1, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ ಸಿ) ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಗಂಭೀರ ಆರೋಪಕ್ಕೆ ಗ್ರಾಮೀಣಾಭಿವೃದ್ಧಿ...

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

by Shwetha
September 1, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿ 15 ದಿನಗಳಿಗೊಮ್ಮೆ ಸಭೆ ನಡೆಸಿ, ಪರಿಷ್ಕೃತ ಮಾಹಿತಿಯನ್ನು ಸಲ್ಲಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC)ಗೆ ಸುಪ್ರೀಂ...

ರಾಜ್ಯದಲ್ಲಿ ವೈರಲ್ ಜ್ವರ ಹೆಚ್ಚಳ; ಮಕ್ಕಳಲ್ಲಿ ಕಾಲು-ಬಾಯಿ ಬೇನೆ ಸೋಂಕು ಏರಿಕೆ

ರಾಜ್ಯದಲ್ಲಿ ವೈರಲ್ ಜ್ವರ ಹೆಚ್ಚಳ; ಮಕ್ಕಳಲ್ಲಿ ಕಾಲು-ಬಾಯಿ ಬೇನೆ ಸೋಂಕು ಏರಿಕೆ

by Shwetha
September 1, 2026
0

ರಾಜ್ಯದಲ್ಲಿ ವೈರಲ್ ಜ್ವರದ ಪ್ರಕರಣಗಳ ಜೊತೆಗೆ ಮಕ್ಕಳಲ್ಲಿ ಕಾಲು-ಬಾಯಿ ಬೇನೆ (Hand, Foot and Mouth Disease - HFMD) ಸೋಂಕಿನ ಪ್ರಕರಣಗಳೂ ಹೆಚ್ಚಾಗುತ್ತಿವೆ. ವಿಶೇಷವಾಗಿ ಐದು...

ರಾಹುಲ್ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ ಮೈತ್ರಿ ಕಟ್:ಮೈತ್ರಿಗೆ ಕುತ್ತು ತರುತ್ತಾ ಪ್ರಧಾನಿ ಪಟ್ಟ? ವಿಜಯ್ ಕ್ಯಾಬಿನೆಟ್‌ಗೆ ಕೈಕೊಡಲು ಸಿದ್ಧವಾಯ್ತಾ ಕಾಂಗ್ರೆಸ್?

ರಾಹುಲ್ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ ಮೈತ್ರಿ ಕಟ್:ಮೈತ್ರಿಗೆ ಕುತ್ತು ತರುತ್ತಾ ಪ್ರಧಾನಿ ಪಟ್ಟ? ವಿಜಯ್ ಕ್ಯಾಬಿನೆಟ್‌ಗೆ ಕೈಕೊಡಲು ಸಿದ್ಧವಾಯ್ತಾ ಕಾಂಗ್ರೆಸ್?

by Shwetha
September 1, 2026
0

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಈಗ 2029ರ ಲೋಕಸಭಾ ಚುನಾವಣೆಯ ಪ್ರಧಾನಿ ಅಭ್ಯರ್ಥಿ ವಿಚಾರವಾಗಿ ದೊಡ್ಡ ಮಟ್ಟದ ಸಂಘರ್ಷ ಶುರುವಾಗಿದೆ. ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು...

ಚುನಾವಣೆಗಳು ತುಂಬಾ ದುಬಾರಿಯಾಗಿವೆ-ನನಗೀಗ 80 ವರ್ಷ ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ:ಇನ್ನು ಸಾಕು ಎಲೆಕ್ಷನ್ ರಾಜಕೀಯ ಎಂದ ಸಿದ್ದರಾಮಯ್ಯ

ಚುನಾವಣೆಗಳು ತುಂಬಾ ದುಬಾರಿಯಾಗಿವೆ-ನನಗೀಗ 80 ವರ್ಷ ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ:ಇನ್ನು ಸಾಕು ಎಲೆಕ್ಷನ್ ರಾಜಕೀಯ ಎಂದ ಸಿದ್ದರಾಮಯ್ಯ

by Shwetha
September 1, 2026
0

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಭವಿಷ್ಯದ ಕುರಿತು ಅತ್ಯಂತ ಮಹತ್ವದ ಮತ್ತು ಭಾವನಾತ್ಮಕ ಘೋಷಣೆಯೊಂದನ್ನು ಮಾಡಿದ್ದಾರೆ. ಇನ್ಮುಂದೆ ತಾವು ಯಾವುದೇ ವಿಧಾನಸಭಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram