ADVERTISEMENT
Saturday, March 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

TOP 10 News : ಹರ್ಷನ ಕೊಲೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್ , ಸೇರಿದಂತೆ ಈ ದಿನದ ಪ್ರಮುಖ ಸುದ್ದಿಗಳು

Namratha Rao by Namratha Rao
February 23, 2022
in Newsbeat, Saaksha Special, ಎಸ್ ಸ್ಪೆಷಲ್
shivamogga Siddaramaiah Basavaraja bommai film sports Saaksha Tv
Share on FacebookShare on TwitterShare on WhatsappShare on Telegram

Related posts

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

March 28, 2026
115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

March 28, 2026

TOP 10 News : ಹರ್ಷನ ಕೊಲೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್ , ಸೇರಿದಂತೆ ಈ ದಿನದ ಪ್ರಮುಖ ಸುದ್ದಿಗಳು

ಹರ್ಷನ ಕೊಲೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್

ಶಿವಮೊಗ್ಗ : ಭಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್ ಸಿಕ್ಕಿದೆ…  ಘಟನೆ ನಡೆಯುವ ಮುಂಚೆ ಹರ್ಷನಿಗೆ ಇಬ್ಬರು ಹುಡುಗಿಯರು  ಒಂದೇ ಸಮನೇ ಕಾಲ್ ಮಾಡ್ತಿದ್ದ ವಿಚಾರವನ್ನ ಹರ್ಷನ ಸ್ನೇಹಿತ ಬಿಚ್ಚಿಟ್ಟಿದ್ದಾರೆ.. ಇಬ್ಬರು ಹುಡುಗಿಯರು ಕೊಲೆಯಾಗುವುದಕ್ಕೂ ಮೊದಲೂ ಕರೆ ಮಾಡುತ್ತಿದ್ದರು , ಪದೇಪದೇ ವಿಡಿಯೋ ಕಾಲ್ ಮಾಡಿದ್ದರು ಎನ್ನಲಾಗಿದೆ.. ಹೀಗಾಗಿ ಹುಡುಗೀರನ್ನ ಸಂಚಿನಲ್ಲಿ ಶಾಮೀಲು ಮಾಡಿಕೊಳ್ಳಲಾಗಿತ್ತಾ ಅನ್ನೋ ಅನುಮಾನ ಮೂಡಿದೆ..

Shivamogga Saaksha Tv

ಹರ್ಷ ಕೊಲೆ ಖಂಡಿಸಿ ಹಿಂದುಪರ ಸಂಘಟನೆಗಳಿಂದ ಪ್ರತಿಭಟನೆ

ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆಯನ್ನು ಖಂಡಿಸಿ ಇಂದು ರಾಜ್ಯಾದ್ಯಂತ ಹಿಂದುಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಅರಸಿಕೇರೆ, ಬೆಳಗಾವಿ ,ವಿಜಪುರದಲ್ಲಿ, ಮಡಕೇರಿ, ಗದಗ, ಚಿತ್ರದುರ್ಗ, ಬೆಂಗಳೂರು ಮತ್ತು ಶಿವಮೊಗ್ಗ ಸೇರಿದಂತೆ ರಾಜ್ಯಾದ್ಯಂತ  ಹಿಂದುಪರ ಸಂಘನೆಗಳು ಪ್ರತಿಭಟನೆ ಮಾಡಿವೆ.

ಬಿಜೆಪಿ-ಕಾಂಗ್ರೆಸ್ ವಿರುದ್ಧ ಹೆಚ್ ಡಿಕೆ ಕಿಡಿ

ರಾಷ್ಟ್ರೀಯ ಪಕ್ಷಗಳೆರಡೂ ಕರ್ನಾಟಕದ ಪ್ರತಿಷ್ಠೆಗೆ ಕೊಳ್ಳಿ ಇಟ್ಟು ʼವಿಕೃತ ಕೇಕೆʼ ಹಾಕುತ್ತಿವೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಬಿಜೆಪಿ-ಕಾಂಗ್ರೆಸ್ ಪಕ್ಷಗಳ ವಿರುದ್ಧದ ಕಿಡಿಕಾರಿದ್ದಾರೆ.
ಸದ್ಯದ ಬೆಳವಣಿಗೆಗಳ ಬಗ್ಗೆ ಟ್ವೀಟ್ ಮಾಡಿರುವ ಹೆಚ್ ಡಿ ಕೆ, ರಾಜ್ಯದಲ್ಲಿ ಶಾಂತಿ-ಭದ್ರತೆಗೆ ಅಪಾಯ ಎದುರಾಗಿದೆ. ಅಭಿವೃದ್ಧಿ, ಆವಿಷ್ಕಾರ, ಸೃಜನಶೀಲ, ವಿಜ್ಞಾನ-ತಂತ್ರಜ್ಞಾನಕ್ಕೆ ಹೆಸರಾದ ಕರ್ನಾಟಕ ಈಗ ವಿರುದ್ಧ ದಿಕ್ಕಿನಲ್ಲಿ ಜಗತ್ತಿನ ಗಮನ ಸೆಳೆದು ಕೃತಾರ್ಥವಾಗುತ್ತಿದೆ ಎಂದಿದ್ದಾರೆ.

kumaraswamy - saakshatv

ನನ್ನನ್ನ ಬಂಧಿಸಿ ಎಂದ ಡಿಕೆಶಿಗೆ ಬಿಜೆಪಿ ಟಾಂಗ್

ಬೆಂಗಳೂರು : ನನ್ನನ್ನು ಬಂಧಿಸಿ ಎಂದಿದ್ದ ಕೆಪಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ  ಬಿಜೆಪಿ ಟಾಂಗ್ ನೀಡಿದ್ದು, ಜೈಲು ಹಕ್ಕಿಯ ಅನುಭವ ಇದೆ ಎಂಬ ಕಾರಣಕ್ಕಾಗಿ ಬಂಧಿಸಿ, ಬಂಧಿಸಿ ಎನ್ನುತ್ತಿದ್ದೀರಾ ಎಂದು ಕಾಲೆಳೆದಿದೆ. “ಹರ್ಷ ಕೊಲೆಯಲ್ಲಿ ಕೆಲವರನ್ನು ಬಂಧಿ ಸಿದ್ದಾರೆ. ಘಟನೆಗೆ ನನ್ನ ಪ್ರಚೋದನೆ ಇದೆ ಎಂದು ಹೇಳುತ್ತಿರುವುದರಿಂದ ನನ್ನನ್ನು ಬಂಧಿಸಲಿ, ಸಚಿವರೇ ನಿಷೇಧಾಜ್ಞೆ ಮುರಿದು ಮೆರವಣಿಗೆ ನಡೆಸಿ ಕಲ್ಲು ಹೊಡೆಸಿದ್ದಾರಲ್ಲ ಅವರ ಮೇಲೆ ಪ್ರಕರಣ ಏಕಿಲ್ಲ. ಇದಕ್ಕೆ ಖಾಕಿ ತೊಟ್ಟವರು ಉತ್ತರಿಸಬೇಕು” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದರು.

ಉತ್ತರ ಪ್ರದೇಶ ಚುನಾವಣೆ – 4ನೇ ಹಂತದ ಮತದಾನ

ಉತ್ತರ ಪ್ರದೇಶದ ನಾಲ್ಕನೇ ಹಂತದ 59 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ. ಇಂದು ರಾಜಧಾನಿ ಲಕ್ನೋ ಮತ್ತು ಲಖಿಂಪುರ ಖೇರಿ ಸೇರಿದಂತೆ ಸೋನಿಯಾ ಗಾಂಧಿ ಅವರ ಭದ್ರಕೋಟೆಯಾದ ರಾಯ್‌ ಬರೇಲಿಯ ಐದು ಕ್ಷೇತ್ರಗಳಲ್ಲಿ ಮತ್ತು ಪಿಲಿಭಿತ್, ಲಖಿಂಪುರ ಖೇರಿ, ಸೀತಾಪುರ್, ಹರ್ದೋಯಿ, ಉನ್ನಾವೋ, ಲಕ್ನೋ, ರಾಯ್ ಬರೇಲಿ, ಬಂದಾ ಮತ್ತು ಫತೇಪುರ್ ಜಿಲ್ಲೆಗಳಲ್ಲಿ ಕೂಡ ಚುನಾವಣೆ ನಡೆದಿದೆ.

ಉಕ್ರೇನ್ ನಿಂದ ಭಾರತಕ್ಕೆ ಬಂದ ವಿದ್ಯಾರ್ಥಿಗಳು

ಉಕ್ರೇನ್ನಲ್ಲಿ ನೆಲೆಸಿದ್ದ ವಿದ್ಯಾರ್ಥಿಗಳು ಸೇರಿದಂತೆ 241 ಭಾರತೀಯರನ್ನು ಏರ್ ಇಂಡಿಯಾ ವಿಶೇಷ ವಿಮಾನ ಮೂಲಕ ಭಾರತಕ್ಕೆ ಕರೆತರಲಾಯಿತು. ರಷ್ಯಾ ಮತ್ತು ಉಕ್ರೇನ್ ಮಧ್ಯೆ ಯುದ್ಧ ಉದ್ವಿಗ್ನತೆ ಉಂಟಾದ ಕಾರಣ ಭಾರತೀಯ ಪ್ರಜೆಗಳನ್ನು ಕರೆತರಲು ಕೇಂದ್ರ ಸರ್ಕಾರ ಏರ್ ಇಂಡಿಯಾದ ಮೂರು ವಿಮಾನಗಳನ್ನು ವ್ಯವಸ್ಥೆ ಮಾಡಿದೆ. ಅದರಲ್ಲಿ ಮೊದಲ ವಿಮಾನ 241 ಭಾರತೀಯರನ್ನು ಹೊತ್ತು ಮಂಗಳವಾರ ರಾತ್ರಿ 11.45 ರ ಸುಮಾರಿಗೆ ದೆಹಲಿಗೆ ಬಂದಿಳಿದಿದೆ.

ಹಾಲಿವುಡ್ ನಲ್ಲೂ ಕೆಜಿಎಫ್ 2

ಕೆಜಿಎಫ್ 2 ಇಂಗ್ಲಿಷ್ ನಲ್ಲೂ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆಯಂತೆ. ಹೌದು ವಿಶ್ವಾದ್ಯಂತ ಈ ಸಿನಿಮಾದ ಕ್ರೇಜ್ ಇರೋದ್ರಿಂದ ,  ಸಿನಿಮಾವನ್ನ  5 ಭಾಷೆಗಳ ಜೊತೆಗೆ ಇಂಗ್ಲಿಷ್ ನಲ್ಲೂ ರಿಲೀಸ್ ಮಾಡುವ ಪ್ಲಾನ್ ನಲ್ಲಿದೆ ಸಿನಿಮಾ ತಂಡ ಎನ್ನಲಾಗ್ತಿದೆ..

ಚೇತನ್ ಗೆ 14  ದಿನಗಳ ನ್ಯಾಯಾಂಗ ಬಂಧನ

ನ್ಯಾಯಾಂಗ ನಿಂದನೆ ಆರೋಪದಡಿ ನಟ ಹಾಗೂ ಸಾಮಾಜಿಕ ಹೋರಾಟಗಾರ ನಟ ಆದಿನಗಳು ಚೇತನ್ ಪೊಲೀಸರಿಂದ ಅರೆಸ್ಟ್  ಇದೀಗ ಅವರನ್ನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಬಿಸಿಸಿಐಗೆ ವಿಶೇಷ ಮನವಿ ಮಾಡಿದ ರೈನಾ 

ಐಪಿಎಲ್ ಮೆಗಾ ಹರಾಜಿನಲ್ಲಿ ಅನ್ ಸೋಲ್ಡ್ ಆದ ಟೀಂ ಇಂಡಿಯಾದ ಮಾಜಿ ಕ್ರಿಕೆಟರ್ ಸುರೇಶ್ ರೈನಾ, ಬಿಸಿಸಿಐಗೆ ವಿಶೇಷವಾದ ಮನವಿವೊಂದನ್ನು ಮಾಡಿಕೊಂಡಿದ್ದಾರೆ. ಐಪಿಎಲ್ ನಲ್ಲಿ ಆಡಲು ಅವಕಾಶ ಸಿಗದ ಭಾರತದ ಆಟಗಾರರಿಗೆ ಇತರೆ ದೇಶಗಳಲ್ಲಿ ನಡೆಯುವ ಲೀಗ್ ನಲ್ಲಿ ಆಡಲು ಅವಕಾಶ ಕೊಡಿ ಎಂದು ರೈನಾ ಮನವಿ ಮಾಡಿಕೊಂಡಿದ್ದಾರೆ.

ಯುವಿ ಗೆ ಕೊಹ್ಲಿ ಯಾವಾಗೂ ಛೀಕೋ…. 

ನೀನು ಪ್ರಪಂಚಕ್ಕೆ ಕಿಂಗ್ ಕೊಹ್ಲಿ ಆಗಿರಬಹುದು, ಆದ್ರೆ ನನಗೆ ಮಾತ್ರ ನೀನು ಎಂದಿಗೂ ಛೀಕೂ..! ನಿನ್ನಲಿರುವ ಛಲ, ಗೆಲ್ಲಬೇಕೆನ್ನುವ ಹಠ ಎಂದಿಗೂ ಬಿಡಬೇಡ ಎಂದು ವಿರಾಟ್ ಕೊಹ್ಲಿಗೆ ಟೀಂ ಇಂಡಿಯಾದ ಮಾಜಿ ಕ್ರಿಕೆಟರ್ ಯುವರಾಜ್ ಸಿಂಗ್ ಭಾವುಕ ಪತ್ರ ಬರೆದಿದ್ದಾರೆ. ಅಲ್ಲದೇ ವಿರಾಟ್ ಗಾಗಿ ಗೋಲ್ಡನ್ ಬೂಟ್ ಅನ್ನು ಗಿಫ್ಟ್ ಕಳುಹಿಸಿದ್ದಾರೆ. ಎಂದಿನಂತೆ ಕೊಹ್ಲಿ ದೇಶವನ್ನು ಇನ್ನಷ್ಟು ಹೆಮ್ಮೆ ಪಡುವಂತೆ ಮಾಡಬೇಕು ಎಂದು ಯುವಿ ಆಶಿಸಿದ್ದಾರೆ.

Tags: #saakshatvdaily updatestop news
ShareTweetSendShare
Join us on:

Related Posts

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

by Shwetha
March 28, 2026
0

ಬೆಂಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡುವ ಮೂಲಕ ದೇಶದ ಜನತೆಗೆ ತುಸು ನೆಮ್ಮದಿ ನೀಡಿದೆ. ಕೇಂದ್ರದ ಈ ನಡೆ...

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

by Shwetha
March 28, 2026
0

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ಫುಡ್ ಡೆಲಿವರಿ ಆ್ಯಪ್‌ಗಳು ಜನರ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ ಈ ಆ್ಯಪ್‌ಗಳು ವಿಧಿಸುವ ಅತಿಯಾದ ಸೇವಾ ಶುಲ್ಕ ಮತ್ತು ಡೆಲಿವರಿ...

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

by Shwetha
March 28, 2026
0

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ದೇಶದಲ್ಲಿ ಬಿಕ್ಕಟ್ಟು ಉಂಟಾಗಿರುವ ಹಿನ್ನೆಲೆ, ಲಾಕ್‌ಡೌನ್ ಅನಿವಾರ್ಯ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಈ ಸುದ್ದಿಗಳನ್ನು ಸಚಿವ ಹರ್ದೀಪ್ ಸಿಂಗ್ ಪುರಿ ತಳ್ಳಿ...

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ

by Shwetha
March 28, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿ ಪ್ರವೇಶದ ವಯೋಮಿತಿಯನ್ನು 60 ದಿನಗಳವರೆಗೆ ಸಡಿಲಗೊಳಿಸಿದೆ. ಇದುವರೆಗೆ ಜೂನ್ 1ರೊಳಗೆ ಮಗುವಿಗೆ 6 ವರ್ಷ ವಯಸ್ಸು ಪೂರ್ಣವಾಗಿರಬೇಕು...

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

by Shwetha
March 28, 2026
0

ಬೆಂಗಳೂರು: ದಾವಣಗೆರೆ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಪಾಳಯದಲ್ಲಿ ಎದುರಾಗಿದ್ದ ಬಂಡಾಯದ ಭೀತಿ ಇದೀಗ ಸಂಪೂರ್ಣವಾಗಿ ತಿಳಿಯಾಗಿದೆ. ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಯಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram