ಪ್ರಮುಖ ರಾಷ್ಟ್ರೀಯ ಸುದ್ದಿಗಳು : Latest Updates
ಸುದ್ದಿಯ ಸಂಪೂರ್ಣ ವಿವರಣೆಗಾಗಿ ಲಿಂಕ್ ಗಳನ್ನ ಕ್ಲಿಕ್ ಮಾಡಿ
ಲೋಕಸಭೆಯಲ್ಲಿ ಜಮ್ಮು ಕಾಶ್ಮೀರ ಮಸೂದೆಗೆ BSP ಬೆಂಬಲ..! ಕಾಂಗ್ರೆಸ್ ವಿರುದ್ಧ ಆಕ್ರೋಶ..!
ನವದೆಹಲಿ: ಲೋಕಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪುನರ್ ರಚನೆ ಮಸೂದೆಯನ್ನು ಬಿಎಸ್ ಪಿ ಬೆಂಬಲಿಸಿದೆ. ಅಲ್ದೇ ಇದೇ ವೇಳೆ ಸರ್ಕಾರದ ಸುಧಾರಣಾ ಕ್ರಮಗಳಿಗೆ ವಿರೋಧ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ವಿರುದ್ಧವೂ ವಾಗ್ದಾಳಿ ನಡೆಸಿದೆ. ಇಂದು ಲೋಕಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಮಸೂದೆ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಬಿಎಸ್ ಪಿ ಸಂಸದ ಮಲೂಕ್ ನಗರ್ ಅವರು, ನಮ್ಮ ಪಕ್ಷ ಬಡವರು, ದಲಿತರು ಮತ್ತು ಕೇಂದ್ರಾಡಳಿತ ಪ್ರದೇಶದ ಇತರ ವಂಚಿತ ಸಮುದಾಯಗಳ ಪರವಾಗಿದೆ ಎಂದರು.
ಒಂದು ವಿಚಾರಕ್ಕಾಗಿ ನನ್ನ ತಂದೆ, ಅಜ್ಜಿ ಹತ್ಯೆಯಾದ ಬಗ್ಗೆ ನನಗೆ ಹೆಮ್ಮೆಯಿದೆ: ರಾಹುಲ್ ಗಾಂಧಿ
ನವದೆಹಲಿ: ನನ್ನ ಅಜ್ಜಿ ಮತ್ತು ತಂದೆ ಒಂದು ವಿಚಾರಕ್ಕಾಗಿ ಹತ್ಯೆಯಾದರು. ಇದರ ಬಗ್ಗೆ ನನಗೆ ಹೆಮ್ಮೆಯಿದೆ. ಇದು ಅವರ ಬಗ್ಗೆ, ನನ್ನ ಸ್ಥಾನದ ಬಗ್ಗೆ ಮತ್ತು ನಾನೇನು ಮಾಡಬೇಕು ಎನ್ನುವ ಬಗ್ಗೆ ನನಗೆ ಅರ್ಥ ಮಾಡಿಸುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೊಂಡಿದ್ದಾರೆ. ಚಿಕಾಗೋ ವಿಶ್ವವಿದ್ಯಾಲಯದ ದೀಪೇಶ್ ಚಕ್ರವರ್ತಿ ಜೊತೆಗೆ ನಡೆಸಿದ ವರ್ಚುವಲ್ ಚರ್ಚೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ , ಕಾಂಗ್ರೆಸ್ ನ ಕುಟುಂಬ ರಾಜಕಾರಣದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ್ದಾರೆ. ನಮ್ಮ ಕುಟುಂಬದ ಮೇಲೆ ಈ ಆಪಾದನೆ ನನಗೆ ಅಚ್ಚರಿ ಮೂಡಿಸುತ್ತದೆ. ನಮ್ಮ ಕುಟುಂಬ ಸದಸ್ಯರು ಪ್ರಧಾನ ಮಂತ್ರಿಯಾಗಿ 30 ವರ್ಷಗಳೇ ಕಳೆಯಿತು ಎಂದಿದ್ದಾರೆ.
ಪರೀಕ್ಷೆ ಬರೆಯಲು ಹೊರಟಾಗಲೇ ಗರ್ಭಿಣಿಗೆ ಹೆರಿಗೆ ನೋವು: ಮಗುವಿಗೆ ಜನ್ಮ ನೀಡಿ ಪರೀಕ್ಷೆ ಬರೆದ ಮಹಿಳೆ..!
ಬಿಹಾರ: ಪರೀಕ್ಷೆ ಬರೆಯಲೆಂದು ತೆರಳುತ್ತಿದ್ದ ತುಂಬು ಗರ್ಭಿಣಿಗೆ ರಸ್ತೆ ಮಧ್ಯೆಯೇ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಮಗುವಿಗೆ ಜನ್ಮ ನೀಡಿ, ಬಳಿಕ ಮಹಿಳೆ ಪರೀಕ್ಷೆಗೆ ಹಾಜರಾಗಿರುವ ಘಟನೆಯೊಂದು ಬಿಹಾರದ ಮೋತಿಹರ ಜಿಲ್ಲೆಯಲ್ಲಿ ನಡೆದಿದೆ. ಕಾಜಲ್ ಎಂಬ ಮಹಿಳೆ ತುಂಬು ಗರ್ಭಿಣಿಯಾಗಿದ್ದು, ದ್ವಿತೀಯ ಪಿಯು ಪರೀಕ್ಷೆ ಇದ್ದುದರಿಂದ ಪರೀಕ್ಷೆ ಬರೆಯಲು ಜಿಲ್ಲಾ ಕೇಂದ್ರಕ್ಕೆ ತೆರಳಲು ವಾಹನದಲ್ಲಿ ಹೋಗುತ್ತಿದ್ದಳು. ಮಾರ್ಗ ಮಧ್ಯೆಯೇ ಹೆರಿಗೆ ನೋವು ಕಾಣಿಸಿಕೊಂಡಿದೆ. ಕುಟುಂಬಸ್ಥರು ತಕ್ಷಣ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಗುವಿಗೆ ಜನ್ಮ ನೀಡಿದ ಬಳಿಕ ಆಕೆ ತಕ್ಷಣ ಪರೀಕ್ಷಾ ಕೇಂದ್ರಕ್ಕೆ ತೆರಳಿ ಪರೀಕ್ಷೆಯನ್ನು ಬರೆದಿದ್ದು, ನಿಜಕ್ಕೂ ಶ್ಲಾಘನೀಯವೇ.
ಬಿಜೆಪಿ ಕಾರ್ಯಕರ್ತರ ಕೊಲೆ ಮಾಡಿದ್ದ ಉಗ್ರನ ಬಂಧನ..!
ಜಮ್ಮು: ಕಳೆದ ವರ್ಷ ದಕ್ಷಿಣ ಕಾಶ್ಮೀರದಲ್ಲಿ ಮೂವರು ಬಿಜೆಪಿ ಕಾರ್ಯಕರ್ತರನ್ನು ಹಾಗೂ ಒಬ್ಬ ಪೊಲೀಸ್ ಸಿಬ್ಬಂದಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಉಗ್ರನನ್ನು ಪೊಲೀಸರು ಸಾಂಬಾ ಜಿಲ್ಲೆಯಲ್ಲಿ ಬಂಧಿಸಿದ್ದಾರೆ. ಅನಂತನಾಗ್ ಪೊಲೀಸರಿಂದ ದೊರೆತ ಖಚಿತ ಮಾಹಿತಿ ಮೇರೆಗೆ ಜಹೂರ್ ಅಹಮದ್ ಅಲಿಯಾಸ್ ಖಾಲಿದ್ನನ್ನು ಸಾಂಬಾ ಜಿಲ್ಲೆಯ ಮನೆಯೊಂದರಲ್ಲಿ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
‘ಸಿಕ್ಕ ಸಿಕ್ಕ ಜಾಗಗಳಲ್ಲಿ ಎಲ್ಲೆಂದರಲ್ಲಿ ಯಾವಾಗ ಬೇಕಿದ್ದರೂ ಪ್ರತಿಭಟನೆ ನಡೆಸೋಹಾಗಿಲ್ಲ’ : ಸುಪ್ರೀಂ ಕೋರ್ಟ್
ನವದೆಹಲಿ: ಸಿಟಿಜನ್ಶಿಪ್ ಕಾನೂನಿನ ವಿರುದ್ಧ ನಡೆದ ಪ್ರತಿಭಟನೆಗಳನ್ನು ಕಾನೂನುಬಾಹಿರ ಎಂದು ಹೇಳಿದ್ದ ತನ್ನ ತೀರ್ಪನ್ನು ಬದಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅಲ್ಲದೇ ಪ್ರತಿಭಟನೆಯ ಹಕ್ಕಿದೆ ಎಂದು ಸಿಕ್ಕ ಸಿಕ್ಕ ಜಾಗಗಳಲ್ಲಿ ಎಲ್ಲೆಂದರಲ್ಲಿ ಯಾವಾಗ ಬೇಕಿದ್ದರೂ ಪ್ರತಿಭಟನೆ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
‘ಯಾರ್ ಸ್ಯಾಮಿ ಕುಟುಂಬ ರಾಜಕಾರಣ ಮಾಡ್ತಿರೋರು..? ಪ್ರಧಾನಿಯಾಗಿ 30 ವರ್ಷವಾಗಿದೆ’..!
ನವದೆಹಲಿ: ನಮ್ಮ ಕುಟುಂಬದವರು ಪ್ರಧಾನಿಯಾಗಿ 30 ವರ್ಷವಾಗಿದೆ. ಆದರೂ ಕುಟುಂಬ ರಾಜಕಾರಣ ಎಂದು ಟೀಕಿಸುತ್ತಾರೆ. ಕುಟುಂಬ ರಾಜಕಾರಣ ಮಾಡ್ತಿದ್ದೇವೆ, ವಂಶ ರಾಜಕೀಯ ಮಾಡುತ್ತಿದ್ದೇವೆ ಎಂದು ಪದೇ ಪದೇ ಕೆಲವರು ಹೀಯಾಳಿಸುತ್ತಿದ್ದಾರೆ. ನಾವೇನು ಕುಟುಂಬ ರಾಜಕಾರಣ ಮಾಡುತ್ತಿದ್ದೇವಾ. ವಿನಾಕಾರಣ ಆರೋಪ ಏಕೆ ಮಾಡುತ್ತಿದ್ದೀರಿ. ನಾವು ಇಂತಹ ಇಂಥ ಟೀಕೆಗಳಿಗೆ ಬೆದರಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗೆ ಟರ್ಕಿ ಸಂಚು – ಪಾಪಿ ಪಾಕ್ ಗೆ ಟರ್ಕಿ ಸಾಥ್..!
ಭಾರತದ ಬದ್ಧ ವೈರಿ ರಾಷ್ಟ್ರ ಅಂದ್ರೆ ಅದು ಪಾಕಿಸ್ತಾನ. ಪಾಕ್ ಗೆ ಕೆಲವೇ ಕೆಲವು ಮಿತ್ರ ರಾಷ್ಟ್ರಗಳಲ್ಲಿ ಒಂದು ಟರ್ಕಿ. ಇದೇ ಟರ್ಕಿ ರಾಷ್ಟ್ರ ಇದೀಗ ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಸಂಚು ರೂಪಿಸುತ್ತಿದೆ. ಹಿಂಸಾಚಾರವನ್ನು ಹರಡಲು ಟರ್ಕಿಯ ಅಧ್ಯಕ್ಷ ರೆಚಪ್ ತಯ್ಯಿಪ್ ಎರ್ಡೊಗನ್ ತನ್ನ ಸೈನಿಕರನ್ನು ಕಾಶ್ಮೀರಕ್ಕೆ ಕಳುಹಿಸಲು ತಯಾರಿ ನಡೆಸುತ್ತಿದ್ದಾರೆ ಎಂದು ಗ್ರೀಕ್ ಮಾಧ್ಯಮವೊಂದು ವರದಿ ಮಾಡಿದೆ.
ಚೀನಾಗೆ ಒಂದಿಂಚೂ ಭೂಮಿಯನ್ನ ಬಿಟ್ಟುಕೊಟ್ಟಿಲ್ಲ: ರಕ್ಷಣಾ ಸಚಿವಾಲಯ..!
ನವದೆಹಲಿ : ಪೂರ್ವ ಲಡಾಖ್ ನ ಪ್ಯಾಂಗಾಂಗ್ ತ್ಸೊ ಸರೋವರದ ಪ್ರದೇಶದಲ್ಲಿನ ಸೇನಾ ಪಡೆಗಳನ್ನು ವಾಪಸ್ ಕರೆಸಿಕೊಳ್ಳುವ ಸಂಬಂಧ ಚೀನಾದೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಆದ್ರೆ ಇದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ಭಾರತದ ಭೂ ಭಾಗವನ್ನ ಚೀನಾ ವಶಕ್ಕೆ ಪಡೆದಿದೆ ಎಂದು ವದಂತಿಗಳು ಹಬ್ಬುತ್ತಿದೆ. ಆದ್ರೆ ಇದಕ್ಕೆ ರಕ್ಷನಾ ಸಚಿವಾಲಯವು ಸ್ಪಷ್ಟನೆ ನೀಡಿದೆ. ಒಪ್ಪಂದದ ಫಲವಾಗಿ ಯಾವುದೇ ಭೂಭಾಗವನ್ನು ಬಿಟ್ಟುಕೊಟ್ಟಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಫೆಬ್ರವರಿ 15ರಿಂದ ಎಲ್ಲಾ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯ : ಇಲ್ಲದಿದ್ದರೆ 2 ಪಟ್ಟು ದಂಡ ಕಟ್ಟಲು ರೆಡಿಯಾಗಿ..!
ನವದೆಹಲಿ: ಫೆಬ್ರವರಿ 15 ರಿಂದ ಎಲ್ಲಾ ವಾಹನಗಳಿಗೂ ಫಾಸ್ಟ್ಯಾಗ್ ಕಡ್ಡಾಯವಾಗಿದೆ. ಇಲ್ಲದೇ ಹೋದರೆ ಎರಡು ಪಟ್ಟು ಅಧಿಕ ಶುಲ್ಕ ವಿಧಿಸಲಾಗುವುದು ಎಂದು ಹೇಳಲಾಗಿದೆ. ಈ ಹಿಂದೆ ಜನವರಿ 1 ರಿಂದಲೇ ಫಾಸ್ಟ್ಯಾಗ್ ಕಡ್ಡಾಯಗೊಳಿಸಲು ತೀರ್ಮಾನಿಸಲಾಗಿತ್ತು. ಆದರೆ ಕೊರೊನಾ ಹಾಗೂ ಇತರೇ ಕಾರಣಗಳಿಂದಾಗಿ ವಿನಾಯಿತಿ ನೀಡಿ ಫೆಬ್ರವರಿ 15 ರವರೆಗೂ ವಿಸ್ತರಿಸಲಾಗಿದ್ದು ಸೋಮವಾರದಿಂದ ಎಲ್ಲ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯವಾಗಿರುತ್ತದೆ. ಈ ಬಾರಿ ವಿಸ್ತರಣೆಯಾಗುವುದಿಲ್ಲ ಎಂದು ಕೇಂದ್ರ ರಸ್ತೆ ಹೆದ್ದಾರಿ ಪ್ರಾಧಿಕಾರವೂ ಈಗಾಗಲೇ ತಿಳಿಸಿದೆ.
ಕೊರೊನಾ ಮಧ್ಯೆಯೂ ದಾಖಲೆ ರಸಗೊಬ್ಬರ ಪೂರೈಕೆ
ನವದೆಹಲಿ : ಕೊರೊನಾ ಸಂಕಷ್ಟದ ಮಧ್ಯೆಯೂ ದೇಶದ ಯಾವುದೇ ಭಾಗದಲ್ಲಿ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಸಲ ರಸಗೊಬ್ಬರ ಪೂರೈಕೆ ಶೇಕಡಾ 25ರಷ್ಟು ಹೆಚ್ಚಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಶ್ರೀ ಡಿ ವಿ ಸದಾನಂದ ಗೌಡ ಹೇಳಿದ್ದಾರೆ.
ಐಆರ್ಸಿಟಿಸಿಯಿಂದ ಐಆರ್ಸಿಟಿಸಿ-ಐಪೇ ಎಂಬ ಹೊಸ ಪಾವತಿ ಗೇಟ್ವೇ
ಹೊಸದಿಲ್ಲಿ, ಫೆಬ್ರವರಿ13: ಇತ್ತೀಚೆಗೆ ಭಾರತೀಯ ರೈಲ್ವೆ ಪ್ರವಾಸೋದ್ಯಮ ಮತ್ತು ಅಡುಗೆ ನಿಗಮ (ಐಆರ್ಸಿಟಿಸಿ) ತನ್ನ ನವೀಕರಿಸಿದ ವೆಬ್ಸೈಟ್ ಅನ್ನು ರೈಲ್ ಕನೆಕ್ಟ್ ಅಪ್ಲಿಕೇಶನ್ನೊಂದಿಗೆ ಅಧಿಕೃತಗೊಳಿಸಿದೆ. ಇದೀಗ ಐಆರ್ಸಿಟಿಸಿ-ಐಪೇ ಎಂಬ ಹೊಸ ಪಾವತಿ ಗೇಟ್ವೇ ಅನ್ನು ಪ್ರಾರಂಭಿಸಿದೆ. ಇದನ್ನು ರೈಲು ಪ್ರಯಾಣಿಕರು ಪಾವತಿ ಮಾಡಲು ಬಳಸಬಹುದು.
ಋತುಮತಿಯಾದ ತಕ್ಷಣ ಮುಸ್ಲಿಂ ಹೆಣ್ಣುಮಕ್ಕಳು ಮದುವೆಗೆ ಅರ್ಹರು – ಪಂಜಾಬ್-ಹರ್ಯಾಣ ಹೈಕೋರ್ಟ್ ತೀರ್ಪು
ಹರಿಯಾಣ : ನಮ್ಮ ದೇಶದ ಕಾನೂನಿನ ಪ್ರಕಾರ ಯುವತಿಯರು ಮದುವೆಯಾಗಲು ಅವರಿಗೆ ಕನಿಷ್ಠ 16 ವರ್ಷಗಳಾಗಿರಬೇಕು. ಇಲ್ಲದೇ ಹೋದ ಪಕ್ಷದಲ್ಲಿ ಅದನ್ನ ಬಾಲ್ಯವಿವಾಹ ಎಮದು ಪರಿಗಣಿಸಲಾಗುತ್ತೆ. ಅದು ಶಿಕ್ಷಾರ್ಹ ಅಪರಾಧವೂ ಹೌದು. ಆದ್ರೆ ಪಂಜಾಬ್ ಹರಿಯಾಣ ಹೈಕೋರ್ಟ್ ನೀಡಿರುವ ತೀರ್ಪು ಆಶ್ಚರ್ಯವೆನ್ನಿಸುತ್ತೆ. ಯಾಂದ್ರೆ ಮುಸ್ಲಿಂ ಹೆಣ್ಣುಮಕ್ಕಳು ಋತುಮತಿಯಾದ ತಕ್ಷಣ ಮದುವೆಗೆ ಅರ್ಹತೆ ಪಡೆದುಕೊಳ್ಳುತ್ತಾರೆ. ಅಂಥ ಬಾಲಕಿಯರಿಗೆ 18 ವರ್ಷ ಪೂರ್ಣಗೊಳದೇ ಇದ್ದರೂ ಅವರ ವಿವಾಹ ಕಾನೂನುಬದ್ಧವಾಗಿರುತ್ತದೆ ಎಂದು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ತೀರ್ಪು ನೀಡಿದೆ.
ಬ್ಲಾಕ್ ಮಟ್ಟದಲ್ಲಿ ಜನೌಷಧಿ ಕೇಂದ್ರ – ಕೇಂದ್ರ ಸರ್ಕಾರದಿಂದ ಘೋಷಣೆ
ಹೊಸದಿಲ್ಲಿ, ಫೆಬ್ರವರಿ13: ಕೇಂದ್ರದ ಸರ್ಕಾರದ ರಾಸಾಯನಿಕ ಮತ್ತು ರಸಗೊಬ್ಬರಗಳ ರಾಜ್ಯ ಸಚಿವ ಮನ್ಸುಖ್ ಭಾಯ್ ಮಂದವಿಯಾ ಅವರು ಶುಕ್ರವಾರ ಬ್ಲಾಕ್ ಮಟ್ಟದಲ್ಲಿ ಜನೌಷಧಿ ಕೇಂದ್ರವನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ಪ್ರಸ್ತುತ, ಭಾರತದಲ್ಲಿ 7,326 ಜನೌಷಧಿ ಕೇಂದ್ರಗಳಿವೆ. ಬ್ಲಾಕ್ ಮಟ್ಟದಲ್ಲಿ ಹೊಸ ಜನೌಷಧಿ ಕೇಂದ್ರವನ್ನು ತೆರೆಯುವುದರೊಂದಿಗೆ, ಜನರು ಸುಲಭವಾಗಿ ಜೆನೆರಿಕ್ ಔಷಧಿಗಳನ್ನು ಒದಗಿಸಲು ಸಾಧ್ಯವಾಗುತ್ತದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








