ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸೂಪರ್ ಫಾಸ್ಟ್ : ಟಾಪ್ 10 ನ್ಯೂಸ್ – ರಾಜ್ಯದಲ್ಲಿ 8906 ಕೇಸ್ ಗಳು , ಪಂಚ ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟ, ‘ಕಟ್ಟಪ್ಪ’ಗೆ ಕೊರೊನಾ ಪಾಸಿಟಿವ್ 

Namratha Rao by Namratha Rao
January 8, 2022
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ರಾಜ್ಯದಲ್ಲಿ 8906 ಕೊರೊನಾ ಕೇಸ್ ಗಳು

ರಾಜ್ಯದಲ್ಲಿ ಇಂದು ಕೂಡ ಕೊರೊನಾ ಸೋಂಕಿನ ಅಬ್ಬರ ಮುಂದುವರೆದಿದೆ. ಇಂದು ರಾಜ್ಯದಾದ್ಯಂತ 8906 ಕೇಸ್ ಗಳು ಪತ್ತೆಯಾಗಿವೆ. ನಾಲ್ಕು ಮಂದಿ ಹೆಮ್ಮಾರಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡಾ 5.42ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 7113 ಕೇಸ್ ಗಳು ಪತ್ತೆಯಾಗಿವೆ.
ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೂ ರಾಜ್ಯದಲ್ಲಿ ಕರ್ಫ್ಯೂ ಇರಲಿದೆ. ಈ ವೇಳೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ. ಆದ್ರೆ ರಾಜ್ಯದ ಹಲವು ಜಿಲ್ಲೆಗಳಿಗೆ ಈ ವೀಕೆಂಡ್ ಕರ್ಫ್ಯೂಗೆ ಜನರು ಕ್ಯಾರೆ ಎನ್ನುತ್ತಿಲ್ಲ. ಮಂಡ್ಯ, ಮೈಸೂರು, ಮದ್ದೂರು, ಚಿಕ್ಕಬಳ್ಳಾಪುರದಲ್ಲಿ ಜನ ಜೀವನ ಎಂದಿನಂತೆ ಇತ್ತು.

Related posts

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

August 8, 2026
ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

August 8, 2026

ಕೊರೊನಾಗೆ ಭಾರತದಲ್ಲಿ 32 ಲಕ್ಷ ಮಂದಿ ಬಲಿ

ಕೊರೊನಾ ಮೂರನೇ ಅಲೆ ದೇಶದಲ್ಲಿ ಈಗಾಗಲೇ ಆರ್ಭಟಿಸಲು ಶುರು ಮಾಡಿದೆ. ಈ ಮಧ್ಯೆ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದ್ದು, ಕೊರೊನಾ ವೈರಸ್ ಗೆ ಭಾರತದಲ್ಲಿ 32 ಲಕ್ಷ ಮಂದಿ ಬಲಿಯಾಗಿದ್ದಾರೆ ಎಂದು  ಅಧ್ಯಯನವೊಂದು ಪ್ರಕಟಿಸಿದೆ. ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ದೇಶದಲ್ಲಿ ಈವರೆಗೆ  4,83,178 ಜನರು ಕೋವಿಡ್ನಿಂದ ಸಾವನ್ನಪ್ಪಿದ್ದಾರೆ. ಆದ್ರೆ ‘ಸೈನ್ಸ್’ ಜರ್ನಲ್ನಲ್ಲಿ ಪ್ರಕಟವಾದ ಹೊಸ ಅಧ್ಯಯನವು  ಸುಮಾರು 3.2 ಮಿಲಿಯನ್ ಸೋಂಕಿತರು ಭಾರತದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಿದೆ.

ಪಂಚ ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟ

ಉತ್ತರ ಪ್ರದೇಶ, ಉತ್ತರಾಖಂಡ್, ಮಣಿಪುರ, ಪಂಜಾಬ್, ಗೋವಾ ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ ವಾಗಿದೆ. 5 ರಾಜ್ಯಗಳಲ್ಲಿ 7 ಹಂತದಲ್ಲಿ ಚುನಾವಣೆ ನಡೆಯಲಿದೆ. ಫೆಬ್ರವರಿ 14ರಂದು ಪಂಜಾಬ್, ಗೋವಾ, ಉತ್ತರಾಖಂಡ್ನಲ್ಲಿ ಮತದಾನ ನಡೆಯಲಿದೆ. ಉತ್ತರ ಪ್ರದೇಶದ 403 ಕ್ಷೇತ್ರಗಳಿಗೆ 7ಹಂತದಲ್ಲಿ ಮತದಾನ ನಡೆಯಲಿದೆ. ಮಣಿಪುರದ 60 ಕ್ಷೇತ್ರಗಳಿಗೆ 2 ಹಂತದಲ್ಲಿ ಮತದಾನ ನಡೆಯಲಿದೆ. ಫೆಬ್ರವರಿ 27ರಂದು ಮೊದಲ ಹಂತದ ಮತದಾನ, ಮಾರ್ಚ್ 3ರಂದು 2ನೇ ಹಂತದ ಮತದಾನ ನಡೆಯಲಿದ್ದು, ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ.

ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಸುಧಾಕರ್ ವ್ಯಂಗ್ಯ

ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಆರೋಗ್ಯ ಡಾ.ಕೆ.ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಅವರು ರೈಲಿನಲ್ಲಾದರೂ ಹೋಗಲಿ, ಬಸ್ನಲ್ಲಾದರೂ ಹೋಗಲಿ, ಟ್ರೆಕ್ಕಿಂಗ್ ಮಾಡಲಿ. ಇವೆಲ್ಲವೂ ಅವರ ಆರೋಗ್ಯಕ್ಕೆ ಒಳ್ಳೆಯದು. ಮಾಡುವುದನ್ನು ಮಾಡಲಿ, ಸಮಯ ನೋಡಿ ಮಾಡಲಿ ಎಂದು ವ್ಯಂಗ್ಯವಾಡಿದ್ದಾರೆ.

‘ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡೇ ಪಾದಯಾತ್ರೆ ಮಾಡುತ್ತೇವೆ’

ನಾವು ಕೋವಿಡ್ -19 ನಿಯಮಗಳನ್ನು ಪಾಲಿಸಿಕೊಂಡೇ ಪಾದಯಾತ್ರೆ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷ ನಾಳೆ ಪಾದಯಾತ್ರೆ ಆರಂಭಿಸಿಲಿದೆ. ಈ ಮಧ್ಯೆ ರಾಜ್ಯ ಸರ್ಕಾರ ಕೊರೊನಾ ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಮನಗರಕ್ಕೆ ನಿಷೇಧಾಜ್ಞೆ ಜಾರಿ ಮಾಡಿದೆ. ಇದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಯಾಕೆ ರಾಮನಗರಕ್ಕೆ ಮಾತ್ರ ನಿಷೇಧಾಜ್ಞೆ ಹಾಕಿದ್ದಾರೆ. ಅದರ ಅರ್ಥ ಏನು ಎಂದು ಪ್ರಶ್ನಿಸಿದ್ದಾರೆ.

‘ಕೆಜಿಎಫ್: ಚಾಪ್ಟರ್ 2’ ಹೊಸ ಪೋಸ್ಟರ್ 

ಯಶ್ ಜನ್ಮದಿನದ ಪ್ರಯುಕ್ತ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾದಿಂದ ಹೊಸ ಪೋಸ್ಟರ್ ಬಿಡುಗಡೆ ಆಗಿದೆ. ಬೆಳಗ್ಗೆ 9 ಗಂಟೆಗೆ ಪೋಸ್ಟರ್ ರಿಲೀಸ್ ಮಾಡುವುದಾಗಿ ಚಿತ್ರತಂಡ ಒಂದು ದಿನ ಮುಂಚಿತವಾಗಿ ಘೋಷಿಸಿತ್ತು. ಅದರಂತೆ ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಹೊಸ ಪೋಸ್ಟರ್ ರಿಲೀಸ್ ಮಾಡಿದೆ. ಅಲ್ಲದೆ #KGF2onApr14 ಎಂಬ ಹ್ಯಾಶ್ ಟ್ಯಾಗ್ ಬಳಸಿದೆ. ಆ ಮೂಲಕ ರಿಲೀಸ್ ದಿನಾಂಕದಲ್ಲಿ ಸದ್ಯಕ್ಕಂತೂ ಯಾವುದೇ ಬದಲಾವಣೆ ಇಲ್ಲ ಎಂಬುದನ್ನು ಖಚಿತಪಡಿಸಿದೆ.

‘ಕಟ್ಟಪ್ಪ’ಗೆ ಕೊರೊನಾ ಪಾಸಿಟಿವ್ 

ಚನೈ: ಕಾಲಿವುಡ್ ನ ಬಾಹುಬಲಿ ಚಿತ್ರದಲ್ಲಿ ಕಟ್ಟಪ್ಪ ಪಾತ್ರ ಬಹಳಷ್ಟು ಪ್ರಖ್ಯಾತಿ ಪಡೆದಿತ್ತು. ಈ ಪಾತ್ರವನ್ನು ನಿರ್ವಹಿಸದ ಕಾಲಿವುಡ್ ಸ್ಟಾರ್ ನಟ ಸತ್ಯರಾಜ್ ಗೆ ಕೊರೊನಾ ಪಾಸಿಟಿವ್ ಬಂದಿದ್ದು ಇದೀಗ ಅವರನ್ನು ಚೆನ್ನೈನ ಅಮಿಂಜಿಕ್ಕರೈನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿಗತಿ ಬಗ್ಗೆ ತಿಳಿದು ಬಂದಿಲ್ಲ.

ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಸಜ್ಜು

ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಕೆಲ ಬದಲಾವಣೆಗಳು ಆಗುವ ಸಾಧ್ಯತೆಗಳಿವೆ. ಕೇಪ್ ಟೌನ್ ನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಂ ಇಂಡಿಯಾ ಸಿದ್ಧತೆ ಮಾಡಿಕೊಂಡಿದೆ. ಗಾಯದ ಸಮಸ್ಯೆಯಿಂದ 2ನೇ ಟೆಸ್ಟ್ ನಿಂದ ದೂರ ಇದ್ದ ವಿರಾಟ್ ಮತ್ತೆ ತಂಡಕ್ಕೆ ವಾಪಸ್ ಆಗಲಿದ್ದಾರೆ. ಸಿರಾಜ್ ಬದಲು ಉಮೇಶ್ ಯಾದವ್ ಕಣಕ್ಕಿಳಿಯಲಿದ್ದಾರೆ. ವೀಕೆಟ್ ಕೀಪರ್ ಪಂತ್ ಸ್ಥಾನಕ್ಕೆ ಸಹಾ ಆಯ್ಕೆ ಆಗುವ ಸಾಧ್ಯತೆಗಳಿವೆ.

Tags: #saakshatvCinemaindiaInternationalkannadanewsNationalpoliticalSportstopnews
ShareTweetSendShare
Join us on:

Related Posts

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

by Shwetha
August 8, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಡಶಾಲೆಯಲ್ಲಿ ಬಂಡಾಯದ ಬೇಗುದಿ ಜೋರಾಗಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಗಳೂರಿನ ಹಿರಿಯ ಶಾಸಕ...

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

by Shwetha
August 8, 2026
0

ಮುಂಬೈ: ಮೀಸಲಾತಿ ಎನ್ನುವುದು ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಇರುವ ವ್ಯವಸ್ಥೆಯೇ ಹೊರತು ಅದು ಶಾಶ್ವತವಲ್ಲ. ಈಗಾಗಲೇ ಮೀಸಲಾತಿ ಲಾಭ ಪಡೆದು ಸಮಾಜದಲ್ಲಿ ಸಬಲರಾಗಿರುವವರು ಸ್ವಯಂಪ್ರೇರಣೆಯಿಂದ ಮೀಸಲಾತಿ ಸೌಲಭ್ಯವನ್ನು...

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

by Shwetha
August 8, 2026
0

ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮರುಪರಿಶೀಲನೆ (SIR) ಪ್ರಕ್ರಿಯೆ ವೇಳೆ, ತಮ್ಮ ಮಾಹಿತಿ ಮತ್ತು ದಾಖಲೆಗಳನ್ನು ದೃಢೀಕರಿಸದ ಮತದಾರರ ಹೆಸರುಗಳು ಅಂತಿಮ ಮತದಾರರ ಪಟ್ಟಿಯಿಂದ ಕೈಬಿಡುವ...

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

by Shwetha
August 8, 2026
0

ಬೆಂಗಳೂರು: ದೇಶದ ಅತ್ಯಂತ ಹಿರಿಯ ವಿಧಾನ ಪರಿಷತ್ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಸರ್ಕಾರ ಅನುಸರಿಸಿದ ಹಾದಿ...

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

by Shwetha
August 8, 2026
0

ಭಾರತವು ಹಿಂದೂ ರಾಷ್ಟ್ರವಾಗಬಾರದು ಎಂಬ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಹಾಗೂ ತೀವ್ರ ವಾಕ್ಸಮರಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram