ರಾಜ್ಯಪಾಲರ ಸಭೆ ಬಳಿಕ ರಾಜ್ಯದಲ್ಲಿ ಟಫ್ ರೂಲ್ಸ್ : ಆರ್.ಅಶೋಕ್
ಬೆಂಗಳೂರು : ರಾಜ್ಯಪಾಲರ ಸಭೆ ಬಳಿಕ ಖಂಡಿತವಾಗಿಯೂ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿಯಾಗಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ.
ರಾಜ್ಯಪಾಲರ ಸಭೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವತ್ತು ರಾಜ್ಯಪಾಲರು ವರ್ಚುವಲ್ ಸಭೆ ಕರೆದಿದ್ದಾರೆ.
ಸಿಎಂ, ವಿಪಕ್ಷ ನಾಯಕರು, ಅಧಿಕಾರಿಗಳು, ಸಚಿವರಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಕೋವಿಡ್ ನಿರ್ವಹಣೆಯಲ್ಲಿ ಗವರ್ನರ್ ಕೂಡ ಭಾಗಿಯಾಗಬೇಕು ಎಂದು ಕೇಂದ್ರ ಸೂಚಿಸಿದೆ.
ಈ ಹಿನ್ನೆಲೆಯಲ್ಲಿ ಇದಕ್ಕೆ ಕಾಂಗ್ರೆಸ್ ನವರು ಯಾವುದೇ ಅರ್ಥ ಕಲ್ಪಿಸೋದು ಬೇಡ. ಎಲ್ಲಾ ರಾಜ್ಯಗಳಲ್ಲಿ ರಾಜ್ಯಪಾಲರು ಈ ಕೆಲಸ ಮಾಡುತ್ತಿದ್ದಾರೆ.
ರಾಜ್ಯಪಾಲರ ಸಭೆ ಬಳಿಕ ಖಂಡಿತವಾಗಿಯೂ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿಯಾಗಲಿದೆ ಎಂದು ತಿಳಿಸಿದರು.
ಇನ್ನು ಎಲ್ಲೆಲ್ಲಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ದಾಸ್ತಾನಿಗೆ ಅವಕಾಶವಿದೆಯೋ ಅದನ್ನು ಕೊಡಿಸಲಾಗುವುದು.
ಸಿಲಿಂಡರ್ ಮೂಲಕವೇ ಆಗಬೇಕಾದ ಕಡೆಗೆ ಖಾಲಿ ಸಿಲಿಂಡರ್ ಗಳನ್ನು ವಿತರಿಸಿ, ಆ ಮೂಲಕವೂ ದಾಸ್ತಾನಿಗೆ ಕ್ರಮ ಕೈಗೊಳ್ಳಲು ವ್ಯವಸ್ಥೆ ಮಾಡಲಾಗುವುದು ಎಂದು ಆಕ್ಸಿಜನ್ ಕೊರತೆ ಬಗ್ಗೆ ಪ್ರತಿಕ್ರಿಯೆ ನೀಡಿದರು.