ತೌಕ್ತೆ ಚಂಡಮಾರುತ : ಮಹಾರಾಷ್ಟ್ರ, ಗುಜರಾತ್ ಸಿಎಂಗಳೊಂದಿಗೆ ಅಮಿತ್ ಶಾ ಚರ್ಚೆ
ನವದೆಹಲಿ: ದೇಶದ ಮಲೆನಾಡು , ಕರಾವಳಿ ಭಾಗಗಳಲ್ಲಿ ತೌಕ್ತೆ ಚಂಡಮಾರುತದ ಆತಂಕ ಶುರುವಾಗಿರುವ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ್ದಾರೆ.
ಚಂಡಮಾರುತವನ್ನು ಎದುರಿಸಲು ರಾಜ್ಯ ಸರ್ಕಾರಗಳು ಕೈಗೊಂಡ ಪರಿಹಾರ ಕಾರ್ಯ ಮತ್ತು ಮುಂಜಾಗ್ರತಾ ಕ್ರಮಗಳ ಬಗ್ಗೆ ಅಮಿತ್ ಶಾ ಮಾಹಿತಿ ಪಡೆದಿದ್ದಾರೆ. ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಕೇಂದ್ರವು ರಾಜ್ಯ ಸರ್ಕಾರಗಳೊಂದಿಗೆ ಕೈಜೋಡಿಸಲಿದೆ ಎಂಬ ಭರವಸೆಯನ್ನೂ ಅಮಿತ್ ಶಾ ನೀಡಿದ್ದಾರೆ.
ಇಂದು ಗೋವಾದ ಕರಾವಳಿ ಭಾಗಗಳಲ್ಲಿ ಚಂಡಮಾರುತ ಅಪ್ಪಳಿಸಿದೆ. ಇದರಿಂದಾಗಿ ಗೋವಾದಲ್ಲಿ ಭಾರಿ ಹಾನಿ ಸಂಭವಿಸಿದೆ. ಮತ್ತೊಂದೆಡೆ ಕರ್ನಾಟಕದ ಉಡುಪಿ , ಮಂಗಳೂರು , ಚಿಕ್ಕಮಗಳೂರು , ಕೊಡಗಿನಲ್ಲೂ ಭಾರೀ ಮಳೆಯಾಗ್ತಿದ್ದು, ರಾಜ್ಯದ ಕರಾವಳಿ ಭಾಗದ ಪರಿಸ್ಥಿತಿಯೂ ಹದಗೆಡುತ್ತಿದೆ.
ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗುಜರಾತ್ ನತ್ತ ಸಾಗಿರುವ ಚಂಡಮಾರುತ, ಪೋರಬಂದರ್ ಹಾಗೂ ನಲಿಯಾ ನಡುವಿನ ಕರಾವಳಿ ಪ್ರದೇಶವನ್ನು ಮೇ 18ರ ವೇಳೆಗೆ ದಾಟುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಶನಿವಾರ ತಿಳಿಸಿದೆ.
ಮೇ 16ರಿಂದ 18ರ ವರೆಗಿನ ಅವಧಿಯಲ್ಲಿ ತೌಕ್ತೆ ಚಂಡಮಾರುತ ಹೆಚ್ಚು ತೀವ್ರವಾಗಿರಲಿದೆ ಎಂದೂ ಹವಾಮಾನ ಇಲಾಖೆ ಹೇಳಿದೆ. ಚಂಡಮಾರುತದಿಂದ ಉದ್ಭವಿಸುವ ಸಂಕಷ್ಟ ಪರಿಸ್ಥಿತಿಯನ್ನು ಎದುರಿಸಲು 100 NDRF ತಂಡಗಳನ್ನು ನಿಯೋಜಿಸಲಾಗಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.