ಬೆಂಗಳೂರು: ಮಂಡ್ಯದ ಜನತೆಯನ್ನು ಬೆಚ್ಚಿ ಬೀಳಿಸಿರುವ ತ್ರಿಬಲ್ ಮರ್ಡರ್ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀವಾಗಿ ಪರಿಗಣಿಸಿದೆ.
ಹುಂಡಿ ಕದಿಯಲು ಬಂದು ಮೂವರು ಪೂಜಾರಿಗಳನ್ನು ಕೊಲೆ ಮಾಡಿರುವ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಖಡಕ್ ಸಂದೇಶ ರವಾನಿಸಿದ್ದಾರೆ.

ಮಂಡ್ಯದ ಕೊಪ್ಪಲು ಪ್ರದೇಶದಲ್ಲಿರುವ ಅರ್ಕೇಶ್ವರ ದೇವಾಲಯದ ಪೂಜಾರಿಗಳಾದ ಗಣೇಶ್, ಪ್ರಕಾಶ್ ಹಾಗೂ ಆನಂದ್ರನ್ನು ದುಷ್ಕರ್ಮಿಗಳು ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ. ಘಟನೆಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು, ಈ ಘಟನೆ ಬಗ್ಗೆ ತಿಳಿದು ನೋವಾಗಿದೆ. ಹತ್ಯೆಗೊಳಗಾದ ಪೂಜಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಟ್ವಿಟರ್ನಲ್ಲಿ ಘೋಷಿಸಿದ್ದಾರೆ.

ಮುಜರಾಯಿ ಇಲಾಖೆಗೆ ಸೇರಿದ ಅರ್ಕೇಶ್ವರ ದೇವಾಲಯದಲ್ಲಿ ಗಣೇಶ್, ಪ್ರಕಾಶ್ ಹಾಗೂ ಆನಂದ್ ಪೂಜಾರಿಗಳಾಗಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಹಗಲಿನ ವೇಳೆ ಪೂಜಾ ಕೈಂಕರ್ಯ ನಡೆಸಿ ರಾತ್ರಿ ವೇಳೆ ದೇವಸ್ಥಾನದ ಕಾವಲು ನೋಡಿಕೊಳ್ಳುತ್ತಿದ್ದರು. ರಾತ್ರಿ ದೇವಸ್ಥಾನದಲ್ಲೇ ಮಲಗಿ ಭದ್ರತೆಯ ಜವಾಬ್ದಾರಿಯನ್ನೂ ಹೊತ್ತಿದ್ದರು. ಈ ವೇಳೆ ಹುಂಡಿ ಕದಿಯಲು ಬಂದ ದುಷ್ಕರ್ಮಿಗಳು ಅಡ್ಡ ಬದ್ದ ಮೂವರನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ.
https://www.youtube.com/watch?v=I5BRabD3f5A








