ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಮತ್ತೆ ಸಂಕಷ್ಟ ಶುರುವಾದಂತಾಗಿದೆ.
ಪ್ರಕರಣದ ಆರೋಪಿಗಳಾದ ನಟ ದರ್ಶನ್ (Darshan) ವಿರುದ್ಧ ಸುಪ್ರೀಂ ಕೋರ್ಟ್ (Supreme Court) ಮೆಟ್ಟಿಲೇರಲು ಸರ್ಕಾರ ಮುಂದಾಗಿದೆ. ದರ್ಶನ್ ಜಾಮೀನು ರದ್ದು ಮಾಡಬೇಕೆಂದು ಆಗ್ರಹಿಸಿ ಮೇಲ್ಮನವಿ ಸಲ್ಲಿಸಲು ಸರ್ಕಾರ (Karnataka Government) ಸೂಚಿಸಿದೆ. ಹೀಗಾಗಿ ಮೇಲ್ಮನವಿ ಸಲ್ಲಿಕೆಗೆ ಗೃಹ ಇಲಾಖೆ ಅಧಿಕಾರಿಗಳಿಂದ ಪೊಲೀಸ್ ಇಲಾಖೆಗೆ ಆದೇಶ ನೀಡಲಾಗಿದೆ.
ಬೆಂಗಳೂರು ಪೊಲೀಸರ (Bengalruu Police) ಪರವಾಗಿ ಸುಪ್ರೀಂ ಕೋರ್ಟ್ನಲ್ಲಿ ವಾದಿಸಲು ಅನಿಲ್ ಸಿ ನಿಶಾನಿ ಹಾಗೂ ಹಿರಿಯ ವಕೀಲ ಸಿದ್ದಾರ್ಥ್ ಲುಥಾರ ರನ್ನು ನೇಮಿಸಲಾಗಿದೆ. ಹೀಗಾಗಿ ಸುಪ್ರೀಂ ಕೋರ್ಟ್ನಲ್ಲಿ ಸ್ಪೆಷಲ್ ಲೀವ್ ಪಿಟಿಷನ್ (SLP) ಸಲ್ಲಿಕೆಯಾಗುವ ಸಾಧ್ಯತೆಯಿದೆ. ಪವಿತ್ರಗೌಡ, ದರ್ಶನ್ ಸೇರಿದಂತೆ 7 ಜನ ಆರೋಪಿಗಳ ವಿರುದ್ಧ ಸುಪ್ರೀಂ ಮೆಟ್ಟಿಲೇರಲು ಬೆಂಗಳೂರು ಪೊಲೀಸರು ನಿರ್ಧರಿಸಿದ್ದಾರೆ.
ಬಂಗಾಳ ಗೆಲುವಿನ ಸಂಭ್ರಮದ ನಡುವೆಯೇ ಮೇ 10ಕ್ಕೆ ರಾಜ್ಯಕ್ಕೆ ಮೋದಿ ಆಗಮನ :ಡಾ ಸಿ ಎನ್ ಮಂಜುನಾಥ್
ಬೆಂಗಳೂರು ಪಶ್ಚಿಮ ಬಂಗಾಳದ ರಾಜಕೀಯ ರಣಕಣದಲ್ಲಿ ಮಹತ್ವದ ಬದಲಾವಣೆಗಳು ಸಂಭವಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಮೇ 10 ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಎಂದು ಬೆಂಗಳೂರು...








