ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಹೆಚ್ ಎಸ್ ದೊರೆಸ್ವಾಮಿ ಬಗ್ಗೆ ಶಾಸಕ ಯತ್ನಾಳ್ ನೀಡಿರುವ ಹೇಳಿಕೆಗಳನ್ನು ಖಂಡಿಸಿ ಕಾಂಗ್ರೆಸ್ ಯತ್ನಾಳ್ ವಿರುದ್ಧ ಕಿಡಿಕಾರುತ್ತಿದೆ. ಇದೇ ವಿಚಾರವಾಗಿ ಅಧಿವೇಶನದಲ್ಲಿ ಕಾಂಗ್ರೆಸ್ ಧ್ವನಿ ಎತ್ತುತ್ತಿದ್ದು, ಇದೀಗ ಯತ್ನಾಳ್ ಹಾಗೂ ಬಿಜೆಪಿ ವಿರುದ್ಧ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಎಸ್. ದೊರೆಸ್ವಾಮಿ ಅವರನ್ನು ಕ್ರಿಮಿನಲ್ ರೀತಿ ಬಿಂಬಿಸಲು ಮುಂದಾಗಿರುವುದು ಸರಿಯಲ್ಲ. ಅವರು ಸ್ವಾತಂತ್ರ್ಯ ಹೋರಾಟಗಾರರಲ್ಲ ಎಂದರೆ ಮತ್ಯಾಕೆ ಪಿಂಚಣಿ ಕೊಡುತ್ತಿದ್ದೀರಿ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.
ದೊರೆಸ್ವಾಮಿ ಅವರ ಸೇವೆ ಮತ್ತು ಸಮಾಜಕ್ಕೆ ನೀಡಿರುವ ಕೊಡುಗೆಯನ್ನು ಪ್ರತಿಯೊಬ್ಬರು ಸ್ಮರಿಸಬೇಕು. ಬರೀ ಯತ್ನಾಳ್ ಹೇಳಿಕೆ ಮಾತ್ರವಲ್ಲ. ಇಡೀ ಬಿಜೆಪಿಗರು ಅವರ ಹೇಳಿಕೆ ಸಮರ್ಥನೆ ಮಾಡಿಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ. ದೊರೆಸ್ವಾಮಿಯಂತಹ ವ್ಯಕ್ತಿಗಳು ಹೋರಾಟ ಮಾಡಿದ ಕಾರಣದಿಂದಲೇ ನಾವು ಇಂದು ಶಾಸಕರಾಗಿ ಸದನದೊಳಗೆ ಇದ್ದೇವೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!
ಹೊಸ ದೆಹಲಿ: ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಪ್ರತಿದಿನವೂ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ ಎಂದು ಬಾಲಿವುಡ್ ನಟಿ ಹಾಗೂ ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ...








