Tumkur | ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ
ತುಮಕೂರು : ತುಮಕೂರಿನಲ್ಲಿ ಬೆಳ್ಳಂ ಬೆಳಿಗ್ಗೆ ನೆತ್ತರು ಹರಿದಿದ್ದು, ವ್ಯಕ್ತಿಯ ಕೊಲೆಗೆ ಯತ್ನಿಸಲಾಗಿದೆ.
ತುಮಕೂರು ನಗರದ ಭೀಮಸಂದ್ರದಲ್ಲಿ ಘಟನೆ ನಡೆದಿದೆ.
40 ವರ್ಷದ ರಂಗಾರಾಜು ಎಂಬಾತನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ.
ಗಾಯಾಳು ರಂಗರಾಜು ಸ್ಥಿತಿ ಗಂಭೀರವಾಗಿದ್ದು, ನಿಮ್ಹಾನ್ಸ್ ಗೆ ರವಾನೆ ಮಾಡಲಾಗಿದೆ.
ಕಿರಣ್ ಎಂಬಾತನಿಂದ ರಂಗಾರಾಜು ಮೇಲೆ ಹಲ್ಲೆ ನಡೆಸಲಾಗಿದೆ.
ಈ ಹಿಂದೆ ರಂಗರಾಜು, ಕಿರಣ್ ತಂದೆಗೆ ಮಾರಣಾಂತಿಕ ಹಲ್ಲೆ ಮಾಡಿದ್ದರು.
ಈ ಬಗ್ಗೆ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು..
ಕಿರಣ್ ಗು ಕೂಡ ಹೊಡಿತಿನಿ ಎಂದು ಹೇಳಿಕೊಂಡು ಓಡಾಡುತ್ತಿದ್ದ ಎನ್ನಲಾಗಿದೆ.
ಇವತ್ತು ಬೆಳಗ್ಗೆ ಕಿರಣ್ ಜೊತೆ ಜಗಳಕ್ಕೆ ಇಳಿದಿದ್ದ ರಂಗರಾಜುಗೆ ಕಿರಣ್ ಮಚ್ಚನಿಂದ ಹಲ್ಲೆ ನಡೆಸಿದ್ದಾರೆ.
ಇತ್ತ ತಿಲಕ್ ಪಾರ್ಕ್ ಠಾಣಾ ಪೊಲೀಸರು ಆರೋಪಿ ಕಿರಣ್ ಅವರನ್ನ ವಶಕ್ಕೆ ಪಡೆದಿದ್ದಾರೆ.
ಇನ್ನು ಸಂಬಂಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.