Tumkur | ಪ್ಲೆಕ್ಸ್ ವಿಚಾರ – ಜೆಡಿಎಸ್ – ಬಿಜೆಪಿ ಕಾರ್ಯಕರ್ತರ ಗಲಾಟೆ
ತುಮಕೂರು : ಪ್ಲೆಕ್ಸ್ ಕಟ್ಟುವ ವಿಚಾರಕ್ಕೆ ಜೆಡಿಎಸ್ – ಬಿಜೆಪಿ ಕಾರ್ಯಕರ್ತರು ಗಲಾಟೆ ಮಾಡಿಕೊಂಡು ಆಸ್ಪತ್ರೆ ಪಾಲಾಗಿರುವ ಘಟನೆ ತುಮಕೂರು ತಾಲೂಕಿನ ಡಿ ಕೊರಟಗೆರೆ ಗ್ರಾಮದಲ್ಲಿ ನಡೆದಿದೆ.
ಡಿ-ಕೊರಟಗೆರೆಯಲ್ಲಿ ಗ್ರಾಮದೇವತೆ ಜಾತ್ರೆ ನಡೆಯುತ್ತಿದ್ದು, ಜೆಡಿಎಸ್ ಕಾರ್ಯಕರ್ತ ಸಿರಾಜ್ ಹಾಗೂ ಮತ್ತೋರ್ವ ಜಾತ್ರೆ ಪ್ರಯುಕ್ತ ಪ್ಲೆಕ್ಸ್ ಹಾಕಲು ಮುಂದಾಗಿದ್ದರು.
ಈ ವೇಳೆ ಬಿಜೆಪಿ ಕಾರ್ಯಕರ್ತರಾದ ಉಮೇಶ್,ಚಂದ್ರು ಹಾಗೂ ಇತರರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಗಲಾಟೆಯಲ್ಲಿ ಜೆಡಿಎಸ್ ಕಾರ್ಯಕರ್ತ ಸಿರಾಜ್ ಹಾಗೂ ಮತ್ತೋರ್ವನಿಗೆ ಗಾಯಗಳಾಗಿವೆ.
ಸದ್ಯ ಗಾಯಾಳುಗಳನ್ನು ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇನ್ನು ಈ ಸಂಬಂಧ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.