Tumkuru | ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಹೊಡೆದಾಟ
ತುಮಕೂರು : ನಗರದ ರಾಜೀವ್ ಗಾಂಧಿ ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಹೊಡೆದಾಟ ನಡೆದಿದೆ.
ಈ ಘಟನೆಯಲ್ಲಿ ಇಬ್ಬರು ಮಾರಣಾಂತಿಕವಾಗಿ ಗಾಯಗೊಂಡಿದ್ದಾರೆ.
34 ವರ್ಷದ ಮೆಹಬೂಬ್ ಪಾಷಾ ಮತ್ತು ಇದಾಯತ್ ಗಾಯಗೊಂಡವರಾಗಿದ್ದು, ಇವರನ್ನು ತುಮಕೂರಿನ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹಣದ ವ್ಯವಹಾರದಲ್ಲಿ ಮನಸ್ತಾಪ ಬಂದು ನಡೆದ ಗಲಾಟೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಮಚ್ಚಿನಿಂದ ಇವರ ಮೇಲೆ ಹಲ್ಲೆ ನಡೆಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳು ಮೆಹಬೂಬ್ ಪಾಷಾನನ್ನು ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









