ಬಳ್ಳಾರಿ: ಕಳೆದೆರೆಡು ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ರಾಜ್ಯದ ಬಹುತೇಕ ನದಿಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ಮಹಾಮಳೆಗೆ ತುಂಗಭದ್ರಾ ಜಲಾಶಯದ ಒಳಹರಿವು ಏಕಾಎಕಿ ಹೆಚ್ಚಾಗಿದ್ದು, 17,858 ಕ್ಯುಸೆಕ್ ಒಳಹರಿವು ದಾಖಲಾಗಿದೆ. 1,633 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ1,612.50 ಅಡಿ ನೀರಿನ ಸಂಗ್ರಹವಾಗಿದೆ. ಒಳಹರಿವು ಹೆಚ್ಚಾದ ಹಿನ್ನಲೆ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಲಾಗಿದ್ದು, 7,808 ಕ್ಯುಸೆಕ್ ನೀರು ಕಾಲುವೆಗಳಿಗೆ ಹರಿಸಲಾಗುತ್ತಿದೆ. ತುಂಗಭದ್ರಾ ಡ್ಯಾಂ ಸಂಪೂರ್ಣ ಭರ್ತಿಯಾಗಿದ್ದು, 60,425 ಕ್ಯುಸೆಕ್ ನೀರು ನದಿಗೆ ಹರಿಸಲಾಗುತ್ತಿದೆ. ಇನ್ನೂ ನದಿ ಪಾತ್ರದ ಜನರಿಗೆ ಮುನ್ನೆಚ್ಚರಿಕೆ ವಹಿಸುವಂತೆ ಜಲ್ಲಾಡಳಿತ ಎಚ್ಚರಿಸಿದ್ದು, ಜಲಾಶಯದತ್ತ ಜನರು ಓಡಾಡದಂತೆ ತಿಳಿಸಿದೆ.
ಸ್ಪೀಕರ್ ಪದಚ್ಯುತಿ ನೋಟಿಸ್ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ 118 ವಿರೋಧ ಪಕ್ಷದ ಸಂಸದರು ಸಲ್ಲಿಸಿದ್ದ ಪದಚ್ಯುತಿ ನೋಟಿಸ್ನಲ್ಲಿ ತಾಂತ್ರಿಕ ದೋಷಗಳು ಪತ್ತೆಯಾಗಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ....








