ಗಂಗಾರತಿಯಂತೆ ದಕ್ಷಿಣದಲ್ಲಿ ತುಂಗಾರತಿ Saaksha Tv
ದಾವಣಗೇರಿ: ಕಾಶಿಯ ಗಂಗಾರತಿಯಂತೆ ದಕ್ಷಿಣ ಕಾಶಿಯಲ್ಲಿ ತುಂಗಾರತಿಯನ್ನು ಮಾಡಲು ಸರಕಾರ ಅನುಮೋದನೆ ನೀಡಿದೆ.
ಕಾಶಿಯಲ್ಲಿ ನಡೆಯುವ ಗಂಗಾರತಿಯು ಜಗತ್ ಪ್ರಸಿದ್ಧಿಯಾಗಿದೆ. ಇದನ್ನು ವೀಕ್ಷಿಸಲು ಅಸಂಖ್ಯ ಜನರು ಅಲ್ಲಿಗೆ ಬರುತ್ತಾರೆ. ಅದೇ ರೀತಿ ದಕ್ಷಣ ಕಾಶಿ ಎಂದೇ ಪ್ರಸಿದ್ದಿ ಪಡೆದ ತುಂಗಭದ್ರಾ ತಟದಲ್ಲಿ 108 ಆರತಿ ಮಂಟಪಗಳನ್ನು ನಿರ್ಮಿಸಲು ಸರಕಾರ 30 ಕೋಟಿ ಮಂಜೂರು ಮಾಡಿದೆ. ಈ ಯೋಜನೆಯ ನೀಲಿನಕ್ಷೆ ತಯಾರಾಗಿದ್ದು, ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಂಕು ಸ್ಥಾಪನೆ ಮಾಡಲಿದ್ದಾರೆ.
ಈ ಕಾಮಗಾರಿ ಪೂರ್ಣಗೊಂಡರೆ ಹರಿಹರದ ಗತವೈಭವವನ್ನು ಮರಳಿ ಪಡೆಯುವ ಹಾಗೂ ದೇಶದಲ್ಲೇ ಹಿಂದುಗಳ ಪ್ರಮುಖ ಯಾತ್ರಾ ಸ್ಥಳವನ್ನಾಗಿಸುವ ಗುರಿ ಹೊಂದಲಾಗಿದೆ. ಇದಕ್ಕೆ ಸರ್ಕಾರ ಈಗಾಗಲೇ 10 ಕೋಟಿ ಹಣವನ್ನ ಬಿಡುಗಡೆ ಮಾಡಿದ್ದು, ಈ ಯೋಜನೆ ಸಿದ್ಧವಾಗಲು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀ ಪ್ರಮುಖ ಪಾತ್ರವಹಿಸಿದ್ದಾರೆ.
ಈಗಾಗಲೇ ಈ ಯೋಜನೆಯ ಒಂದು ಭಾಗವಾದ 108 ತುಂಗಾಭದ್ರಾ ಆರತಿ ಮಂಟಪಗಳ ಶಿಲಾನ್ಯಾಸ ಕಾರ್ಯಕ್ರಮದ ಮಾಹಿತಿ ಹಾಗೂ ವಿಡಿಯೋವನ್ನು ಬಿಡುಗಡೆಗೊಳಿಸಲಾಗಿದೆ. ಉತ್ತರ ಪ್ರದೇಶ ಗಂಗಾ ನದಿ ತಟದಲ್ಲಿರುವ ರೀತಿಯಲ್ಲೇ ಈ ಯೋಜನೆ ರೂಪಗೊಳಿಸಲಾಗಿದೆ. ಹರಿಹರದ ರಾಘವೇಂದ್ರ ಮಠದ ಹಿಂಭಾಗ ಈ ಯೋಜನೆಗೆ ಸ್ಥಳ ನಿಗದಿ ಮಾಡಲಾಗಿದೆ.









