ಮದ್ವೆ ನಂತರ ಬೇರೆಯಾಗುವ ಭಯದಿಂದ ಆತ್ಮಹತ್ಯೆಗೆ ಶರಣಾದ ಅವಳಿ ಸಹೋದರಿಯರು
ಮಂಡ್ಯ : ಅಕ್ಕ ತಂಗಿ , ಅಣ್ಣ ತಮ್ಮ , ಅವಳಿ ಜವಳಿ ಸಹೋದರ, ಸಹೋದರಿಯರ ನಡುವೆ ಒಂದು ವಿಶೇಷವಾದ ಬಾಂಧವ್ಯ ಪ್ರೀತಿ ಇರುತ್ತೆ.. ಒಬ್ಬರನ್ನ ಒಬ್ಬರು ತೀರ ಹಚ್ಚಿಕೊಂಡಿರುತ್ತಾರೆ.. ಒಬ್ಬರನ್ನೊಬ್ಬರು ಬಿಟ್ಟಿರಲಾರದಷ್ಟು ಹಚ್ಚಿಕೊಂಡಿರುತ್ತಾರೆ..
ಆದ್ರೆ ಇದೇ ಪ್ರೀತಿ ಜೀವವನ್ನ ತ್ಯಾಗ ಮಾಡುವ ಮಟ್ಟಕ್ಕೆ ಹೋಗಿರುವ ಘಟನೆಯೊಂದು ಮಂಡ್ಯದಲ್ಲಿ ನಡೆದಿದೆ.. ಬೇರೆ ಬೇರೆ ಮನೆಗೆ ಮದುವೆ ಮಾಡಿಕೊಡಲು ಹೆತ್ತವರು ನಿರ್ಧರಿಸಿದ್ದರಿಂದ ಅವಳಿ ಸಹೋದರಿಯರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ದೀಪಿಕಾ (19) ಮತ್ತು ದಿವ್ಯ(19) ಆತ್ಮಹತ್ಯೆ ಮಾಡಿಕೊಂಡ ಅವಳಿ ಸಹೋದರಿಯರಾಗಿದ್ದಾರೆ. ಈ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಹುಣಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅಂತಿಮ ವರ್ಷದ ಡಿಪ್ಲೊಮಾ ಓದುತ್ತಿದ್ದ ದೀಪಿಕಾ ಹಾಗೂ ದಿವ್ಯಾ ಚಿಕ್ಕಂದಿನಿಂದಲೇ ಅನ್ಯೋನ್ಯತೆಯಿಂದ ಇದ್ದರು. ಆದರೆ ಇದೀಗ ತಮ್ಮನ್ನು ಬೇರೆ ಬೇರೆ ಕಡೆ ಮದುವೆ ಮಾಡಿಕೊಡುತ್ತಾರೆ.
ಇದರಿಂದ ಬೇರೆ ಬೇರೆಯಾಗುತ್ತೇವೆ. ಅಲ್ಲದೆ ಈ ಮೂಲಕ ನಮ್ಮ ಬಾಂಧವ್ಯ ಕೂಡ ಕೊನೆಯಾಗುತ್ತದೆ ಎಂದು ಮನನೊಂದು ದೀಪಿಕಾ ಹಾಗೂ ದಿವ್ಯಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯಲ್ಲಿನ ಬೇರೆ ಬೇರೆ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾರೆ. ಅರೆಕೆರೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.